Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...