Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...