Homeಮುಖಪುಟ'ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ': ಚೀನಾ ವಿಜ್ಞಾನಿ

‘ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ’: ಚೀನಾ ವಿಜ್ಞಾನಿ

- Advertisement -
- Advertisement -

ಭಾರತ ಚಂದ್ರನ ಅಂಗಳದಲ್ಲಿ ಇಳಿದಿದೆ ಎಂದು ಇಸ್ರೋದ ಸಾಧನೆಯನ್ನು ಅತಿಯಾಗಿ ಬಿಂಬಿಸಲಾಗಿದೆ ಎಂದು ಚೀನಾದ ಚಂದ್ರನ ಪರಿಶೋಧನಾ ಯೋಜನೆಯ ಪಿತಾಮಹ ಎಂದು ಕರೆಯಲ್ಪಡುವ ಚೀನಾದ ವಿಜ್ಞಾನಿ ಓಯಾಂಗ್ ಜಿಯುವಾನ್ ಹೇಳಿದ್ದಾರೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ-3 ತನ್ನ ಪ್ರಯಾಣವನ್ನು ಪ್ರಾರಂಭಿಸಿ, ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯಿತು. 69 ಡಿಗ್ರಿ ದಕ್ಷಿಣ ಅಕ್ಷಾಂಶದಲ್ಲಿರುವ ಲ್ಯಾಂಡಿಂಗ್ ಸೈಟ್ ದಕ್ಷಿಣ ಧ್ರುವದ ಬಳಿ ಇಲ್ಲ ಎಂದು ವಿಜ್ಞಾನಿ ಹೇಳಿರುವುದಾಗಿ ಚೀನೀ ಭಾಷೆಯ ಪತ್ರಿಕೆ ಸೈನ್ಸ್ ಟೈಮ್ಸ್‌ ವರದಿ ಮಾಡಿದೆ.

ಬ್ಲೂಮ್‌ಬರ್ಗ್‌ನಲ್ಲಿನ ವರದಿಯ ಪ್ರಕಾರ, ಭೂಮಿಯ ಮೇಲೆ 69 ಡಿಗ್ರಿ ದಕ್ಷಿಣವು ಅಂಟಾರ್ಕ್ಟಿಕ್ ವೃತ್ತದೊಳಗೆ ಇರುತ್ತದೆ, ಆದರೆ ಚಂದ್ರನ ಮೇಲ್ಮೈಯಲ್ಲಿರುವ ವೃತ್ತವು ಧ್ರುವಕ್ಕೆ ಹೆಚ್ಚು ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ -3ರ ಲ್ಯಾಂಡಿಂಗ್ ಸೈಟ್ ಇಲ್ಲ, ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಸಮೀಪದಲ್ಲಿಲ್ಲ ಎಂದು ಜಿಯುವಾನ್ ಹೇಳಿದ್ದಾರೆ.

”ಚಂದ್ರಯಾನ-3 ಲ್ಯಾಂಡಿಂಗ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದೆ ಎನ್ನುವುದು ‘ತಪ್ಪು’,  ಧ್ರುವ ಪ್ರದೇಶದಿಂದ 619 ಕಿಮೀ ದೂರದಲ್ಲಿದೆ” ಎಂದು ಅವರು ಹೇಳಿದರು.

ಚಂದ್ರಯಾನ-3ರ ಸಾಧನೆಗಳನ್ನು ಪ್ರಶ್ನಿಸಿದ್ದು, ಚೀನಾದ ವಿಜ್ಞಾನಿ ಜಿಯುವಾನ್ ಮೊದಲೇನಲ್ಲ.. ಈ ಹಿಂದೆ ಬೀಜಿಂಗ್ ಮೂಲದ ಬಾಹ್ಯಾಕಾಶ ತಜ್ಞ ಪಾಂಗ್ ಝಿಹಾವೊ ಅವರು ಗ್ಲೋಬಲ್ ಟೈಮ್ಸ್‌ಗೆ ಚೀನಾ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಮುಂದುವರಿದಿದೆ ಎಂದು ಹೇಳಿದ್ದರು.

2010ರಲ್ಲಿ ಚಾಂಗ್ಇ-2 ಅನ್ನು ಉಡಾವಣೆ ಮಾಡಿದ ನಂತರ ಚೀನಾವು ನೇರವಾಗಿ ಆರ್ಬಿಟರ್‌ಗಳು ಮತ್ತು ಲ್ಯಾಂಡರ್‌ಗಳನ್ನು ಭೂಮಿ-ಚಂದ್ರ ವರ್ಗಾವಣೆ ಕಕ್ಷೆಗೆ ಕಳುಹಿಸಬಹುದು. ಭಾರತ ತನ್ನ ಉಡಾವಣಾ ವಾಹನಗಳ ಸೀಮಿತ ಸಾಮರ್ಥ್ಯವನ್ನು ಪರಿಗಣಿಸಿ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಚೀನಾ ಬಳಸುವ ಎಂಜಿನ್ ಕೂಡ ಬಹಳ ಮುಂದುವರಿದಿದೆ. ಅದರ ಲೂನಾರ್ ರೋವರ್ ತುಂಬಾ ದೊಡ್ಡದಾಗಿದೆ ಎಂದು ಪಾಂಗ್ ಹೇಳಿದ್ದರು.

ಇದನ್ನೂ ಓದಿ: ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...