Homeಚಳವಳಿಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ - ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್...

ಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ – ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗಡುವು

- Advertisement -
- Advertisement -

ಒಂದು ತಿಂಗಳಿನಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಸುಪ್ರೀಂ ಕೋರ್ಟ್ ಶನಿವಾರ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ರಜಾಕಾಲದ ಪೀಠವು ಪರಿಸ್ಥಿತಿ ಉಲ್ಬಣಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮತ್ತು ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡಲು ಕೋರ್ಟ್‌ ನೀಡಿದ್ದ ಈ ಹಿಂದಿನ ನಿರ್ದೇಶನಗಳನ್ನು ಅನುಸರಿಸದಿದ್ದಕ್ಕಾಗಿ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಉಪವಾಸ ನಿರತ ರೈತ ನಾಯಕ

ಈ ವೇಳೆ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದ ಪಂಜಾಬ್ ಸರ್ಕಾರ, ದಲ್ಲೆವಾಲ್ ಅವರನ್ನು ಸುತ್ತುವರಿದು ಅವರನ್ನು ಆಸ್ಪತ್ರೆಗೆ ಕರೆದೊಯ್ಯದಂತೆ ತಡೆದು ಪ್ರತಿಭಟನಾಕಾರು ಭಾರಿ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದೆ. ಅಷ್ಟೆ ಅಲ್ಲದೆ, ತಜ್ಞರ ತಂಡವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಪ್ರಯತ್ನಿಸಿದೆ ಎಂದು ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಸುಪ್ರೀಂಕೋರ್ಟ್‌ನ ಪೀಠಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು (ದಲ್ಲೆವಾಲ್) ಡ್ರಿಪ್ಸ್ ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಹಾಯವನ್ನು ನಿರಾಕರಿಸಿದ್ದಾರೆ. ಇದು ಚಳುವಳಿಯ ಕಾರಣವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ” ಎಂದು ಅವರು ತಿಳಿಸಿದರು. ಅಡ್ವೊಕೇಟ್ ಜನರಲ್ ಅವರ ಈ ಉತ್ತರಕ್ಕೆ ಕೆರಳಿದ ಕೋರ್ಟ್, ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪಂಜಾಬ್ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡಿಲ್ಲ ಎಂದು ದೂಷಿಸಿತು. ಉಪವಾಸ ನಿರತ ರೈತ ನಾಯಕ

ಅಷ್ಟೆ ಅಲ್ಲದೆ, ಮತ್ತು ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಡದ ರೈತ ಮುಖಂಡರು ಆತ್ಮಹತ್ಯೆಗೆ ಪ್ರಚೋದನೆಯ ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.

ಪರಿಸ್ಥಿತಿಯನ್ನು ಖಾತರಿಪಡಿಸಿದರೆ ಕೇಂದ್ರದಿಂದ ಯಾವುದೇ ರೀತಿಯ ಲಾಜಿಸ್ಟಿಕ್ಸ್ ಬೆಂಬಲವನ್ನು ಪಡೆಯಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೊತೆಗೆ, ದಲ್ಲೆವಾಲ್ ಅನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ನಿರ್ದೇಶನವನ್ನು ರಾಜ್ಯ ಸರ್ಕಾರವು ಅನುಸರಿಸಲಿದೆ ಎಂದು ಆಶಿಸುವುದಾಗಿ ಹೇಳಿದೆ.

ದಲ್ಲೆವಾಲ್ ಅವರು ಕೆಲವು ರೀತಿಯ “ಗುಂಪು ಒತ್ತಡ”ದಲ್ಲಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿಸದ ರೈತ ಮುಖಂಡರು ಅವರ ಹಿತೈಷಿಗಳಾಗಿ ಕಾಣುತ್ತಿಲ್ಲ ಎಂದು ಪೀಠ ಹೇಳಿದೆ. ಈ ರೈತರು ಅವರ ಜೀವದ ಬಗ್ಗೆ ಕಾಳಜಿ ಹೊಂದಿದ್ದಾರೆಯೇ ಅಥವಾ ಬೇರೆ ಏನನ್ನಾದರೂ ಬಯಸುತ್ತಿದ್ದಾರೆಯೆ? ಎಂದು ಕೇಳಿರುವ ಕೋರ್ಟ್, ಈ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ, ಆದರೆ ಪಂಜಾಬ್ ಸರ್ಕಾರವು ನಮ್ಮ ನಿರ್ದೇಶನಗಳನ್ನು ಅನುಸರಿಸುತ್ತದೆ ಎಂದು ಭಾವಿಸುತ್ತೇವೆ ಎಂದು ಹೇಳಿದೆ.

ಶುಕ್ರವಾರ, ದಲ್ಲೆವಾಲ್ ಅವರ ಸ್ಥಿತಿಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತು ಮತ್ತು ಅವರಿಗೆ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡುವಂತೆ ನಿರ್ದೇಶಿಸಿದ ಆದೇಶವನ್ನು ಪಾಲಿಸದಿದ್ದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ಮೇಲೆ ಪಂಜಾಬ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...