Homeಚಳವಳಿಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

- Advertisement -
- Advertisement -

ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಕೊರೊನಾದಂತಹ ಮಾರಣಾಂತಿಕ ಕಾಯಿಲೆಗಳು ಅಪ್ಪಳಿಸಿದರೂ ಸಹ ಜಾತಿ ಜಾತಿಗ್ರಸ್ಥರಾಗಿಯೇ ಉಳಿದಿರುವುದು ದುರಂತ. ಕ್ರೂರ ಜಾತೀಯತೆಯಲ್ಲಿ ನರಳುತ್ತಿರುವ ಜನರು ಮರ್ಯಾದೆ ಹೆಸರಿನಲ್ಲಿ ರಕ್ತಸಂಬಂಧಿಗಳನ್ನು ಹತ್ಯೆಗೈದು ಜೀವನಪೂರ್ತಿ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಅಂಥದ್ದೆ ದುರಂತವೊಂದು ಕರ್ನಾಟಕದಲ್ಲಿ ಮತ್ತೆ ಸಂಭವಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೇಮಿಸಿದ್ದ ಕಾರಣಕ್ಕೆ ಮಗಳನ್ನೇ ತಂದೆಯೇ ಮರ್ಯಾದಾಗೇಡು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬುಧವಾರ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಆರೋಪಿ ಚಂದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದವರಾಗಿದ್ದು ಆತನ ಮಗಳು ರಾಧಾ (18) ಹತ್ಯೆಯಾದ ದುರ್ದೈವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದ ಹೆಳವ ಸಮುದಾಯದ ರಾಧಾ ಮತ್ತು ಅದೇ ಊರಿನ ಗಂಗಾಮತಸ್ಥ ಸಮುದಾಯದ ಯುವಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಮನೆಯವರ ವಿರೋಧವಿತ್ತು. ಈ ವಿರೋಧದ ನಡುವೆಯೂ ಇಬ್ಬರು ಪ್ರೀತಿಸುತ್ತಿದ್ದರು. ಸ್ಥಳ ಬದಲಾವಣೆ ಮಾಡಿದರೆ ಮಗಳು ಯುವಕನನ್ನು ಮರೆಯಬಹುದು ಎಂದು ಚಂದ್ರಪ್ಪ ಅವರು ಮಗಳನ್ನು ಚನ್ನಗಿರಿ ತಾಲ್ಲೂಕಿನ ಮಲ್ಲಿಗೆರೆಯ ತನ್ನ ಸಹೋದರಿ ಶಾಂತಮ್ಮ ಅವರ ಮನೆಯಲ್ಲಿ ಇರಿಸಿದ್ದರು.

ಹಬ್ಬಕ್ಕೆ ಮಗಳನ್ನು ಮನೆಗೆ ಕರೆತರಲು ಚಂದ್ರಪ್ಪ ಬುಧವಾರ ಮಲ್ಲಿಗೆರೆಗೆ ಹೋಗಿದ್ದರು. ಮಗಳನ್ನು ಕರೆದುಕೊಂಡು ಬೈಕಿನಲ್ಲಿ ಚನ್ನಗಿರಿ-ಬೀರೂರು ಮಾರ್ಗದಲ್ಲಿ ಬರುವಾಗ, ಯುವಕನನ್ನು ಮರೆಯುವಂತೆ ಮಗಳಿಗೆ ಬುದ್ದಿವಾದ ಹೇಳಿದ್ದಾರೆ. ಪ್ರೇಮಿಸಿರುವ ಯುವಕನನ್ನೇ ವಿವಾಹವಾಗುವುದಾಗಿ ರಾಧಾ ವಾದ ಮಾಡಿದ್ದಾರೆ. ಕೋಪಗೊಂಡ ಚಂದ್ರಪ್ಪ ಬೀರೂರು ಹೊರವಲಯದ ರೈಲ್ವೆ ಗೇಟ್‌ ಬಳಿ ಜನಸಂಚಾರವಿಲ್ಲದ್ದನ್ನು ಗಮನಿಸಿ ಬೈಕ್‌ ನಿಲ್ಲಿಸಿ ಗೇಟ್‌ ಪಕ್ಕದ ಬಂಡಿ ಜಾಡಿನಲ್ಲಿ ಮಗಳ ತಲೆ ಮೇಲಿದ್ದ ಬಟ್ಟೆಯನ್ನೇ ಕುತ್ತಿಗೆಗೆ ಬಿಗಿದು, ಅಲ್ಲಿಯೇ ಇದ್ದ ಗುಂಡಿಯಲ್ಲಿ ಅದುಮಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ನಡೆದ ಘಟನೆಯನ್ನು ಫೋನ್‌ನಲ್ಲಿ ಕುಟುಂಬದವರಿಗೆ ತಿಳಿಸಿರುವ ಚಂದ್ರಪ್ಪ, ಘಟನೆ ನಂತರ ರಾತ್ರಿ 2.30ರ ಸುಮಾರಿಗೆ ಊರು ತಲುಪಿದ್ದಾರೆ. ಮಗಳನ್ನು ಕೊಲೆ ಮಾಡಿದ ತಾನೂ ಬದುಕಬಾರದು ಎಂದು ಅತ್ತಿದ್ದಾರೆ. ಇದನ್ನು ಕಂಡು ಮಗ ಪಕ್ಕದ ಮನೆಯ ಸಂಬಂಧಿಕರನ್ನು ಕರೆತಂದಿದ್ದಾರೆ. ಅವರ ಮುಂದೆ ಚಂದ್ರಪ್ಪ ಅವರು ನಡೆದ ಘಟನೆಯನ್ನು ವಿವರಿಸಿದ್ದಾರೆ. ತಕ್ಷಣವೇ ಮನೆಯವರು ಸಂಬಂಧಿಕರೊಂದಿಗೆ ಚಂದ್ರಪ್ಪನನ್ನು ಶಿಕಾರಿಪುರ ಠಾಣೆಗೆ ಕರೆದೊಯ್ದಿದ್ದಾರೆ. ಶರಣಾದ ನಂತರ ಅಲ್ಲಿನ ಪೊಲೀಸರು ಚಂದ್ರಪ್ಪನನ್ನು ಬೀರೂರು ಠಾಣೆಗೆ ಕಳಿಸಿದ್ದಾರೆ.

ಬೀರೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗದ ಪತ್ರಕರ್ತ, ಕವಿ ರವಿಕುಮಾರ್‌ ಟೆಲೆಕ್ಸ್‌, “ವಿದ್ಯಾವಂತರಾಗಿರುವ ನಾವು ಜಾತಿ ಸಮಾನತೆ ಬಗ್ಗೆ ಜಾಗೃತಿ ಮುಡಿಸಬೇಕಿದ್ದ ಕಾಲದಲ್ಲಿಯೂ ಜೀವ ಹತ್ಯೆ ಮಾಡುವಂತಹದ್ದು ನಮ್ಮ ಹಿಮ್ಮುಖ ನಡೆಯನ್ನು ತೋರಿಸುತ್ತದೆ. ಜೀವಕ್ಕಿಂತ ಜಾತಿ ಶ್ರೇಷ್ಠ, ಜಾತಿ ಆಧಾರಿತ ಮದುವೆ  ಶ್ರೇಷ್ಠ ಎಂಬ ಭ್ರಮೆಯಲ್ಲಿ ಈ ಸಮಾಜ ಬದುಕುತ್ತಿದೆ. ಅದರಿಂದ ಹೊರಗೆ ಬರಬೇಕು. ಜೀವವೂ ಅಮೂಲ್ಯ ಪ್ರೀತಿಯೂ ಅಮೂಲ್ಯ. ಯಾರನ್ನೂ ಕೊಲ್ಲುವಂತಹ ಹಕ್ಕು ನಮಗ್ಯಾರು ಕೊಟ್ಟಿಲ್ಲ. ಎಲ್ಲರಿಗೂ ಬದುಕಿನ ಹಕ್ಕಿದೆ. ಎಲ್ಲರಿಗೂ ಅವರದ್ದೇ ಆದಂತಹ ಹಕ್ಕುಗಳಿವೆ. ಸಮಾಜ ಅದನ್ನು ಗೌರವಿಸಬೇಕು. ಜೀವ ತೆಗೆಯುವುದೇ ಒಂದು ಮಾರ್ಗವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು ಖಂಡಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ಕಾರ್ಯದರ್ಶಿ ಮಲ್ಲಿಗೆಯವರು, ’ಮರ್ಯಾದಾಗೇಡು ಹತ್ಯೆಗಳು ಪದೇ ಪದೇ ಮರುಕಳಿಸುತ್ತಿರುವುದು ಆಘಾತಕಾರಿ ವಿಷಯ. ಇಂತಹ ಘಟನೆಗಳು ಸರಣಿ ರೂಪದಲ್ಲಿ ನಡೆಯುತ್ತಿರುವಾಗಲೂ ಇದರ ಬಗ್ಗೆ ಯೋಚಿಸಬೇಕು ಎಂದು ಆಡಳಿತಕ್ಕೆ ಏಕೆ ಅನಿಸುತ್ತಿಲ್ಲ ಎಂಬುದು ಬಹಳ ದೊಡ್ಡ ಆಶ್ಚರ್ಯ! ಬಹುಶಃ ಜನರ ಜೀವನ ಮತ್ತು ಇಂತಹ ಮೋಸಗಳಿಂದ ಜನರನ್ನು ಹೊರತರುವುದು ಈಗಿನ ಸರ್ಕಾರಕ್ಕೆ ಆದ್ಯತೆ ಅಲ್ಲದೇ ಇರಬಹುದು. ಮುಖ್ಯಮಂತ್ರಿಗಳ ಇತ್ತೀಚಿನ ಹೇಳಿಕೆಗಳನ್ನು ನೋಡಿದರೆ ಅವರು ಸಂವಿಧಾನಕ್ಕೆ ಬದ್ಧವಾಗಿ ಕೆಲಸ ಮಾಡುವುದಕ್ಕಿಂತ ಆರ್‌ಎಸ್‌ಎಸ್‌ ಅನ್ನು ಸಮರ್ಥಿಸುವಲ್ಲಿ ಹೆಚ್ಚಿನ ಸಮಯ ವ್ಯಯಿಸುತ್ತಿರುವಂತೆ ಕಾಣುತ್ತಿದೆ. ಇದು ಅಕ್ಷಮ್ಯ. ಆಡಳಿತ ನಡೆಸುವವರು ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕು. ಜಾತಿ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಕೊಲೆಗಳು ಸಂವಿಧಾನಕ್ಕೆ ವಿರುದ್ಧ ಎಂದು ಗೊತ್ತಿದ್ದ ಮೇಲೂ ಇದರ ಬಗ್ಗೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳದೇ ಇರುವುದು ಇಂತಹ ಕ್ರೌರ್ಯ ಹೆಚ್ಚಾಗಲು ಕಾರಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿರುವ ಅವರು ‘ಸರ್ಕಾರಗಳು ಈ ತಕ್ಷಣದಲ್ಲಿ ಮರ್ಯಾದಾಗೇಡು ಹತ್ಯೆಗಳ ವಿಚಾರವಾಗಿ ಪ್ರತ್ಯೇಕವಾದ ತನಿಖೆಯನ್ನು ನಡೆಸಬೇಕು. ಇಂತಹ ಘಟನೆಗಳ ತನಿಖೆ ನಡೆಸಲು ಒಂದು ವಿಶೇಷ ಸಮಿತಿಯನ್ನು ರಚಿಸಿಬೇಕು. ಈವರೆಗೆ ಇಂತಹ ಘಟನೆ ನಡೆದಿರುವಂತಹ ಎಲ್ಲಾ ಗ್ರಾಮಗಳ ನೊಂದಂತಹ ಕುಟುಂಬದವರೊಂದಿಗೆ ಚರ್ಚಿಸಿ ಅವರ ಹೇಳಿಕೆಗಳನ್ನು ಆಧರಿಸಿ ಸರಿಯಾದ ಮತ್ತು ದೂರಗಾಮಿಯಾದಂತಹ ಪರಿಹಾರೋಪಾಯವನ್ನು ರೂಪಿಸಬೇಕಾಗಿದಡೆ. ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಎಲ್ಲಾ ಸಮುದಾಯಗಳ ಮಠಾಧೀಶರು ಮತ್ತು ಧಾರ್ಮಿಕ ಮುಖಂಡರುಗಳು ಅವರು ಕೇವಲ ಧಾರ್ಮಿಕ ವಿಷಯಗಳಿಗಷ್ಟೆ ತಮ್ಮನ್ನು ತೊಡಗಿಸಿಕೊಳ್ಳುವುದಲ್ಲದೇ ಇಂತಹ ಕೃತ್ಯಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣದ ಕುರಿತು ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚೀಂದ್ರ ಅವರು, ’ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...