Homeಮುಖಪುಟಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

- Advertisement -
- Advertisement -

ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪೊಲೀಸ್ ಠಾಣೆಯಲ್ಲಿ 17 ವರ್ಷದ ಬಾಲಕನಿಗೆ ಪೊಲೀಸ್‌ ದೌರ್ಜನ್ಯ ಎಸಗಿರುವ ಬಗ್ಗೆ ಕುಟುಂಬ ಆರೋಪಿಸಿದ್ದು, ಬಾಲಕ 3 ತಿಂಗಳಿನಿಂದ ಹಾಸಿಗೆ ಪಾಲಾಗಿದ್ದಾನೆ.

ಪಾರ್ತಿಪನ್‌ ಎಂಬ 17ವರ್ಷದ ಬಾಲಕನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಆದರೆ ಘಟನೆ ನಡೆದು 20 ದಿನಗಳು ಕಳೆದರೂ ಪೊಲೀಸರು ಯಾಕೆ ಮಗನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ನಮಗೆ ತಿಳಿದಿಲ್ಲ. ಘಟನೆಯಿಂದ ಮಗನಿಗೆ ಆಘಾತವಾಗಿದೆ. ಇನ್ನೊಂದು ಮಗುವಿಗೆ ಹೀಗಾಗುವುದನ್ನು ನಾನು ಬಯಸುವುದಿಲ್ಲ. ಪೊಲೀಸರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪಾರ್ತಿಪನ್‌ ತಂದೆ ಮಧು ಹೇಳಿದ್ದಾರೆ.

ಪಾರ್ತಿಪನ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಪ್ರೇಮ್ಸನ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಿಜು ಕೆ ಥಾಮಸ್ ಅವರನ್ನು ನ.18ರಂದು ಅಮಾನತುಗೊಳಿಸಲಾಗಿದೆ.

ಅ.29ರಂದು ಬೆಳಿಗ್ಗೆ ಪಾರ್ಥಿಪನ್‌ ಎರ್ನಾಕುಲಂನ ಪೆರುಂಬವೂರ್‌ನಲ್ಲಿರುವ ತನ್ನ ಮನೆಯಿಂದ ಸ್ನೇಹಿತನನ್ನು ಭೇಟಿ ಮಾಡಲು ಕಾರಿನಲ್ಲಿ ಹೊರಟಿದ್ದ. ದಾರಿ ಮಧ್ಯೆ ವಾಹನ ತಪಾಸಣೆಯ ಭಾಗವಾಗಿ ಪೊಲೀಸರು ಆತನಿಗೆ ಹಿಡಿದಿದ್ದಾರೆ. ಪಾರ್ಥಿಪನ್ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲದ ಕಾರಣ ಭಯದಿಂದ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ಡ್ರಗ್ಸ್‌ ಸಾಗಾಟದ ಸಂಶಯದ ಮೇಲೆ ಠಾಣೆಗೆ ಕರೆದೊಯ್ದಿದ್ದಾರೆ ಮತ್ತು ಠಾಣೆಯಲ್ಲಿ ಆತನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಬಳಿಕ ನಡೆದ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದಾರೆ. ದೂರು ನೀಡಿದರೆ ಬೇರೆ ಕೇಸ್‌ನಲ್ಲಿ ಫಿಕ್ಸ್‌ ಮಾಡುವುದಾಗಿ ಪೊಲೀಸರು ಬೆದರಿಸಿದ್ದಾರೆ ಎಂದು ಮಧು ಆರೋಪಿಸಿದ್ದಾರೆ.

ಮಗನಿಗೆ ಪೊಲೀಸ್‌ ಠಾಣೆಯಿಂದ ಸಂಜೆ ಕರೆದುಕೊಂಡು ಬಂದಿದ್ದೇವೆ. ಈ ವೇಳೆ ಆತ ಗಂಭೀರವಾಗಿ ಗಾಯಗೊಂಡಿದ್ದ. ಪೊಲೀಸರ ಹಲ್ಲೆಯಿಂದ ಅವನಿಗೆ ಕಾರಿನಿಂದ ಇಳಿಯಲು ಸಾಧ್ಯವಾಗಲಿಲ್ಲ. ನಾವು ಪೆರುಂಬವೂರ್‌ನ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ವೈದ್ಯರು ಪರೀಕ್ಷಿಸಿ ಬೆನ್ನುಮೂಳೆಯ ಮೇಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಪರವಾನಗಿ ಇಲ್ಲದೆ ವಾಹನ ಓಡಿಸಿದ್ದಕ್ಕೆ ಪೊಲೀಸರು ದಂಡವನ್ನು ವಿಧಿಸಬಹುದು ಆದರೆ ಈ ರೀತಿ ಹಲ್ಲೆ ಮಾಡಿರುವುದು ಎಷ್ಟು ಸರಿ ಎಂದು ಮಧು ಪ್ರಶ್ನಿಸಿದ್ದಾರೆ.

ಪಾರ್ಥಿಪನ್ ಎರ್ನಾಕುಲಂನ ನೆಲ್ಲಿಕುಝಿಯಲ್ಲಿರುವ ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್‌ ಕಾಲೇಜಿನ ಮೊದಲ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಬೆನ್ನುಮೂಳೆಗೆ ಗಾಯವಾದ ಕಾರಣ ಆತನಿಗೆ ವೈದ್ಯರು 3 ತಿಂಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್‌ಗೆ ಸೂಚಿಸಿದ್ದಾರೆ. ಅವನಿಗೆ ಕ್ಲಾಸ್‌ಗೆ ಹೋಗಲು ಆಗುತ್ತಿಲ್ಲ. ಶಿಕ್ಷಕರೊಬ್ಬರು ಮನೆಗೆ ಬಂದು ಕೆಲವು ಪುಸ್ತಕಗಳನ್ನು ಕೊಟ್ಟಿದ್ದಾರೆ. ಆದರೆ ಈ ವರ್ಷ ಅಧ್ಯಯನವನ್ನು ಮುಂದುವರಿಸಬಹುದೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿಲ್ಲ ಮಧು ಹೇಳಿದ್ದಾರೆ.

ಪಾರ್ಥಿಪನ್ ವಿರುದ್ಧದ ಕಸ್ಟಡಿ ಹಿಂಸಾಚಾರದ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದು,  ಪರವಾನಗಿ ಇಲ್ಲದೆ ವಾಹನ ಚಲಾಯಿಸಿದ್ದರಿಂದ ಕೇವಲ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಕೊಟ್ಟಾಯಂ ಪೊಲೀಸ್ ಅಧೀಕ್ಷಕ ಕೆ. ಕಾರ್ತಿಕ್ ತನಿಖೆಗೆ ಆದೇಶಿಸಿದ್ದಾರೆ.

ಇದನ್ನು ಓದಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...