Homeಮುಖಪುಟಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

- Advertisement -
- Advertisement -

ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪೊಲೀಸ್ ಠಾಣೆಯಲ್ಲಿ 17 ವರ್ಷದ ಬಾಲಕನಿಗೆ ಪೊಲೀಸ್‌ ದೌರ್ಜನ್ಯ ಎಸಗಿರುವ ಬಗ್ಗೆ ಕುಟುಂಬ ಆರೋಪಿಸಿದ್ದು, ಬಾಲಕ 3 ತಿಂಗಳಿನಿಂದ ಹಾಸಿಗೆ ಪಾಲಾಗಿದ್ದಾನೆ.

ಪಾರ್ತಿಪನ್‌ ಎಂಬ 17ವರ್ಷದ ಬಾಲಕನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಆದರೆ ಘಟನೆ ನಡೆದು 20 ದಿನಗಳು ಕಳೆದರೂ ಪೊಲೀಸರು ಯಾಕೆ ಮಗನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ನಮಗೆ ತಿಳಿದಿಲ್ಲ. ಘಟನೆಯಿಂದ ಮಗನಿಗೆ ಆಘಾತವಾಗಿದೆ. ಇನ್ನೊಂದು ಮಗುವಿಗೆ ಹೀಗಾಗುವುದನ್ನು ನಾನು ಬಯಸುವುದಿಲ್ಲ. ಪೊಲೀಸರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪಾರ್ತಿಪನ್‌ ತಂದೆ ಮಧು ಹೇಳಿದ್ದಾರೆ.

ಪಾರ್ತಿಪನ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಪ್ರೇಮ್ಸನ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಿಜು ಕೆ ಥಾಮಸ್ ಅವರನ್ನು ನ.18ರಂದು ಅಮಾನತುಗೊಳಿಸಲಾಗಿದೆ.

ಅ.29ರಂದು ಬೆಳಿಗ್ಗೆ ಪಾರ್ಥಿಪನ್‌ ಎರ್ನಾಕುಲಂನ ಪೆರುಂಬವೂರ್‌ನಲ್ಲಿರುವ ತನ್ನ ಮನೆಯಿಂದ ಸ್ನೇಹಿತನನ್ನು ಭೇಟಿ ಮಾಡಲು ಕಾರಿನಲ್ಲಿ ಹೊರಟಿದ್ದ. ದಾರಿ ಮಧ್ಯೆ ವಾಹನ ತಪಾಸಣೆಯ ಭಾಗವಾಗಿ ಪೊಲೀಸರು ಆತನಿಗೆ ಹಿಡಿದಿದ್ದಾರೆ. ಪಾರ್ಥಿಪನ್ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲದ ಕಾರಣ ಭಯದಿಂದ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ಡ್ರಗ್ಸ್‌ ಸಾಗಾಟದ ಸಂಶಯದ ಮೇಲೆ ಠಾಣೆಗೆ ಕರೆದೊಯ್ದಿದ್ದಾರೆ ಮತ್ತು ಠಾಣೆಯಲ್ಲಿ ಆತನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಬಳಿಕ ನಡೆದ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದಾರೆ. ದೂರು ನೀಡಿದರೆ ಬೇರೆ ಕೇಸ್‌ನಲ್ಲಿ ಫಿಕ್ಸ್‌ ಮಾಡುವುದಾಗಿ ಪೊಲೀಸರು ಬೆದರಿಸಿದ್ದಾರೆ ಎಂದು ಮಧು ಆರೋಪಿಸಿದ್ದಾರೆ.

ಮಗನಿಗೆ ಪೊಲೀಸ್‌ ಠಾಣೆಯಿಂದ ಸಂಜೆ ಕರೆದುಕೊಂಡು ಬಂದಿದ್ದೇವೆ. ಈ ವೇಳೆ ಆತ ಗಂಭೀರವಾಗಿ ಗಾಯಗೊಂಡಿದ್ದ. ಪೊಲೀಸರ ಹಲ್ಲೆಯಿಂದ ಅವನಿಗೆ ಕಾರಿನಿಂದ ಇಳಿಯಲು ಸಾಧ್ಯವಾಗಲಿಲ್ಲ. ನಾವು ಪೆರುಂಬವೂರ್‌ನ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ವೈದ್ಯರು ಪರೀಕ್ಷಿಸಿ ಬೆನ್ನುಮೂಳೆಯ ಮೇಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಪರವಾನಗಿ ಇಲ್ಲದೆ ವಾಹನ ಓಡಿಸಿದ್ದಕ್ಕೆ ಪೊಲೀಸರು ದಂಡವನ್ನು ವಿಧಿಸಬಹುದು ಆದರೆ ಈ ರೀತಿ ಹಲ್ಲೆ ಮಾಡಿರುವುದು ಎಷ್ಟು ಸರಿ ಎಂದು ಮಧು ಪ್ರಶ್ನಿಸಿದ್ದಾರೆ.

ಪಾರ್ಥಿಪನ್ ಎರ್ನಾಕುಲಂನ ನೆಲ್ಲಿಕುಝಿಯಲ್ಲಿರುವ ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್‌ ಕಾಲೇಜಿನ ಮೊದಲ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಬೆನ್ನುಮೂಳೆಗೆ ಗಾಯವಾದ ಕಾರಣ ಆತನಿಗೆ ವೈದ್ಯರು 3 ತಿಂಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್‌ಗೆ ಸೂಚಿಸಿದ್ದಾರೆ. ಅವನಿಗೆ ಕ್ಲಾಸ್‌ಗೆ ಹೋಗಲು ಆಗುತ್ತಿಲ್ಲ. ಶಿಕ್ಷಕರೊಬ್ಬರು ಮನೆಗೆ ಬಂದು ಕೆಲವು ಪುಸ್ತಕಗಳನ್ನು ಕೊಟ್ಟಿದ್ದಾರೆ. ಆದರೆ ಈ ವರ್ಷ ಅಧ್ಯಯನವನ್ನು ಮುಂದುವರಿಸಬಹುದೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿಲ್ಲ ಮಧು ಹೇಳಿದ್ದಾರೆ.

ಪಾರ್ಥಿಪನ್ ವಿರುದ್ಧದ ಕಸ್ಟಡಿ ಹಿಂಸಾಚಾರದ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದು,  ಪರವಾನಗಿ ಇಲ್ಲದೆ ವಾಹನ ಚಲಾಯಿಸಿದ್ದರಿಂದ ಕೇವಲ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಕೊಟ್ಟಾಯಂ ಪೊಲೀಸ್ ಅಧೀಕ್ಷಕ ಕೆ. ಕಾರ್ತಿಕ್ ತನಿಖೆಗೆ ಆದೇಶಿಸಿದ್ದಾರೆ.

ಇದನ್ನು ಓದಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...