Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...