Homeಮುಖಪುಟಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

ಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

- Advertisement -
- Advertisement -

ಮಾನವೀಯತೆಯ ಅಸಾಧಾರಣ ಕಾರ್ಯವೊಂದರಲ್ಲಿ 27 ವರ್ಷದ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ತೀವ್ರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಹಿಂದೂ ಮಹಿಳೆ ಸಂಗೀತಾ ಘೋಷ್‌ಗಾಗಿ ರಂಜಾನ್ ಉಪವಾಸ ಆಚರಿಸುವಾಗ ರಕ್ತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಜವಾಹರಲಾಲ್ ನೆಹರು ಆಸ್ಪತ್ರೆಯಲ್ಲಿ ನಡೆದ ಈ ಘಟನೆಯು ಕೋಮು ವಿಭಜನೆಗಳು ಆಳವಾಗುತ್ತಿರುವ ಸಮಯದಲ್ಲಿ ಭರವಸೆಯ ಸಂಕೇತವಾಗಿದೆ.

ನಾಡಿಯಾ ಜಿಲ್ಲೆಯ ಮಜ್ದಿಯಾದ ಸಂಗೀತಾ ಘೋಷ್ 8 ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರ್ಚ್ 16ರಂದು ಅವರ ಆರೋಗ್ಯವು ಗಂಭೀರ ತಿರುವು ಪಡೆದುಕೊಂಡಿತು ಮತ್ತು ವೈದ್ಯರು ತುರ್ತಾಗಿ ರಕ್ತದಾನ ಮಾಡುವವರು ಬೇಕೆಂದು ಕೋರಿದರು. ಅವರ ಮಗ ಸಂಜು ಘೋಷ್ ಸಹಾಯಕ್ಕಾಗಿ ಸ್ಥಳೀಯ ಸ್ವಯಂಸೇವಕ ಗುಂಪು ತುರ್ತು ರಕ್ತ ಸೇವೆಯನ್ನು ಶೀಘ್ರವೇ ತಲುಪಿದರು. ನಿಯಮಿತ ದಾನಿ ನಸೀಮ್ ಮಲಿತಾ ಹಿಂಜರಿಕೆಯಿಲ್ಲದೆ ಕರೆಗೆ ಉತ್ತರಿಸಿದರು.

ಅವರ ಸ್ಥಿತಿಯ ಬಗ್ಗೆ ಕೇಳಿದಾಗ ನಾನು ಉಪವಾಸ ಮಾಡುತ್ತಿದ್ದೆ. ಆದರೆ ಒಂದು ಜೀವ ಉಳಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ತಕ್ಷಣವೇ ನಾನು ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದೆ ಎಂದು ನಸೀಮ್ ಹೇಳುತ್ತಾರೆ.

ನಸೀಮ್‌ಗೆ ಇದು ಒಂದು ದೊಡ್ಡ ಕಾರ್ಯವಾಗಿರಲಿಲ್ಲ. ವರ್ಷಗಳಲ್ಲಿ ಹಲವು ಭಾರೀ ಇತರರಿಗೆ ಸಹಾಯ ಮಾಡುವ ಅವರ ಕಾರ್ಯಗಳಲ್ಲಿ ಇದು ಒಂದು. “ನಾನು ಹಲವು ಬಾರಿ ರಕ್ತದಾನ ಮಾಡಿದ್ದೇನೆ. ಇದು ದೊಡ್ಡ ವಿಷಯವಲ್ಲ; ಇದು ನನ್ನ ಬಯಕೆ” ಎಂದು ನಸೀಮ್ ಹೇಳಿದ್ದಾರೆ.

ಘೋಷ್ ಕುಟುಂಬವು ನಸೀಮ್ ಅವರ ನಿಸ್ವಾರ್ಥತೆಯಿಂದ ಭಾವುಕವಾಯಿತು. “ನಾವು ಹತಾಶರಾಗಿದ್ದೆವು. ರಕ್ತ ಬ್ಯಾಂಕಿನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ” ಎಂದು ಸಂಜು ಹೇಳಿದರು. “ನಸೀಮ್ ಹಿಂಜರಿಯಲಿಲ್ಲ. ಅವರು ತಕ್ಷಣ ತಮ್ಮ ಸ್ನೇಹಿತರೊಂದಿಗೆ ಬಂದರು. ನನಗೆ ಯಾವುದೇ ಜೀವಗಳನ್ನು ಉಳಿಸುವುದೇ ಒಬ್ಬ ವ್ಯಕ್ತಿಗೆ ಶ್ರೇಷ್ಠ ಧರ್ಮ” ಎಂದು ಸಂಜು ಅಭಿಪ್ರಾಯಿಸಿದ್ದಾರೆ.

ಈ ಕಥೆ ತ್ವರಿತವಾಗಿ ಆನ್‌ಲೈನ್‌ನಲ್ಲಿ ಹರಡಿತು. ರಾಜಕಾರಣಿಗಳು ಮತ್ತು ನಾಗರಿಕರಿಂದ ಪ್ರಶಂಸೆ ಗಳಿಸಿತು. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಸರ್ನಾಟೆ ಟ್ವೀಟ್ ಮಾಡಿದ್ದಾರೆ, “ಈ ಧಾರ್ಮಿಕ ದ್ವೇಷದ ವಾತಾವರಣದಲ್ಲಿ ನಸೀಮ್ ಪ್ರೀತಿಯ ಶಕ್ತಿಯನ್ನು ತೋರಿಸಿದ್ದಾರೆ. ಇದು ನಾನು ನಂಬುವ ಭಾರತ.” ಎಂಬ ಸುಪ್ರಿಯಾ ಅವರ ಪ್ರತಿಕ್ರಿಯೆಯಿಂದ ವಿನಮ್ರರಾದ ನಸೀಮ್ ಫೇಸ್‌ಬುಕ್‌ನಲ್ಲಿ ಬೆಂಬಲದ ಸಂದೇಶಗಳನ್ನು ಹಂಚಿಕೊಂಡರು, “ಇತರರಿಗೆ ಸಹಾಯ ಮಾಡುವುದು ದೇವರಿಗೆ ಮಾಡುವ ಶ್ರೇಷ್ಠ ಸೇವೆ” ಎಂದು ಬರೆದುಕೊಂಡರು.

ಕಲ್ಯಾಣಿಯಲ್ಲಿ ಈಗ ಕಲಿಯುತ್ತಿರುವ ಮುರ್ಷಿದಾಬಾದ್ ನಿವಾಸಿ ನಸೀಮ್, ತಮ್ಮ ಇಂತಹ ಕೆಲಸವು ಇತರರಿಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತಿದ್ದಾರೆ. “ಜೀವಗಳು ಅಪಾಯದಲ್ಲಿರುವಾಗ ನಾವು ಅಡೆತಡೆಗಳನ್ನು ಮುರಿಯಬೇಕು” ಎಂದು ಅವರು ಹೇಳಿದ್ದಾರೆ.

ಬಾವಿ ಮೇಲೆ ಸಂಭಾಲ್ ಮಸೀದಿ ಸಮಿತಿಯ ಹಕ್ಕನ್ನು ತಿರಸ್ಕರಿಸಿದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...