Homeಮುಖಪುಟಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

- Advertisement -
- Advertisement -

ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪೊಲೀಸ್ ಠಾಣೆಯಲ್ಲಿ 17 ವರ್ಷದ ಬಾಲಕನಿಗೆ ಪೊಲೀಸ್‌ ದೌರ್ಜನ್ಯ ಎಸಗಿರುವ ಬಗ್ಗೆ ಕುಟುಂಬ ಆರೋಪಿಸಿದ್ದು, ಬಾಲಕ 3 ತಿಂಗಳಿನಿಂದ ಹಾಸಿಗೆ ಪಾಲಾಗಿದ್ದಾನೆ.

ಪಾರ್ತಿಪನ್‌ ಎಂಬ 17ವರ್ಷದ ಬಾಲಕನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಆದರೆ ಘಟನೆ ನಡೆದು 20 ದಿನಗಳು ಕಳೆದರೂ ಪೊಲೀಸರು ಯಾಕೆ ಮಗನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ನಮಗೆ ತಿಳಿದಿಲ್ಲ. ಘಟನೆಯಿಂದ ಮಗನಿಗೆ ಆಘಾತವಾಗಿದೆ. ಇನ್ನೊಂದು ಮಗುವಿಗೆ ಹೀಗಾಗುವುದನ್ನು ನಾನು ಬಯಸುವುದಿಲ್ಲ. ಪೊಲೀಸರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪಾರ್ತಿಪನ್‌ ತಂದೆ ಮಧು ಹೇಳಿದ್ದಾರೆ.

ಪಾರ್ತಿಪನ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಪ್ರೇಮ್ಸನ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಿಜು ಕೆ ಥಾಮಸ್ ಅವರನ್ನು ನ.18ರಂದು ಅಮಾನತುಗೊಳಿಸಲಾಗಿದೆ.

ಅ.29ರಂದು ಬೆಳಿಗ್ಗೆ ಪಾರ್ಥಿಪನ್‌ ಎರ್ನಾಕುಲಂನ ಪೆರುಂಬವೂರ್‌ನಲ್ಲಿರುವ ತನ್ನ ಮನೆಯಿಂದ ಸ್ನೇಹಿತನನ್ನು ಭೇಟಿ ಮಾಡಲು ಕಾರಿನಲ್ಲಿ ಹೊರಟಿದ್ದ. ದಾರಿ ಮಧ್ಯೆ ವಾಹನ ತಪಾಸಣೆಯ ಭಾಗವಾಗಿ ಪೊಲೀಸರು ಆತನಿಗೆ ಹಿಡಿದಿದ್ದಾರೆ. ಪಾರ್ಥಿಪನ್ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲದ ಕಾರಣ ಭಯದಿಂದ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ಡ್ರಗ್ಸ್‌ ಸಾಗಾಟದ ಸಂಶಯದ ಮೇಲೆ ಠಾಣೆಗೆ ಕರೆದೊಯ್ದಿದ್ದಾರೆ ಮತ್ತು ಠಾಣೆಯಲ್ಲಿ ಆತನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಬಳಿಕ ನಡೆದ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದಾರೆ. ದೂರು ನೀಡಿದರೆ ಬೇರೆ ಕೇಸ್‌ನಲ್ಲಿ ಫಿಕ್ಸ್‌ ಮಾಡುವುದಾಗಿ ಪೊಲೀಸರು ಬೆದರಿಸಿದ್ದಾರೆ ಎಂದು ಮಧು ಆರೋಪಿಸಿದ್ದಾರೆ.

ಮಗನಿಗೆ ಪೊಲೀಸ್‌ ಠಾಣೆಯಿಂದ ಸಂಜೆ ಕರೆದುಕೊಂಡು ಬಂದಿದ್ದೇವೆ. ಈ ವೇಳೆ ಆತ ಗಂಭೀರವಾಗಿ ಗಾಯಗೊಂಡಿದ್ದ. ಪೊಲೀಸರ ಹಲ್ಲೆಯಿಂದ ಅವನಿಗೆ ಕಾರಿನಿಂದ ಇಳಿಯಲು ಸಾಧ್ಯವಾಗಲಿಲ್ಲ. ನಾವು ಪೆರುಂಬವೂರ್‌ನ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ವೈದ್ಯರು ಪರೀಕ್ಷಿಸಿ ಬೆನ್ನುಮೂಳೆಯ ಮೇಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಪರವಾನಗಿ ಇಲ್ಲದೆ ವಾಹನ ಓಡಿಸಿದ್ದಕ್ಕೆ ಪೊಲೀಸರು ದಂಡವನ್ನು ವಿಧಿಸಬಹುದು ಆದರೆ ಈ ರೀತಿ ಹಲ್ಲೆ ಮಾಡಿರುವುದು ಎಷ್ಟು ಸರಿ ಎಂದು ಮಧು ಪ್ರಶ್ನಿಸಿದ್ದಾರೆ.

ಪಾರ್ಥಿಪನ್ ಎರ್ನಾಕುಲಂನ ನೆಲ್ಲಿಕುಝಿಯಲ್ಲಿರುವ ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್‌ ಕಾಲೇಜಿನ ಮೊದಲ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಬೆನ್ನುಮೂಳೆಗೆ ಗಾಯವಾದ ಕಾರಣ ಆತನಿಗೆ ವೈದ್ಯರು 3 ತಿಂಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್‌ಗೆ ಸೂಚಿಸಿದ್ದಾರೆ. ಅವನಿಗೆ ಕ್ಲಾಸ್‌ಗೆ ಹೋಗಲು ಆಗುತ್ತಿಲ್ಲ. ಶಿಕ್ಷಕರೊಬ್ಬರು ಮನೆಗೆ ಬಂದು ಕೆಲವು ಪುಸ್ತಕಗಳನ್ನು ಕೊಟ್ಟಿದ್ದಾರೆ. ಆದರೆ ಈ ವರ್ಷ ಅಧ್ಯಯನವನ್ನು ಮುಂದುವರಿಸಬಹುದೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿಲ್ಲ ಮಧು ಹೇಳಿದ್ದಾರೆ.

ಪಾರ್ಥಿಪನ್ ವಿರುದ್ಧದ ಕಸ್ಟಡಿ ಹಿಂಸಾಚಾರದ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದು,  ಪರವಾನಗಿ ಇಲ್ಲದೆ ವಾಹನ ಚಲಾಯಿಸಿದ್ದರಿಂದ ಕೇವಲ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಕೊಟ್ಟಾಯಂ ಪೊಲೀಸ್ ಅಧೀಕ್ಷಕ ಕೆ. ಕಾರ್ತಿಕ್ ತನಿಖೆಗೆ ಆದೇಶಿಸಿದ್ದಾರೆ.

ಇದನ್ನು ಓದಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...