Homeಮುಖಪುಟಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

ಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

- Advertisement -
- Advertisement -

ಮಾನವೀಯತೆಯ ಅಸಾಧಾರಣ ಕಾರ್ಯವೊಂದರಲ್ಲಿ 27 ವರ್ಷದ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ತೀವ್ರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಹಿಂದೂ ಮಹಿಳೆ ಸಂಗೀತಾ ಘೋಷ್‌ಗಾಗಿ ರಂಜಾನ್ ಉಪವಾಸ ಆಚರಿಸುವಾಗ ರಕ್ತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಜವಾಹರಲಾಲ್ ನೆಹರು ಆಸ್ಪತ್ರೆಯಲ್ಲಿ ನಡೆದ ಈ ಘಟನೆಯು ಕೋಮು ವಿಭಜನೆಗಳು ಆಳವಾಗುತ್ತಿರುವ ಸಮಯದಲ್ಲಿ ಭರವಸೆಯ ಸಂಕೇತವಾಗಿದೆ.

ನಾಡಿಯಾ ಜಿಲ್ಲೆಯ ಮಜ್ದಿಯಾದ ಸಂಗೀತಾ ಘೋಷ್ 8 ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರ್ಚ್ 16ರಂದು ಅವರ ಆರೋಗ್ಯವು ಗಂಭೀರ ತಿರುವು ಪಡೆದುಕೊಂಡಿತು ಮತ್ತು ವೈದ್ಯರು ತುರ್ತಾಗಿ ರಕ್ತದಾನ ಮಾಡುವವರು ಬೇಕೆಂದು ಕೋರಿದರು. ಅವರ ಮಗ ಸಂಜು ಘೋಷ್ ಸಹಾಯಕ್ಕಾಗಿ ಸ್ಥಳೀಯ ಸ್ವಯಂಸೇವಕ ಗುಂಪು ತುರ್ತು ರಕ್ತ ಸೇವೆಯನ್ನು ಶೀಘ್ರವೇ ತಲುಪಿದರು. ನಿಯಮಿತ ದಾನಿ ನಸೀಮ್ ಮಲಿತಾ ಹಿಂಜರಿಕೆಯಿಲ್ಲದೆ ಕರೆಗೆ ಉತ್ತರಿಸಿದರು.

ಅವರ ಸ್ಥಿತಿಯ ಬಗ್ಗೆ ಕೇಳಿದಾಗ ನಾನು ಉಪವಾಸ ಮಾಡುತ್ತಿದ್ದೆ. ಆದರೆ ಒಂದು ಜೀವ ಉಳಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ತಕ್ಷಣವೇ ನಾನು ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದೆ ಎಂದು ನಸೀಮ್ ಹೇಳುತ್ತಾರೆ.

ನಸೀಮ್‌ಗೆ ಇದು ಒಂದು ದೊಡ್ಡ ಕಾರ್ಯವಾಗಿರಲಿಲ್ಲ. ವರ್ಷಗಳಲ್ಲಿ ಹಲವು ಭಾರೀ ಇತರರಿಗೆ ಸಹಾಯ ಮಾಡುವ ಅವರ ಕಾರ್ಯಗಳಲ್ಲಿ ಇದು ಒಂದು. “ನಾನು ಹಲವು ಬಾರಿ ರಕ್ತದಾನ ಮಾಡಿದ್ದೇನೆ. ಇದು ದೊಡ್ಡ ವಿಷಯವಲ್ಲ; ಇದು ನನ್ನ ಬಯಕೆ” ಎಂದು ನಸೀಮ್ ಹೇಳಿದ್ದಾರೆ.

ಘೋಷ್ ಕುಟುಂಬವು ನಸೀಮ್ ಅವರ ನಿಸ್ವಾರ್ಥತೆಯಿಂದ ಭಾವುಕವಾಯಿತು. “ನಾವು ಹತಾಶರಾಗಿದ್ದೆವು. ರಕ್ತ ಬ್ಯಾಂಕಿನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ” ಎಂದು ಸಂಜು ಹೇಳಿದರು. “ನಸೀಮ್ ಹಿಂಜರಿಯಲಿಲ್ಲ. ಅವರು ತಕ್ಷಣ ತಮ್ಮ ಸ್ನೇಹಿತರೊಂದಿಗೆ ಬಂದರು. ನನಗೆ ಯಾವುದೇ ಜೀವಗಳನ್ನು ಉಳಿಸುವುದೇ ಒಬ್ಬ ವ್ಯಕ್ತಿಗೆ ಶ್ರೇಷ್ಠ ಧರ್ಮ” ಎಂದು ಸಂಜು ಅಭಿಪ್ರಾಯಿಸಿದ್ದಾರೆ.

ಈ ಕಥೆ ತ್ವರಿತವಾಗಿ ಆನ್‌ಲೈನ್‌ನಲ್ಲಿ ಹರಡಿತು. ರಾಜಕಾರಣಿಗಳು ಮತ್ತು ನಾಗರಿಕರಿಂದ ಪ್ರಶಂಸೆ ಗಳಿಸಿತು. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಸರ್ನಾಟೆ ಟ್ವೀಟ್ ಮಾಡಿದ್ದಾರೆ, “ಈ ಧಾರ್ಮಿಕ ದ್ವೇಷದ ವಾತಾವರಣದಲ್ಲಿ ನಸೀಮ್ ಪ್ರೀತಿಯ ಶಕ್ತಿಯನ್ನು ತೋರಿಸಿದ್ದಾರೆ. ಇದು ನಾನು ನಂಬುವ ಭಾರತ.” ಎಂಬ ಸುಪ್ರಿಯಾ ಅವರ ಪ್ರತಿಕ್ರಿಯೆಯಿಂದ ವಿನಮ್ರರಾದ ನಸೀಮ್ ಫೇಸ್‌ಬುಕ್‌ನಲ್ಲಿ ಬೆಂಬಲದ ಸಂದೇಶಗಳನ್ನು ಹಂಚಿಕೊಂಡರು, “ಇತರರಿಗೆ ಸಹಾಯ ಮಾಡುವುದು ದೇವರಿಗೆ ಮಾಡುವ ಶ್ರೇಷ್ಠ ಸೇವೆ” ಎಂದು ಬರೆದುಕೊಂಡರು.

ಕಲ್ಯಾಣಿಯಲ್ಲಿ ಈಗ ಕಲಿಯುತ್ತಿರುವ ಮುರ್ಷಿದಾಬಾದ್ ನಿವಾಸಿ ನಸೀಮ್, ತಮ್ಮ ಇಂತಹ ಕೆಲಸವು ಇತರರಿಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತಿದ್ದಾರೆ. “ಜೀವಗಳು ಅಪಾಯದಲ್ಲಿರುವಾಗ ನಾವು ಅಡೆತಡೆಗಳನ್ನು ಮುರಿಯಬೇಕು” ಎಂದು ಅವರು ಹೇಳಿದ್ದಾರೆ.

ಬಾವಿ ಮೇಲೆ ಸಂಭಾಲ್ ಮಸೀದಿ ಸಮಿತಿಯ ಹಕ್ಕನ್ನು ತಿರಸ್ಕರಿಸಿದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...