Homeಚಳವಳಿಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

- Advertisement -
- Advertisement -

ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಕೊರೊನಾದಂತಹ ಮಾರಣಾಂತಿಕ ಕಾಯಿಲೆಗಳು ಅಪ್ಪಳಿಸಿದರೂ ಸಹ ಜಾತಿ ಜಾತಿಗ್ರಸ್ಥರಾಗಿಯೇ ಉಳಿದಿರುವುದು ದುರಂತ. ಕ್ರೂರ ಜಾತೀಯತೆಯಲ್ಲಿ ನರಳುತ್ತಿರುವ ಜನರು ಮರ್ಯಾದೆ ಹೆಸರಿನಲ್ಲಿ ರಕ್ತಸಂಬಂಧಿಗಳನ್ನು ಹತ್ಯೆಗೈದು ಜೀವನಪೂರ್ತಿ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಅಂಥದ್ದೆ ದುರಂತವೊಂದು ಕರ್ನಾಟಕದಲ್ಲಿ ಮತ್ತೆ ಸಂಭವಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೇಮಿಸಿದ್ದ ಕಾರಣಕ್ಕೆ ಮಗಳನ್ನೇ ತಂದೆಯೇ ಮರ್ಯಾದಾಗೇಡು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬುಧವಾರ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಆರೋಪಿ ಚಂದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದವರಾಗಿದ್ದು ಆತನ ಮಗಳು ರಾಧಾ (18) ಹತ್ಯೆಯಾದ ದುರ್ದೈವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದ ಹೆಳವ ಸಮುದಾಯದ ರಾಧಾ ಮತ್ತು ಅದೇ ಊರಿನ ಗಂಗಾಮತಸ್ಥ ಸಮುದಾಯದ ಯುವಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಮನೆಯವರ ವಿರೋಧವಿತ್ತು. ಈ ವಿರೋಧದ ನಡುವೆಯೂ ಇಬ್ಬರು ಪ್ರೀತಿಸುತ್ತಿದ್ದರು. ಸ್ಥಳ ಬದಲಾವಣೆ ಮಾಡಿದರೆ ಮಗಳು ಯುವಕನನ್ನು ಮರೆಯಬಹುದು ಎಂದು ಚಂದ್ರಪ್ಪ ಅವರು ಮಗಳನ್ನು ಚನ್ನಗಿರಿ ತಾಲ್ಲೂಕಿನ ಮಲ್ಲಿಗೆರೆಯ ತನ್ನ ಸಹೋದರಿ ಶಾಂತಮ್ಮ ಅವರ ಮನೆಯಲ್ಲಿ ಇರಿಸಿದ್ದರು.

ಹಬ್ಬಕ್ಕೆ ಮಗಳನ್ನು ಮನೆಗೆ ಕರೆತರಲು ಚಂದ್ರಪ್ಪ ಬುಧವಾರ ಮಲ್ಲಿಗೆರೆಗೆ ಹೋಗಿದ್ದರು. ಮಗಳನ್ನು ಕರೆದುಕೊಂಡು ಬೈಕಿನಲ್ಲಿ ಚನ್ನಗಿರಿ-ಬೀರೂರು ಮಾರ್ಗದಲ್ಲಿ ಬರುವಾಗ, ಯುವಕನನ್ನು ಮರೆಯುವಂತೆ ಮಗಳಿಗೆ ಬುದ್ದಿವಾದ ಹೇಳಿದ್ದಾರೆ. ಪ್ರೇಮಿಸಿರುವ ಯುವಕನನ್ನೇ ವಿವಾಹವಾಗುವುದಾಗಿ ರಾಧಾ ವಾದ ಮಾಡಿದ್ದಾರೆ. ಕೋಪಗೊಂಡ ಚಂದ್ರಪ್ಪ ಬೀರೂರು ಹೊರವಲಯದ ರೈಲ್ವೆ ಗೇಟ್‌ ಬಳಿ ಜನಸಂಚಾರವಿಲ್ಲದ್ದನ್ನು ಗಮನಿಸಿ ಬೈಕ್‌ ನಿಲ್ಲಿಸಿ ಗೇಟ್‌ ಪಕ್ಕದ ಬಂಡಿ ಜಾಡಿನಲ್ಲಿ ಮಗಳ ತಲೆ ಮೇಲಿದ್ದ ಬಟ್ಟೆಯನ್ನೇ ಕುತ್ತಿಗೆಗೆ ಬಿಗಿದು, ಅಲ್ಲಿಯೇ ಇದ್ದ ಗುಂಡಿಯಲ್ಲಿ ಅದುಮಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ನಡೆದ ಘಟನೆಯನ್ನು ಫೋನ್‌ನಲ್ಲಿ ಕುಟುಂಬದವರಿಗೆ ತಿಳಿಸಿರುವ ಚಂದ್ರಪ್ಪ, ಘಟನೆ ನಂತರ ರಾತ್ರಿ 2.30ರ ಸುಮಾರಿಗೆ ಊರು ತಲುಪಿದ್ದಾರೆ. ಮಗಳನ್ನು ಕೊಲೆ ಮಾಡಿದ ತಾನೂ ಬದುಕಬಾರದು ಎಂದು ಅತ್ತಿದ್ದಾರೆ. ಇದನ್ನು ಕಂಡು ಮಗ ಪಕ್ಕದ ಮನೆಯ ಸಂಬಂಧಿಕರನ್ನು ಕರೆತಂದಿದ್ದಾರೆ. ಅವರ ಮುಂದೆ ಚಂದ್ರಪ್ಪ ಅವರು ನಡೆದ ಘಟನೆಯನ್ನು ವಿವರಿಸಿದ್ದಾರೆ. ತಕ್ಷಣವೇ ಮನೆಯವರು ಸಂಬಂಧಿಕರೊಂದಿಗೆ ಚಂದ್ರಪ್ಪನನ್ನು ಶಿಕಾರಿಪುರ ಠಾಣೆಗೆ ಕರೆದೊಯ್ದಿದ್ದಾರೆ. ಶರಣಾದ ನಂತರ ಅಲ್ಲಿನ ಪೊಲೀಸರು ಚಂದ್ರಪ್ಪನನ್ನು ಬೀರೂರು ಠಾಣೆಗೆ ಕಳಿಸಿದ್ದಾರೆ.

ಬೀರೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗದ ಪತ್ರಕರ್ತ, ಕವಿ ರವಿಕುಮಾರ್‌ ಟೆಲೆಕ್ಸ್‌, “ವಿದ್ಯಾವಂತರಾಗಿರುವ ನಾವು ಜಾತಿ ಸಮಾನತೆ ಬಗ್ಗೆ ಜಾಗೃತಿ ಮುಡಿಸಬೇಕಿದ್ದ ಕಾಲದಲ್ಲಿಯೂ ಜೀವ ಹತ್ಯೆ ಮಾಡುವಂತಹದ್ದು ನಮ್ಮ ಹಿಮ್ಮುಖ ನಡೆಯನ್ನು ತೋರಿಸುತ್ತದೆ. ಜೀವಕ್ಕಿಂತ ಜಾತಿ ಶ್ರೇಷ್ಠ, ಜಾತಿ ಆಧಾರಿತ ಮದುವೆ  ಶ್ರೇಷ್ಠ ಎಂಬ ಭ್ರಮೆಯಲ್ಲಿ ಈ ಸಮಾಜ ಬದುಕುತ್ತಿದೆ. ಅದರಿಂದ ಹೊರಗೆ ಬರಬೇಕು. ಜೀವವೂ ಅಮೂಲ್ಯ ಪ್ರೀತಿಯೂ ಅಮೂಲ್ಯ. ಯಾರನ್ನೂ ಕೊಲ್ಲುವಂತಹ ಹಕ್ಕು ನಮಗ್ಯಾರು ಕೊಟ್ಟಿಲ್ಲ. ಎಲ್ಲರಿಗೂ ಬದುಕಿನ ಹಕ್ಕಿದೆ. ಎಲ್ಲರಿಗೂ ಅವರದ್ದೇ ಆದಂತಹ ಹಕ್ಕುಗಳಿವೆ. ಸಮಾಜ ಅದನ್ನು ಗೌರವಿಸಬೇಕು. ಜೀವ ತೆಗೆಯುವುದೇ ಒಂದು ಮಾರ್ಗವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು ಖಂಡಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ಕಾರ್ಯದರ್ಶಿ ಮಲ್ಲಿಗೆಯವರು, ’ಮರ್ಯಾದಾಗೇಡು ಹತ್ಯೆಗಳು ಪದೇ ಪದೇ ಮರುಕಳಿಸುತ್ತಿರುವುದು ಆಘಾತಕಾರಿ ವಿಷಯ. ಇಂತಹ ಘಟನೆಗಳು ಸರಣಿ ರೂಪದಲ್ಲಿ ನಡೆಯುತ್ತಿರುವಾಗಲೂ ಇದರ ಬಗ್ಗೆ ಯೋಚಿಸಬೇಕು ಎಂದು ಆಡಳಿತಕ್ಕೆ ಏಕೆ ಅನಿಸುತ್ತಿಲ್ಲ ಎಂಬುದು ಬಹಳ ದೊಡ್ಡ ಆಶ್ಚರ್ಯ! ಬಹುಶಃ ಜನರ ಜೀವನ ಮತ್ತು ಇಂತಹ ಮೋಸಗಳಿಂದ ಜನರನ್ನು ಹೊರತರುವುದು ಈಗಿನ ಸರ್ಕಾರಕ್ಕೆ ಆದ್ಯತೆ ಅಲ್ಲದೇ ಇರಬಹುದು. ಮುಖ್ಯಮಂತ್ರಿಗಳ ಇತ್ತೀಚಿನ ಹೇಳಿಕೆಗಳನ್ನು ನೋಡಿದರೆ ಅವರು ಸಂವಿಧಾನಕ್ಕೆ ಬದ್ಧವಾಗಿ ಕೆಲಸ ಮಾಡುವುದಕ್ಕಿಂತ ಆರ್‌ಎಸ್‌ಎಸ್‌ ಅನ್ನು ಸಮರ್ಥಿಸುವಲ್ಲಿ ಹೆಚ್ಚಿನ ಸಮಯ ವ್ಯಯಿಸುತ್ತಿರುವಂತೆ ಕಾಣುತ್ತಿದೆ. ಇದು ಅಕ್ಷಮ್ಯ. ಆಡಳಿತ ನಡೆಸುವವರು ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕು. ಜಾತಿ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಕೊಲೆಗಳು ಸಂವಿಧಾನಕ್ಕೆ ವಿರುದ್ಧ ಎಂದು ಗೊತ್ತಿದ್ದ ಮೇಲೂ ಇದರ ಬಗ್ಗೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳದೇ ಇರುವುದು ಇಂತಹ ಕ್ರೌರ್ಯ ಹೆಚ್ಚಾಗಲು ಕಾರಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿರುವ ಅವರು ‘ಸರ್ಕಾರಗಳು ಈ ತಕ್ಷಣದಲ್ಲಿ ಮರ್ಯಾದಾಗೇಡು ಹತ್ಯೆಗಳ ವಿಚಾರವಾಗಿ ಪ್ರತ್ಯೇಕವಾದ ತನಿಖೆಯನ್ನು ನಡೆಸಬೇಕು. ಇಂತಹ ಘಟನೆಗಳ ತನಿಖೆ ನಡೆಸಲು ಒಂದು ವಿಶೇಷ ಸಮಿತಿಯನ್ನು ರಚಿಸಿಬೇಕು. ಈವರೆಗೆ ಇಂತಹ ಘಟನೆ ನಡೆದಿರುವಂತಹ ಎಲ್ಲಾ ಗ್ರಾಮಗಳ ನೊಂದಂತಹ ಕುಟುಂಬದವರೊಂದಿಗೆ ಚರ್ಚಿಸಿ ಅವರ ಹೇಳಿಕೆಗಳನ್ನು ಆಧರಿಸಿ ಸರಿಯಾದ ಮತ್ತು ದೂರಗಾಮಿಯಾದಂತಹ ಪರಿಹಾರೋಪಾಯವನ್ನು ರೂಪಿಸಬೇಕಾಗಿದಡೆ. ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಎಲ್ಲಾ ಸಮುದಾಯಗಳ ಮಠಾಧೀಶರು ಮತ್ತು ಧಾರ್ಮಿಕ ಮುಖಂಡರುಗಳು ಅವರು ಕೇವಲ ಧಾರ್ಮಿಕ ವಿಷಯಗಳಿಗಷ್ಟೆ ತಮ್ಮನ್ನು ತೊಡಗಿಸಿಕೊಳ್ಳುವುದಲ್ಲದೇ ಇಂತಹ ಕೃತ್ಯಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣದ ಕುರಿತು ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚೀಂದ್ರ ಅವರು, ’ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...