Homeಮುಖಪುಟಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

ಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

- Advertisement -
- Advertisement -

ಮಾನವೀಯತೆಯ ಅಸಾಧಾರಣ ಕಾರ್ಯವೊಂದರಲ್ಲಿ 27 ವರ್ಷದ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ತೀವ್ರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಹಿಂದೂ ಮಹಿಳೆ ಸಂಗೀತಾ ಘೋಷ್‌ಗಾಗಿ ರಂಜಾನ್ ಉಪವಾಸ ಆಚರಿಸುವಾಗ ರಕ್ತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಜವಾಹರಲಾಲ್ ನೆಹರು ಆಸ್ಪತ್ರೆಯಲ್ಲಿ ನಡೆದ ಈ ಘಟನೆಯು ಕೋಮು ವಿಭಜನೆಗಳು ಆಳವಾಗುತ್ತಿರುವ ಸಮಯದಲ್ಲಿ ಭರವಸೆಯ ಸಂಕೇತವಾಗಿದೆ.

ನಾಡಿಯಾ ಜಿಲ್ಲೆಯ ಮಜ್ದಿಯಾದ ಸಂಗೀತಾ ಘೋಷ್ 8 ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರ್ಚ್ 16ರಂದು ಅವರ ಆರೋಗ್ಯವು ಗಂಭೀರ ತಿರುವು ಪಡೆದುಕೊಂಡಿತು ಮತ್ತು ವೈದ್ಯರು ತುರ್ತಾಗಿ ರಕ್ತದಾನ ಮಾಡುವವರು ಬೇಕೆಂದು ಕೋರಿದರು. ಅವರ ಮಗ ಸಂಜು ಘೋಷ್ ಸಹಾಯಕ್ಕಾಗಿ ಸ್ಥಳೀಯ ಸ್ವಯಂಸೇವಕ ಗುಂಪು ತುರ್ತು ರಕ್ತ ಸೇವೆಯನ್ನು ಶೀಘ್ರವೇ ತಲುಪಿದರು. ನಿಯಮಿತ ದಾನಿ ನಸೀಮ್ ಮಲಿತಾ ಹಿಂಜರಿಕೆಯಿಲ್ಲದೆ ಕರೆಗೆ ಉತ್ತರಿಸಿದರು.

ಅವರ ಸ್ಥಿತಿಯ ಬಗ್ಗೆ ಕೇಳಿದಾಗ ನಾನು ಉಪವಾಸ ಮಾಡುತ್ತಿದ್ದೆ. ಆದರೆ ಒಂದು ಜೀವ ಉಳಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ತಕ್ಷಣವೇ ನಾನು ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದೆ ಎಂದು ನಸೀಮ್ ಹೇಳುತ್ತಾರೆ.

ನಸೀಮ್‌ಗೆ ಇದು ಒಂದು ದೊಡ್ಡ ಕಾರ್ಯವಾಗಿರಲಿಲ್ಲ. ವರ್ಷಗಳಲ್ಲಿ ಹಲವು ಭಾರೀ ಇತರರಿಗೆ ಸಹಾಯ ಮಾಡುವ ಅವರ ಕಾರ್ಯಗಳಲ್ಲಿ ಇದು ಒಂದು. “ನಾನು ಹಲವು ಬಾರಿ ರಕ್ತದಾನ ಮಾಡಿದ್ದೇನೆ. ಇದು ದೊಡ್ಡ ವಿಷಯವಲ್ಲ; ಇದು ನನ್ನ ಬಯಕೆ” ಎಂದು ನಸೀಮ್ ಹೇಳಿದ್ದಾರೆ.

ಘೋಷ್ ಕುಟುಂಬವು ನಸೀಮ್ ಅವರ ನಿಸ್ವಾರ್ಥತೆಯಿಂದ ಭಾವುಕವಾಯಿತು. “ನಾವು ಹತಾಶರಾಗಿದ್ದೆವು. ರಕ್ತ ಬ್ಯಾಂಕಿನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ” ಎಂದು ಸಂಜು ಹೇಳಿದರು. “ನಸೀಮ್ ಹಿಂಜರಿಯಲಿಲ್ಲ. ಅವರು ತಕ್ಷಣ ತಮ್ಮ ಸ್ನೇಹಿತರೊಂದಿಗೆ ಬಂದರು. ನನಗೆ ಯಾವುದೇ ಜೀವಗಳನ್ನು ಉಳಿಸುವುದೇ ಒಬ್ಬ ವ್ಯಕ್ತಿಗೆ ಶ್ರೇಷ್ಠ ಧರ್ಮ” ಎಂದು ಸಂಜು ಅಭಿಪ್ರಾಯಿಸಿದ್ದಾರೆ.

ಈ ಕಥೆ ತ್ವರಿತವಾಗಿ ಆನ್‌ಲೈನ್‌ನಲ್ಲಿ ಹರಡಿತು. ರಾಜಕಾರಣಿಗಳು ಮತ್ತು ನಾಗರಿಕರಿಂದ ಪ್ರಶಂಸೆ ಗಳಿಸಿತು. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಸರ್ನಾಟೆ ಟ್ವೀಟ್ ಮಾಡಿದ್ದಾರೆ, “ಈ ಧಾರ್ಮಿಕ ದ್ವೇಷದ ವಾತಾವರಣದಲ್ಲಿ ನಸೀಮ್ ಪ್ರೀತಿಯ ಶಕ್ತಿಯನ್ನು ತೋರಿಸಿದ್ದಾರೆ. ಇದು ನಾನು ನಂಬುವ ಭಾರತ.” ಎಂಬ ಸುಪ್ರಿಯಾ ಅವರ ಪ್ರತಿಕ್ರಿಯೆಯಿಂದ ವಿನಮ್ರರಾದ ನಸೀಮ್ ಫೇಸ್‌ಬುಕ್‌ನಲ್ಲಿ ಬೆಂಬಲದ ಸಂದೇಶಗಳನ್ನು ಹಂಚಿಕೊಂಡರು, “ಇತರರಿಗೆ ಸಹಾಯ ಮಾಡುವುದು ದೇವರಿಗೆ ಮಾಡುವ ಶ್ರೇಷ್ಠ ಸೇವೆ” ಎಂದು ಬರೆದುಕೊಂಡರು.

ಕಲ್ಯಾಣಿಯಲ್ಲಿ ಈಗ ಕಲಿಯುತ್ತಿರುವ ಮುರ್ಷಿದಾಬಾದ್ ನಿವಾಸಿ ನಸೀಮ್, ತಮ್ಮ ಇಂತಹ ಕೆಲಸವು ಇತರರಿಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತಿದ್ದಾರೆ. “ಜೀವಗಳು ಅಪಾಯದಲ್ಲಿರುವಾಗ ನಾವು ಅಡೆತಡೆಗಳನ್ನು ಮುರಿಯಬೇಕು” ಎಂದು ಅವರು ಹೇಳಿದ್ದಾರೆ.

ಬಾವಿ ಮೇಲೆ ಸಂಭಾಲ್ ಮಸೀದಿ ಸಮಿತಿಯ ಹಕ್ಕನ್ನು ತಿರಸ್ಕರಿಸಿದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...