Homeಮುಖಪುಟ'ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ': ಚೀನಾ ವಿಜ್ಞಾನಿ

‘ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ’: ಚೀನಾ ವಿಜ್ಞಾನಿ

- Advertisement -
- Advertisement -

ಭಾರತ ಚಂದ್ರನ ಅಂಗಳದಲ್ಲಿ ಇಳಿದಿದೆ ಎಂದು ಇಸ್ರೋದ ಸಾಧನೆಯನ್ನು ಅತಿಯಾಗಿ ಬಿಂಬಿಸಲಾಗಿದೆ ಎಂದು ಚೀನಾದ ಚಂದ್ರನ ಪರಿಶೋಧನಾ ಯೋಜನೆಯ ಪಿತಾಮಹ ಎಂದು ಕರೆಯಲ್ಪಡುವ ಚೀನಾದ ವಿಜ್ಞಾನಿ ಓಯಾಂಗ್ ಜಿಯುವಾನ್ ಹೇಳಿದ್ದಾರೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ-3 ತನ್ನ ಪ್ರಯಾಣವನ್ನು ಪ್ರಾರಂಭಿಸಿ, ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯಿತು. 69 ಡಿಗ್ರಿ ದಕ್ಷಿಣ ಅಕ್ಷಾಂಶದಲ್ಲಿರುವ ಲ್ಯಾಂಡಿಂಗ್ ಸೈಟ್ ದಕ್ಷಿಣ ಧ್ರುವದ ಬಳಿ ಇಲ್ಲ ಎಂದು ವಿಜ್ಞಾನಿ ಹೇಳಿರುವುದಾಗಿ ಚೀನೀ ಭಾಷೆಯ ಪತ್ರಿಕೆ ಸೈನ್ಸ್ ಟೈಮ್ಸ್‌ ವರದಿ ಮಾಡಿದೆ.

ಬ್ಲೂಮ್‌ಬರ್ಗ್‌ನಲ್ಲಿನ ವರದಿಯ ಪ್ರಕಾರ, ಭೂಮಿಯ ಮೇಲೆ 69 ಡಿಗ್ರಿ ದಕ್ಷಿಣವು ಅಂಟಾರ್ಕ್ಟಿಕ್ ವೃತ್ತದೊಳಗೆ ಇರುತ್ತದೆ, ಆದರೆ ಚಂದ್ರನ ಮೇಲ್ಮೈಯಲ್ಲಿರುವ ವೃತ್ತವು ಧ್ರುವಕ್ಕೆ ಹೆಚ್ಚು ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ -3ರ ಲ್ಯಾಂಡಿಂಗ್ ಸೈಟ್ ಇಲ್ಲ, ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಸಮೀಪದಲ್ಲಿಲ್ಲ ಎಂದು ಜಿಯುವಾನ್ ಹೇಳಿದ್ದಾರೆ.

”ಚಂದ್ರಯಾನ-3 ಲ್ಯಾಂಡಿಂಗ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದೆ ಎನ್ನುವುದು ‘ತಪ್ಪು’,  ಧ್ರುವ ಪ್ರದೇಶದಿಂದ 619 ಕಿಮೀ ದೂರದಲ್ಲಿದೆ” ಎಂದು ಅವರು ಹೇಳಿದರು.

ಚಂದ್ರಯಾನ-3ರ ಸಾಧನೆಗಳನ್ನು ಪ್ರಶ್ನಿಸಿದ್ದು, ಚೀನಾದ ವಿಜ್ಞಾನಿ ಜಿಯುವಾನ್ ಮೊದಲೇನಲ್ಲ.. ಈ ಹಿಂದೆ ಬೀಜಿಂಗ್ ಮೂಲದ ಬಾಹ್ಯಾಕಾಶ ತಜ್ಞ ಪಾಂಗ್ ಝಿಹಾವೊ ಅವರು ಗ್ಲೋಬಲ್ ಟೈಮ್ಸ್‌ಗೆ ಚೀನಾ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಮುಂದುವರಿದಿದೆ ಎಂದು ಹೇಳಿದ್ದರು.

2010ರಲ್ಲಿ ಚಾಂಗ್ಇ-2 ಅನ್ನು ಉಡಾವಣೆ ಮಾಡಿದ ನಂತರ ಚೀನಾವು ನೇರವಾಗಿ ಆರ್ಬಿಟರ್‌ಗಳು ಮತ್ತು ಲ್ಯಾಂಡರ್‌ಗಳನ್ನು ಭೂಮಿ-ಚಂದ್ರ ವರ್ಗಾವಣೆ ಕಕ್ಷೆಗೆ ಕಳುಹಿಸಬಹುದು. ಭಾರತ ತನ್ನ ಉಡಾವಣಾ ವಾಹನಗಳ ಸೀಮಿತ ಸಾಮರ್ಥ್ಯವನ್ನು ಪರಿಗಣಿಸಿ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಚೀನಾ ಬಳಸುವ ಎಂಜಿನ್ ಕೂಡ ಬಹಳ ಮುಂದುವರಿದಿದೆ. ಅದರ ಲೂನಾರ್ ರೋವರ್ ತುಂಬಾ ದೊಡ್ಡದಾಗಿದೆ ಎಂದು ಪಾಂಗ್ ಹೇಳಿದ್ದರು.

ಇದನ್ನೂ ಓದಿ: ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...