Homeಮುಖಪುಟಫಾಸ್ಟ್‌ಟ್ಯಾಗ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಫಾಸ್ಟ್‌ಟ್ಯಾಗ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳನ್ನು ದಾಟುವ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿ ಬಳಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಾರ್ಚ್ 13 ರಂದು ವಜಾಗೊಳಿಸಿತು. ಫೆಬ್ರವರಿ 15, 2021 ರಿಂದ ಜಾರಿಗೆ ಬರುವ ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳ ಮೇಲೆ ಡಬಲ್ ಟೋಲ್ ಶುಲ್ಕವನ್ನು ವಿಧಿಸುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೊರಡಿಸಿದ ಸುತ್ತೋಲೆಗಳನ್ನು ರದ್ದುಗೊಳಿಸುವಂತೆ ಅರ್ಜುನ್ ರಾಜು ಖಾನಾಪುರೆ ಎಂಬವರು ಸಲ್ಲಿಸಿದ ಪಿಐಎಲ್ ಕೋರಿತ್ತು. ಫಾಸ್ಟ್‌ಟ್ಯಾಗ್ ಕಡ್ಡಾಯ

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ಪೀಠವು ಇದು ನ್ಯಾಯಾಲಯಗಳು ಹಸ್ತಕ್ಷೇಪ ಮಾಡಲಾಗದ ನೀತಿ ನಿರ್ಧಾರವಾಗಿದೆ ಎಂದು ಹೇಳಿದೆ. “ಫಾಸ್ಟ್‌ಟ್ಯಾಗ್ ಪರಿಚಯವು ದಕ್ಷ ಮತ್ತು ಸುಗಮ ರಸ್ತೆ ಪ್ರಯಾಣವನ್ನು ಒದಗಿಸುವ ಗುರಿಯನ್ನು ಹೊಂದಿರುವ ನೀತಿ ನಿರ್ಧಾರವಾಗಿದೆ……. ನೀತಿ ನಿರ್ಧಾರಗಳು ಅನಿಯಂತ್ರಿತವಾಗಿದ್ದರೆ ಅಥವಾ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಮಾತ್ರ ನ್ಯಾಯಾಂಗ ಪರಿಶೀಲನೆಗೆ ಒಳಪಡಬಹುದು ಎಂಬುದು ಕಾನೂನಿನ ಸರಳ ನಿಲುವು” ಎಂದು ನ್ಯಾಯಾಲಯ ಹೇಳಿದೆ.

ಭಾರತದಲ್ಲಿನ ಸಾರ್ವಜನಿಕರಲ್ಲಿ ಹೆಚ್ಚಿನವರು ಅನಕ್ಷರಸ್ಥರು ಮತ್ತು ವ್ಯವಸ್ಥೆಗೆ ಅಗತ್ಯವಿರುವ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿರಬಹುದು. ಆದರೆ ಅವರು ಫಾಸ್ಟ್‌ಟ್ಯಾಗ್ ಅನ್ನು ನಿರ್ವಹಿಸಲು ಸಮರ್ಥರಲ್ಲ ಎಂಬ ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಫಾಸ್ಟ್‌ಟ್ಯಾಗ್ ಕಡ್ಡಾಯ

