Homeಫ್ಯಾಕ್ಟ್‌ಚೆಕ್ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

- Advertisement -
- Advertisement -

ಭೀಮಾ ಕೊರೇಂಗಾವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧನದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೆ ಅವರಿಗೆ ಜಾಮೀನು ನೀಡಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಜಾಮೀನು ನೀಡದ ನ್ಯಾಯಾಂಗ ವ್ಯವಸ್ಥೆ ಮತ್ತು ಅವರ ಮೇಲೆ ಪ್ರಕರಣದ ದಾಖಲಿಸಿದ ಪ್ರಭುತ್ವದ ವಿರುದ್ದ ಆಕ್ರೋಶ ಭುಗಿಲೆದ್ದಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ಹಾಸಿಗೆಯಲ್ಲಿ ಸರಪಳಿಗಳಿಂದ ಬಂಧಿಸಲ್ಪಟ್ಟ ಹಿರಿಯ ವ್ಯಕ್ತಿಯೊಬ್ಬರ ಫೋಟೋ ಒಂದನ್ನು ಫಾದರ್ ಸ್ಟಾನ್ ಸ್ವಾಮಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ವಾಸ್ತವದಲ್ಲಿ ಅದು ಅವರ ಫೋಟೊವಲ್ಲ.

ಈ ಫೋಟೋದಲ್ಲಿರುವ ವ್ಯಕ್ತಿ 92 ವರ್ಷದ ಬಾಬುರಾಮ್ ಸಿಂಗ್ ಎಂಬುವವರದ್ದು. ಅವರು ಕೊಲೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದು, 2021 ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದ ಎತಾಹ್ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ತೆಗೆದ ಫೋಟೊ ಅದಾಗಿದೆ.

ಉತ್ತರ ಪ್ರದೇಶದ 92 ವರ್ಷದ ಕೊಲೆ ಅಪರಾಧಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲ, ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ದಿವಂಗತ ಸ್ಟಾನ್ ಸ್ವಾಮಿ ಅವರದ್ದು ಎಂದು ವೈರಲ್  ಆಗಿದೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಜುಲೈ 3, 2021 ರಂದು ಮುಂಜಾನೆ ಸ್ಟಾನ್ ಸ್ವಾಮಿ ಅವರು ಹೃದಯ ಸ್ತಂಭನದಿಂದ ಬಳಲುತ್ತಿದ್ದಾರೆ ಎಂದು ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಇಯಾನ್ ಡಿಸೋಜಾ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ 1:24 ಕ್ಕೆ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ.

 

ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕುರಿತು ವಕೀಲರು ತುರ್ತು ಮನವಿಯನ್ನು ಸಲ್ಲಿಸಿದ ನಂತರ ಹೈಕೋರ್ಟ್ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು. ಆದರೆ, ವಿಚಾರಣೆ ಪ್ರಾರಂಭಿಸುವ ಒಂದು ಗಂಟೆ ಮೊದಲೇ ಹೋರಾಟಗಾರ ಸ್ಟಾನ್ ಸ್ವಾಮಿ ನಿಧನರಾದರು.

ಅದಾದ ಬಳಿಕ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾನ್ ಸ್ವಾಮಿ ಅವರ ಫೋಟೋ ಎಂದು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಆಗಿರುವ ಫೋಟೋದಲ್ಲಿ, ವೃದ್ಧ ವ್ಯಕ್ತಿಯೊಬ್ಬರು ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತಿದ್ದಾರೆ, ಆಕ್ಸಿಜನ್ ಮಾಸ್ಕ್‌ ಧರಿಸಿದ್ದಾರೆ. ಒಂದು ಕಾಲಿಗೆ ಕೊಳ ಹಾಕಿರುವ ಸರಪಳಿಯನ್ನು ಹಾಕಿದ್ದು, ಹಾಸಿಗೆಗೆ ಬಂಧಿಸಿದ್ದಾರೆ. ಈ ಫೋಟೋ ಹಂಚಿಕೊಂಡು ಅವರು ಸ್ಟಾನ್ ಸ್ವಾಮಿ ಎಂದು ಹೇಳಿಕೊಳ್ಳಲಾಗುತ್ತಿದೆ.

ಈ ಚಿತ್ರವನ್ನು ಗೂಗಲ್ ಇಮೇಜ್ ಹುಡುಕಾಟ ನಡೆಸಿದಾಗ, ಮೇ 2021 ರಲ್ಲಿ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ತೆಗೆದಿರುವ ಚಿತ್ರ ಎಂದು ತೋರಿಸಿದೆ. ಈ ಬಗ್ಗೆ ವರದಿಗಳು, ಸುದ್ದಿಗಳನ್ನು ಗೂಗಲ್ ತೋರಿಸಿದೆ.

ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಉತ್ತರಪ್ರದೇಶದ ಹೆಚ್ಚುವರಿ ಮಹಾನಿರ್ದೇಶಕರು (ಜೈಲು) ಆನಂದ್ ಕುಮಾರ್, ಜೈಲು ಅಧಿಕಾರಿ ಅಶೋಕ್ ಯಾದವ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದರು ಮತ್ತು ಅವರ ಮೇಲ್ವಿಚಾರಣಾ ಅಧಿಕಾರಿಯಿಂದ ಸ್ಪಷ್ಟನೆ ಕೋರಿದ್ದಾರೆ ಎಂದು ಎನ್‌ಡಿಟಿವಿ 2021 ರ ಮೇ 13 ರಂದು ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ 2021 ರ ಫೆಬ್ರವರಿ 6 ರಂದು ಇಟಾ ಜೈಲಿಗೆ ಹಾಕಲ್ಪಟ್ಟ ಬಾಬುರಾಮ್ ಸಿಂಗ್, ಇಟಾ ಜಿಲ್ಲೆಯ ಕುಲ್ಲಾ ಹಬೀಪುರ ಗ್ರಾಮದ ನಿವಾಸಿ ಎಂದು ಟೈಮ್ಸ್ ಆಫ್ ಇಂಡಿಯಾ 2021 ರ ಮೇ 14 ರಂದು ವರದಿ ಮಾಡಿದೆ.

ಈ ಫೋಟೋವನ್ನು ಹಂಚಿಕೊಂಡಿರುವ ಪೋಸ್ಟ್‌ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಫೇಸ್‌ಬುಕ್ ಈಗ ಅಂತಹ ಪೋಸ್ಟ್‌ಗಳನ್ನು ತಪ್ಪು ಮಾಹಿತಿ ಎಂದು ತೋರಿಸುತ್ತಿದೆ.

ಬದಲಿಗೆ ಈ ಕೆಳಗಿರಗಿರುವುದು ಸ್ಟಾನ್ ಸ್ವಾಮಿಯವರ ಚಿತ್ರವಾಗಿದೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...