Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...