Homeಮುಖಪುಟಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

ಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

- Advertisement -
- Advertisement -

ಮಾನವೀಯತೆಯ ಅಸಾಧಾರಣ ಕಾರ್ಯವೊಂದರಲ್ಲಿ 27 ವರ್ಷದ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ತೀವ್ರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಹಿಂದೂ ಮಹಿಳೆ ಸಂಗೀತಾ ಘೋಷ್‌ಗಾಗಿ ರಂಜಾನ್ ಉಪವಾಸ ಆಚರಿಸುವಾಗ ರಕ್ತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಜವಾಹರಲಾಲ್ ನೆಹರು ಆಸ್ಪತ್ರೆಯಲ್ಲಿ ನಡೆದ ಈ ಘಟನೆಯು ಕೋಮು ವಿಭಜನೆಗಳು ಆಳವಾಗುತ್ತಿರುವ ಸಮಯದಲ್ಲಿ ಭರವಸೆಯ ಸಂಕೇತವಾಗಿದೆ.

ನಾಡಿಯಾ ಜಿಲ್ಲೆಯ ಮಜ್ದಿಯಾದ ಸಂಗೀತಾ ಘೋಷ್ 8 ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರ್ಚ್ 16ರಂದು ಅವರ ಆರೋಗ್ಯವು ಗಂಭೀರ ತಿರುವು ಪಡೆದುಕೊಂಡಿತು ಮತ್ತು ವೈದ್ಯರು ತುರ್ತಾಗಿ ರಕ್ತದಾನ ಮಾಡುವವರು ಬೇಕೆಂದು ಕೋರಿದರು. ಅವರ ಮಗ ಸಂಜು ಘೋಷ್ ಸಹಾಯಕ್ಕಾಗಿ ಸ್ಥಳೀಯ ಸ್ವಯಂಸೇವಕ ಗುಂಪು ತುರ್ತು ರಕ್ತ ಸೇವೆಯನ್ನು ಶೀಘ್ರವೇ ತಲುಪಿದರು. ನಿಯಮಿತ ದಾನಿ ನಸೀಮ್ ಮಲಿತಾ ಹಿಂಜರಿಕೆಯಿಲ್ಲದೆ ಕರೆಗೆ ಉತ್ತರಿಸಿದರು.

ಅವರ ಸ್ಥಿತಿಯ ಬಗ್ಗೆ ಕೇಳಿದಾಗ ನಾನು ಉಪವಾಸ ಮಾಡುತ್ತಿದ್ದೆ. ಆದರೆ ಒಂದು ಜೀವ ಉಳಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ತಕ್ಷಣವೇ ನಾನು ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದೆ ಎಂದು ನಸೀಮ್ ಹೇಳುತ್ತಾರೆ.

ನಸೀಮ್‌ಗೆ ಇದು ಒಂದು ದೊಡ್ಡ ಕಾರ್ಯವಾಗಿರಲಿಲ್ಲ. ವರ್ಷಗಳಲ್ಲಿ ಹಲವು ಭಾರೀ ಇತರರಿಗೆ ಸಹಾಯ ಮಾಡುವ ಅವರ ಕಾರ್ಯಗಳಲ್ಲಿ ಇದು ಒಂದು. “ನಾನು ಹಲವು ಬಾರಿ ರಕ್ತದಾನ ಮಾಡಿದ್ದೇನೆ. ಇದು ದೊಡ್ಡ ವಿಷಯವಲ್ಲ; ಇದು ನನ್ನ ಬಯಕೆ” ಎಂದು ನಸೀಮ್ ಹೇಳಿದ್ದಾರೆ.

ಘೋಷ್ ಕುಟುಂಬವು ನಸೀಮ್ ಅವರ ನಿಸ್ವಾರ್ಥತೆಯಿಂದ ಭಾವುಕವಾಯಿತು. “ನಾವು ಹತಾಶರಾಗಿದ್ದೆವು. ರಕ್ತ ಬ್ಯಾಂಕಿನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ” ಎಂದು ಸಂಜು ಹೇಳಿದರು. “ನಸೀಮ್ ಹಿಂಜರಿಯಲಿಲ್ಲ. ಅವರು ತಕ್ಷಣ ತಮ್ಮ ಸ್ನೇಹಿತರೊಂದಿಗೆ ಬಂದರು. ನನಗೆ ಯಾವುದೇ ಜೀವಗಳನ್ನು ಉಳಿಸುವುದೇ ಒಬ್ಬ ವ್ಯಕ್ತಿಗೆ ಶ್ರೇಷ್ಠ ಧರ್ಮ” ಎಂದು ಸಂಜು ಅಭಿಪ್ರಾಯಿಸಿದ್ದಾರೆ.

ಈ ಕಥೆ ತ್ವರಿತವಾಗಿ ಆನ್‌ಲೈನ್‌ನಲ್ಲಿ ಹರಡಿತು. ರಾಜಕಾರಣಿಗಳು ಮತ್ತು ನಾಗರಿಕರಿಂದ ಪ್ರಶಂಸೆ ಗಳಿಸಿತು. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಸರ್ನಾಟೆ ಟ್ವೀಟ್ ಮಾಡಿದ್ದಾರೆ, “ಈ ಧಾರ್ಮಿಕ ದ್ವೇಷದ ವಾತಾವರಣದಲ್ಲಿ ನಸೀಮ್ ಪ್ರೀತಿಯ ಶಕ್ತಿಯನ್ನು ತೋರಿಸಿದ್ದಾರೆ. ಇದು ನಾನು ನಂಬುವ ಭಾರತ.” ಎಂಬ ಸುಪ್ರಿಯಾ ಅವರ ಪ್ರತಿಕ್ರಿಯೆಯಿಂದ ವಿನಮ್ರರಾದ ನಸೀಮ್ ಫೇಸ್‌ಬುಕ್‌ನಲ್ಲಿ ಬೆಂಬಲದ ಸಂದೇಶಗಳನ್ನು ಹಂಚಿಕೊಂಡರು, “ಇತರರಿಗೆ ಸಹಾಯ ಮಾಡುವುದು ದೇವರಿಗೆ ಮಾಡುವ ಶ್ರೇಷ್ಠ ಸೇವೆ” ಎಂದು ಬರೆದುಕೊಂಡರು.

ಕಲ್ಯಾಣಿಯಲ್ಲಿ ಈಗ ಕಲಿಯುತ್ತಿರುವ ಮುರ್ಷಿದಾಬಾದ್ ನಿವಾಸಿ ನಸೀಮ್, ತಮ್ಮ ಇಂತಹ ಕೆಲಸವು ಇತರರಿಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತಿದ್ದಾರೆ. “ಜೀವಗಳು ಅಪಾಯದಲ್ಲಿರುವಾಗ ನಾವು ಅಡೆತಡೆಗಳನ್ನು ಮುರಿಯಬೇಕು” ಎಂದು ಅವರು ಹೇಳಿದ್ದಾರೆ.

ಬಾವಿ ಮೇಲೆ ಸಂಭಾಲ್ ಮಸೀದಿ ಸಮಿತಿಯ ಹಕ್ಕನ್ನು ತಿರಸ್ಕರಿಸಿದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...