Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....