Homeಮುಖಪುಟಪತ್ರಕರ್ತನ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ; ಸಹಾಯಕ್ಕೆ ಬಾರದ ಪೊಲೀಸರು

ಪತ್ರಕರ್ತನ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ; ಸಹಾಯಕ್ಕೆ ಬಾರದ ಪೊಲೀಸರು

- Advertisement -
- Advertisement -

ತಮಿಳುನಾಡಿನಲ್ಲಿ ಪತ್ರಕರ್ತರೊಬ್ಬರ ಮೇಲೆ ಬುಧವಾರ ರಾತ್ರಿ ಅಪರಿಚಿತರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಪ್ರಸ್ತುತ ಅವರು ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದಾರೆ.

ರಾಜ್ಯದ ತಿರುಪ್ಪೂರ್ ಜಿಲ್ಲೆಯ ಖಾಸಗಿ ವಾಹಿನಿಯ ಪತ್ರಕರ್ತ ನೇಸಾ ಪ್ರಭು ಅವರು ಅಕ್ರಮ ಮದ್ಯ ಮಾರಾಟ ಮತ್ತು ಅವ್ಯವಹಾರಗಳ ಬಗ್ಗೆ ವರದಿ ಮಾಡುತ್ತಿದ್ದರು ಎಂದು ಅವರ ಸಹೋದ್ಯೋಗಿಗಳು ಹೇಳಿದ್ದಾರೆ.

ಹಲ್ಲೆಗೂ ಮುನ್ನ ಅವರು ಪೊಲೀಸ್ ಕಂಟ್ರೋಲ್ ರೂಂಗೆ ಪದೇ ಪದೇ ಕರೆಗಳನ್ನು ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಬೈಕ್‌ಗಳಲ್ಲಿ ಬಂದಿರುವ ವ್ಯಕ್ತಿಗಳ ಗುಂಪೊಂದು ನನ್ನನ್ನು ಹಿಂಬಾಲಿಸುತ್ತಿದೆ ಎಂದು ಹೇಳಿದ ಅವರು, ಪೊಲೀಸರಲ್ಲಿ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಹತ್ತಿರದ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸುವಂತೆ ಹೇಳಿ ಸುಮ್ಮನಾಗಿದ್ದಾರೆ.

ದಾಳಿಯನ್ನು ಖಂಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ದಾಳಿಯ ಮೊದಲು ಪತ್ರಕರ್ತರು ಪದೇ ಪದೇ ಮನವಿ ಮಾಡಿದರೂ ನಿಷ್ಕ್ರಿಯತೆಗಾಗಿ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಅಮಾನತಿನಲ್ಲಿ ಇರಿಸಲು ಅವರು ಆದೇಶಿಸಿದರು.

ಪ್ರಭು ಅವರ ಚಿಕಿತ್ಸೆಗಾಗಿ ₹3 ಲಕ್ಷ ನೆರವು ಘೋಷಿಸಿದ ಸಿಎಂ, “ನನಗೆ ನೋವಾಗಿದೆ, ಈ ದಾಳಿಗೆ ಕಾರಣರಾದ ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಾರಣಾಂತಿಕ ದಾಳಿ ನಡೆಸಿರುವ ಗ್ಯಾಂಗ್ ಈ ಹಿಂದೆ ಅಂಗಡಿಯೊಂದರಲ್ಲಿ ತನ್ನ ಬಗ್ಗೆ ವಿಚಾರಿಸಿದೆ ಮತ್ತು ನನ್ನ ತಾಯಿ ಒಬ್ಬರೇ ಇದ್ದಾಗ ಕಾರಿನಲ್ಲಿ ಮನೆಗೆ ಭೇಟಿ ನೀಡಿದ್ದರು ಎಂದು ಪ್ರಭು ಆರೋಪಿಸಿದ್ದಾರೆ.

ಪ್ರಭು ಅವರು ತಮ್ಮ ರಕ್ಷಣೆಗಾಗಿ ತಂಡವನ್ನು ಕಳುಹಿಸುವಂತೆ ಪೊಲೀಸರಿಗೆ ಮನವಿ ಮಾಡುವುದನ್ನು ಕಾಲ್ ರೆಕಾರ್ಡಿಂಗ್ ನಲ್ಲಿ ದಾಖಲಾಗಿದೆ. ಒಂದು ಗುಂಪು ತನ್ನನ್ನು ಹಿಂಬಾಲಿಸುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ, ಔಪಚಾರಿಕವಾಗಿ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಖುದ್ದು ಭೇಟಿ ನೀಡುವಂತೆ ತಿಳಿಸಿದ್ದಾರೆ.

ರಾಜ್ಯದ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸಾಮಿ ಅವರು ದಾಳಿಯನ್ನು “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ” ಎಂದು ಆರೋಪಿಸಿದ್ದಾರೆ. “ದಾಳಿ ನಡೆಯುವ ನಾಲ್ಕು ಗಂಟೆಗಳ ಮೊದಲು ವರದಿಗಾರರು ಆತಂಕಕಾರಿ ಪರಿಸ್ಥಿತಿಯ ಬಗ್ಗೆ ವರದಿ ಮಾಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಚೆನ್ನೈನಲ್ಲಿ ಪತ್ರಕರ್ತರು ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟಿಸಿದ್ದಾರೆ. ಗಾಯಾಳು ಪತ್ರಕರ್ತರಿಗೆ ನ್ಯಾಯದ ಜೊತೆಗೆ, ಅವರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ; ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...