“ಪ್ರಸ್ತುತ, ಈ ದೇಶದಲ್ಲಿ, ವಿಶೇಷವಾಗಿ ಮುಂಬೈ, ಪುಣೆಯಂತಹ ನಗರಗಳಲ್ಲಿ ಮೊಬೈಲ್ ಫೋನ್ ಬಳಸದಿರುವ ವ್ಯಕ್ತಿಗಳು ವಿರಳವಾಗಿದ್ದಾರೆ. ಹಾಗೆಯೆ ಮೊಬೈಲ್‌ಗಳನ್ನು ಬಳಸಿದಾಗ, ಬಳಕೆದಾರರು ಅದರ ರೀಚಾರ್ಜ್ ಕಾರ್ಯವಿಧಾನದ ಬಗ್ಗೆಯೂ ಪರಿಚಿತರಾಗಿರುತ್ತಾರೆ. ಫಾಸ್ಟ್‌ಟ್ಯಾಗ್ ಅನ್ನು ಬಳಸಲು ವ್ಯಕ್ತಿಯು ಸಂಪೂರ್ಣವಾಗಿ ತಂತ್ರಜ್ಞಾನ-ಜ್ಞಾನಿಯಾಗಿರಬೇಕೆಂದು ನಿರೀಕ್ಷಿಸಲಾಗಿಲ್ಲವಾದರೂ, ಇದು ಸರಳವಾದ ಕಾರ್ಯವಿಧಾನವಾಗಿದ್ದು, ಇದನ್ನು ಆಫ್‌ಲೈನ್‌ನಲ್ಲಿಯೂ ಸಹ ಬಳಸಬಹುದು, ಫಾಸ್ಟ್‌ಟ್ಯಾಗ್ ಅನ್ನು ಪರಿಚಯಿಸುವ ಉದ್ದೇಶದ ಹಿನ್ನೆಲೆಯಲ್ಲಿ, ನೀತಿ ನಿರ್ಧಾರದಲ್ಲಿ ನಾವು ಹಸ್ತಕ್ಷೇಪ ಮಾಡಲು ಯಾವುದೇ ಸಕಾರಣವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಫಾಸ್ಟ್‌ಟ್ಯಾಗ್ ಒಂದು ಎಲೆಕ್ಟ್ರಾನಿಕ್ ಟೋಲ್ ಪಾವತಿ ವ್ಯವಸ್ಥೆಯಾಗಿದ್ದು, ಇದರಲ್ಲಿ ವಾಹನದ ವಿಂಡ್‌ಸ್ಕ್ರೀನ್‌ನಲ್ಲಿ ಎಲೆಕ್ಟ್ರಾನಿಕ್ ಟ್ಯಾಗ್ ಅನ್ನು ಅಂಟಿಸಲಾಗುತ್ತದೆ ಮತ್ತು ವಾಹನ ಮಾಲೀಕರ ಉಳಿತಾಯ ಖಾತೆಗೆ ಲಿಂಕ್ ಮಾಡಲಾಗುತ್ತದೆ. ಖಾತೆಯನ್ನು ಆನ್‌ಲೈನ್‌ನಲ್ಲಿ ರೀಚಾರ್ಜ್ ಮಾಡಬಹುದು ಮತ್ತು ಭೌತಿಕ ನಗದು ವಹಿವಾಟಿನ ಅಗತ್ಯವಿಲ್ಲದೆಯೇ ವಾಹನವನ್ನು ಟೋಲ್ ಪ್ಲಾಜಾಗಳ ಮೂಲಕ ಓಡಿಸಬಹುದಾಗಿದೆ. ಟೋಲ್ ಪ್ಲಾಜಾದಲ್ಲಿ ಫಾಸ್ಟ್‌ಟ್ಯಾಗ್ ಅನ್ನು ಪತ್ತೆಹಚ್ಚಲಾಗುತ್ತದೆ ಮತ್ತು ಟೋಲ್ ಮೊತ್ತವನ್ನು ವಾಹನ ಮಾಲೀಕರ ಖಾತೆಯಿಂದ ಕಡಿತಗೊಳಿಸಲಾಗುತ್ತದೆ.

ಫೆಬ್ರವರಿ 12 ಮತ್ತು 14 ರಂದು NHAI ಹೊರಡಿಸಿದ ಸುತ್ತೋಲೆಗಳನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಲಾದ PIL ಪ್ರಶ್ನಿಸಿತ್ತು. 2021 ರಲ್ಲಿ ಫಾಸ್ಟ್‌ಟ್ಯಾಗ್‌ಗಳಿಲ್ಲದ ವಾಹನಗಳು ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನು ಬಳಸುವಾಗ ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕೆಂದು ಆದೇಶಿಸಲಾಯಿತು. ನಗದು ಲೇನ್‌ಗಳನ್ನು ವಿಶೇಷ ಫಾಸ್ಟ್‌ಟ್ಯಾಗ್‌ ಲೇನ್‌ಗಳಾಗಿ ಪರಿವರ್ತಿಸುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತವಾಗಿದೆ ಎಂದು ಅರ್ಜಿದಾರ ಖಾನಪುರೆ ವಾದಿಸಿದರು. ಯಾಕೆಂದರೆ ಇದು ಪ್ರಯಾಣಿಕರಿಗೆ, ವಿಶೇಷವಾಗಿ ತಂತ್ರಜ್ಞಾನದ ಪರಿಚಯವಿಲ್ಲದವರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತದೆ ಎಂದು ಅವರು ವಾದಿಸಿದ್ದರು.

