Homeಮುಖಪುಟ'ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ': ಚೀನಾ ವಿಜ್ಞಾನಿ

‘ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ’: ಚೀನಾ ವಿಜ್ಞಾನಿ

- Advertisement -
- Advertisement -

ಭಾರತ ಚಂದ್ರನ ಅಂಗಳದಲ್ಲಿ ಇಳಿದಿದೆ ಎಂದು ಇಸ್ರೋದ ಸಾಧನೆಯನ್ನು ಅತಿಯಾಗಿ ಬಿಂಬಿಸಲಾಗಿದೆ ಎಂದು ಚೀನಾದ ಚಂದ್ರನ ಪರಿಶೋಧನಾ ಯೋಜನೆಯ ಪಿತಾಮಹ ಎಂದು ಕರೆಯಲ್ಪಡುವ ಚೀನಾದ ವಿಜ್ಞಾನಿ ಓಯಾಂಗ್ ಜಿಯುವಾನ್ ಹೇಳಿದ್ದಾರೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ-3 ತನ್ನ ಪ್ರಯಾಣವನ್ನು ಪ್ರಾರಂಭಿಸಿ, ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯಿತು. 69 ಡಿಗ್ರಿ ದಕ್ಷಿಣ ಅಕ್ಷಾಂಶದಲ್ಲಿರುವ ಲ್ಯಾಂಡಿಂಗ್ ಸೈಟ್ ದಕ್ಷಿಣ ಧ್ರುವದ ಬಳಿ ಇಲ್ಲ ಎಂದು ವಿಜ್ಞಾನಿ ಹೇಳಿರುವುದಾಗಿ ಚೀನೀ ಭಾಷೆಯ ಪತ್ರಿಕೆ ಸೈನ್ಸ್ ಟೈಮ್ಸ್‌ ವರದಿ ಮಾಡಿದೆ.

ಬ್ಲೂಮ್‌ಬರ್ಗ್‌ನಲ್ಲಿನ ವರದಿಯ ಪ್ರಕಾರ, ಭೂಮಿಯ ಮೇಲೆ 69 ಡಿಗ್ರಿ ದಕ್ಷಿಣವು ಅಂಟಾರ್ಕ್ಟಿಕ್ ವೃತ್ತದೊಳಗೆ ಇರುತ್ತದೆ, ಆದರೆ ಚಂದ್ರನ ಮೇಲ್ಮೈಯಲ್ಲಿರುವ ವೃತ್ತವು ಧ್ರುವಕ್ಕೆ ಹೆಚ್ಚು ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ -3ರ ಲ್ಯಾಂಡಿಂಗ್ ಸೈಟ್ ಇಲ್ಲ, ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಸಮೀಪದಲ್ಲಿಲ್ಲ ಎಂದು ಜಿಯುವಾನ್ ಹೇಳಿದ್ದಾರೆ.

”ಚಂದ್ರಯಾನ-3 ಲ್ಯಾಂಡಿಂಗ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದೆ ಎನ್ನುವುದು ‘ತಪ್ಪು’,  ಧ್ರುವ ಪ್ರದೇಶದಿಂದ 619 ಕಿಮೀ ದೂರದಲ್ಲಿದೆ” ಎಂದು ಅವರು ಹೇಳಿದರು.

ಚಂದ್ರಯಾನ-3ರ ಸಾಧನೆಗಳನ್ನು ಪ್ರಶ್ನಿಸಿದ್ದು, ಚೀನಾದ ವಿಜ್ಞಾನಿ ಜಿಯುವಾನ್ ಮೊದಲೇನಲ್ಲ.. ಈ ಹಿಂದೆ ಬೀಜಿಂಗ್ ಮೂಲದ ಬಾಹ್ಯಾಕಾಶ ತಜ್ಞ ಪಾಂಗ್ ಝಿಹಾವೊ ಅವರು ಗ್ಲೋಬಲ್ ಟೈಮ್ಸ್‌ಗೆ ಚೀನಾ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಮುಂದುವರಿದಿದೆ ಎಂದು ಹೇಳಿದ್ದರು.

2010ರಲ್ಲಿ ಚಾಂಗ್ಇ-2 ಅನ್ನು ಉಡಾವಣೆ ಮಾಡಿದ ನಂತರ ಚೀನಾವು ನೇರವಾಗಿ ಆರ್ಬಿಟರ್‌ಗಳು ಮತ್ತು ಲ್ಯಾಂಡರ್‌ಗಳನ್ನು ಭೂಮಿ-ಚಂದ್ರ ವರ್ಗಾವಣೆ ಕಕ್ಷೆಗೆ ಕಳುಹಿಸಬಹುದು. ಭಾರತ ತನ್ನ ಉಡಾವಣಾ ವಾಹನಗಳ ಸೀಮಿತ ಸಾಮರ್ಥ್ಯವನ್ನು ಪರಿಗಣಿಸಿ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಚೀನಾ ಬಳಸುವ ಎಂಜಿನ್ ಕೂಡ ಬಹಳ ಮುಂದುವರಿದಿದೆ. ಅದರ ಲೂನಾರ್ ರೋವರ್ ತುಂಬಾ ದೊಡ್ಡದಾಗಿದೆ ಎಂದು ಪಾಂಗ್ ಹೇಳಿದ್ದರು.

ಇದನ್ನೂ ಓದಿ: ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...