Homeಮುಖಪುಟಲಾಕ್‌ಡೌನ್‌-2020 ಸಮಯದಲ್ಲಿ 1200 ಕಿ.ಮಿ ಸೈಕಲ್ ತುಳಿದಿದ್ದ ಬಾಲಕಿಯ ತಂದೆ ಸಾವು

ಲಾಕ್‌ಡೌನ್‌-2020 ಸಮಯದಲ್ಲಿ 1200 ಕಿ.ಮಿ ಸೈಕಲ್ ತುಳಿದಿದ್ದ ಬಾಲಕಿಯ ತಂದೆ ಸಾವು

- Advertisement -
- Advertisement -

ಕಳೆದ ವರ್ಷ ಕೇಂದ್ರದ ಬಿಜೆಪಿ ಸರ್ಕಾರ ಹೇರಿದ್ದ ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದ ಜ್ಯೋತಿ ಕುಮಾರಿ ಎಂಬ ಬಿಹಾರ ಮೂಲದ ಬಾಲಕಿಯ ತಂದೆ ಮೋಹನ್ ಪಾಸ್ವಾನ್ ಅವರು ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.

ದರ್ಬಂಗಾ ಜಿಲ್ಲೆಯ ಸಿರ್ಹುಲ್ಲಿ ಗ್ರಾಮದ ನಿವಾಸಿಯಾಗಿದ್ದ ಅವರು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದು, ಮೃತರಿಗೆ ನೆರವು ಮತ್ತು ಗೌರವ ಸಲ್ಲಿಸಲು ಸಂಬಂಧಪಟ್ಟ ಸಿಂಗ್‌ಬರಾ ಬ್ಲಾಕ್‌ನ ಬಿಡಿಒ ಅವರನ್ನು ಗ್ರಾಮಕ್ಕೆ ಕಳಿಸಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

2020 ರ ಮಾರ್ಚ್‌ ಅಂತ್ಯದಲ್ಲಿ ದೇಶಾದ್ಯಂತ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಹದಿಮೂರು ವರ್ಷದ ಜ್ಯೋತಿ ಕುಮಾರಿ ಅವರು ತಮ್ಮ ತಂದೆಯನ್ನು ಗುರುಗ್ರಾಮದಿಂದ ಬಿಹಾರದಲ್ಲಿರುವ ತಮ್ಮ ಗ್ರಾಮಕ್ಕೆ ಕರೆತರಲು ಬರೋಬ್ಬರಿ 1200 ಕಿ.ಮೀ ಸೈಕಲ್ ತುಳಿದಿದ್ದರು. ಈ ಘಟನೆಗೆ ಇಡೀ ವಿಶ್ವವೇ ಮರುಕ ಪಟ್ಟಿತ್ತು ಮತ್ತು ಇಂತಹ ಸಮಸ್ಯೆಯನ್ನು ಸೃಷ್ಟಿಸಿದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು.

ಮಾಧ್ಯಮಗಳು ಅವರ ಪ್ರಯಾಣದ ಬಗ್ಗೆಗಿನ ವರದಿಯನ್ನು ಮಾಡಿದ ನಂತರ ಬಾಲಕಿಯನ್ನು ಬಿಹಾರದ ‘ಸೈಕಲ್‌ ಹುಡುಗಿ’ ಎಂದು ಕರೆಯಲಾಗಿತ್ತು. ಅಲ್ಲದೆ, ಅಧಿಕಾರಿಗಳು ಆಕೆಗೆ ಕ್ರೀಡಾ ಬೈಸಿಕಲ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಜೊತೆಗೆ ಕ್ರೀಡೆಯಲ್ಲಿ ತರಬೇತಿ ನೀಡಲು ಹಲವಾರು ರೀತಿಯ ನೆರವನ್ನು ಘೋಷಿಸಲಾಗಿತ್ತು.

ಕಳೆದ ವರ್ಷವು ಕೇಂದ್ರ ಸರ್ಕಾರವು ಯಾವುದೆ ಮುನ್ಸೂಚನೆಯಿಲ್ಲದೆ ದೇಶದಾದ್ಯಂತ ಕೊರೊನಾ ಲಾಕ್‌ಡೌನ್‌ ಹೇರಿದ್ದರಿಂದ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಈಡಾದರು. ಲಕ್ಷಾಂತರ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುವಂತಾಯಿತು. ವಲಸೆ ಕಾರ್ಮಿಕರು ಸಾವಿರಾರು ಕಿ.ಮಿ. ದೂರವಿರುವ ತಮ್ಮ ಹಳ್ಳಿಗಳಿಗೆ ತೆರಳಲು ನಡಿಗೆಯನ್ನೇ ಆಶ್ರಯಿಸಿದ್ದು, ದೇಶವು ಮಹಾವಲಸೆಗೆ ಕಾರಣವಾಯಿತು.

ಈ ವೇಳೆ ಹಲವು ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಲುಗಟ್ಟಿ ನಿಂತ ವಲಸೆ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...