ಅನಕ್ಷರಸ್ಥ ವ್ಯಕ್ತಿಗಳು ಮತ್ತು ಬ್ಯಾಂಕ್ ಖಾತೆಗಳಿಲ್ಲದವರಿಗೆ ಇದು ಅಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದು, ಇದು ಸಂವಿಧಾನದ 19(1)(d) ವಿಧಿಯ ಅಡಿಯಲ್ಲಿ ಅವರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರ ಹೇಳಿದ್ದರು. ಸಾಕಷ್ಟು ತಾಂತ್ರಿಕ ಮೂಲಸೌಕರ್ಯವಿಲ್ಲದ ಕಾರಣ ಫಾಸ್ಟ್‌ಟ್ಯಾಗ್ ಅನುಷ್ಠಾನವು ದೋಷಪೂರಿತವಾಗಿದ್ದು, ಡಬಲ್ ಟೋಲ್ ಶುಲ್ಕವನ್ನು ವಿಧಿಸುವುದು ಅನಿಯಂತ್ರಿತ ದಂಡವಾಗಿದೆ ಎಂದು ಅವರು ವಾದಿಸಿದ್ದಾರೆ.

ಆದಾಗ್ಯೂ, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಆರ್‌ವಿ ಗೋವಿಲ್ಕರ್, ಫಾಸ್ಟ್‌ಟ್ಯಾಗ್‌ಗಳ ಬಳಕೆಯನ್ನು 2014 ರಿಂದ ಯೋಜಿಸಲಾಗಿದೆ ಎಂದು ವಿವರಿಸುತ್ತಾ, ನೀತಿಯನ್ನು ಸಮರ್ಥಿಸಿಕೊಂಡರು. ಫಾಸ್ಟ್‌ಟ್ಯಾಗ್‌ಗಳು ಸುಲಭವಾಗಿ ಲಭ್ಯವಿವೆ ಮತ್ತು ಯುಪಿಐ ಮತ್ತು ಪ್ರಿಪೇಯ್ಡ್ ವ್ಯಾಲೆಟ್‌ಗಳ ಮೂಲಕ ರೀಚಾರ್ಜ್ ಮಾಡುವಂತಹ ಅನುಕೂಲಗಳನ್ನು ನೀಡುತ್ತವೆ ಎಂದು ಅವರು ಎತ್ತಿ ತೋರಿಸಿದ್ದಾರೆ.

NHAI ಅನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಬೀರೇಂದ್ರ ಸರಾಫ್, ಈ ಕ್ರಮವು ಹೆಚ್ಚು ಪರಿಣಾಮಕಾರಿ ಟೋಲ್ ವ್ಯವಸ್ಥೆಯನ್ನು ಸೃಷ್ಟಿಸುವ ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಕಾರ್ಯತಂತ್ರದ ಭಾಗವಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ತನ್ನ ತೀರ್ಪಿನಲ್ಲಿ, FASTag ಅನ್ನು ಜಾರಿಗೆ ತರುವ ನಿರ್ಧಾರವು ದಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ನೀತಿ ನಿರ್ಧಾರವಾಗಿದೆ ಎಂದು ಒತ್ತಿಹೇಳಿದೆ.

“FASTag ಅಳವಡಿಸದ ವಾಹನದಿಂದ ಸಂಗ್ರಹಿಸಲಾದ ಮೊತ್ತವನ್ನು ದಂಡದ ಮೂಲಕ ಪಡೆಯಲಾಗುತ್ತದೆ ಎಂಬುದು ಅರ್ಜಿದಾರರ ತಪ್ಪು ಕಲ್ಪನೆ. ಡಬಲ್ ಟೋಲ್ ಶುಲ್ಕವು ದಂಡವಲ್ಲಮ, ಬದಲಾಗಿ ಅಗತ್ಯ ಟ್ಯಾಗ್ ಇಲ್ಲದೆ FASTag ಲೇನ್ ಬಳಸುವುದಕ್ಕಾಗಿ ಹಾಕುವ ಶುಲ್ಕವಾಗಿದೆ. FASTag ಬಳಕೆಯನ್ನು ಉತ್ತೇಜಿಸುವುದು, ಇಂಧನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಸಂಚಾರ ಹರಿವನ್ನು ಸುಲಭಗೊಳಿಸುವುದು ನೀತಿಯ ಉದ್ದೇಶವಾಗಿದೆ” ಎಂದು ನ್ಯಾಯಾಲಯ ವಿವರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಂಜಾನ್ ‘ಸೆಹ್ರಿ’ ಆಚರಿಸಲು ಕಾಯುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ: ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ರಂಜಾನ್ ‘ಸೆಹ್ರಿ’ ಆಚರಿಸಲು ಕಾಯುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ: ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...