Homeಫ್ಯಾಕ್ಟ್‌ಚೆಕ್ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

- Advertisement -
- Advertisement -

ಭೀಮಾ ಕೊರೇಂಗಾವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧನದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೆ ಅವರಿಗೆ ಜಾಮೀನು ನೀಡಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಜಾಮೀನು ನೀಡದ ನ್ಯಾಯಾಂಗ ವ್ಯವಸ್ಥೆ ಮತ್ತು ಅವರ ಮೇಲೆ ಪ್ರಕರಣದ ದಾಖಲಿಸಿದ ಪ್ರಭುತ್ವದ ವಿರುದ್ದ ಆಕ್ರೋಶ ಭುಗಿಲೆದ್ದಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ಹಾಸಿಗೆಯಲ್ಲಿ ಸರಪಳಿಗಳಿಂದ ಬಂಧಿಸಲ್ಪಟ್ಟ ಹಿರಿಯ ವ್ಯಕ್ತಿಯೊಬ್ಬರ ಫೋಟೋ ಒಂದನ್ನು ಫಾದರ್ ಸ್ಟಾನ್ ಸ್ವಾಮಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ವಾಸ್ತವದಲ್ಲಿ ಅದು ಅವರ ಫೋಟೊವಲ್ಲ.

ಈ ಫೋಟೋದಲ್ಲಿರುವ ವ್ಯಕ್ತಿ 92 ವರ್ಷದ ಬಾಬುರಾಮ್ ಸಿಂಗ್ ಎಂಬುವವರದ್ದು. ಅವರು ಕೊಲೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದು, 2021 ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದ ಎತಾಹ್ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ತೆಗೆದ ಫೋಟೊ ಅದಾಗಿದೆ.

ಉತ್ತರ ಪ್ರದೇಶದ 92 ವರ್ಷದ ಕೊಲೆ ಅಪರಾಧಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲ, ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ದಿವಂಗತ ಸ್ಟಾನ್ ಸ್ವಾಮಿ ಅವರದ್ದು ಎಂದು ವೈರಲ್  ಆಗಿದೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಜುಲೈ 3, 2021 ರಂದು ಮುಂಜಾನೆ ಸ್ಟಾನ್ ಸ್ವಾಮಿ ಅವರು ಹೃದಯ ಸ್ತಂಭನದಿಂದ ಬಳಲುತ್ತಿದ್ದಾರೆ ಎಂದು ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಇಯಾನ್ ಡಿಸೋಜಾ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ 1:24 ಕ್ಕೆ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ.

 

ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕುರಿತು ವಕೀಲರು ತುರ್ತು ಮನವಿಯನ್ನು ಸಲ್ಲಿಸಿದ ನಂತರ ಹೈಕೋರ್ಟ್ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು. ಆದರೆ, ವಿಚಾರಣೆ ಪ್ರಾರಂಭಿಸುವ ಒಂದು ಗಂಟೆ ಮೊದಲೇ ಹೋರಾಟಗಾರ ಸ್ಟಾನ್ ಸ್ವಾಮಿ ನಿಧನರಾದರು.

ಅದಾದ ಬಳಿಕ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾನ್ ಸ್ವಾಮಿ ಅವರ ಫೋಟೋ ಎಂದು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಆಗಿರುವ ಫೋಟೋದಲ್ಲಿ, ವೃದ್ಧ ವ್ಯಕ್ತಿಯೊಬ್ಬರು ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತಿದ್ದಾರೆ, ಆಕ್ಸಿಜನ್ ಮಾಸ್ಕ್‌ ಧರಿಸಿದ್ದಾರೆ. ಒಂದು ಕಾಲಿಗೆ ಕೊಳ ಹಾಕಿರುವ ಸರಪಳಿಯನ್ನು ಹಾಕಿದ್ದು, ಹಾಸಿಗೆಗೆ ಬಂಧಿಸಿದ್ದಾರೆ. ಈ ಫೋಟೋ ಹಂಚಿಕೊಂಡು ಅವರು ಸ್ಟಾನ್ ಸ್ವಾಮಿ ಎಂದು ಹೇಳಿಕೊಳ್ಳಲಾಗುತ್ತಿದೆ.

ಈ ಚಿತ್ರವನ್ನು ಗೂಗಲ್ ಇಮೇಜ್ ಹುಡುಕಾಟ ನಡೆಸಿದಾಗ, ಮೇ 2021 ರಲ್ಲಿ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ತೆಗೆದಿರುವ ಚಿತ್ರ ಎಂದು ತೋರಿಸಿದೆ. ಈ ಬಗ್ಗೆ ವರದಿಗಳು, ಸುದ್ದಿಗಳನ್ನು ಗೂಗಲ್ ತೋರಿಸಿದೆ.

ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಉತ್ತರಪ್ರದೇಶದ ಹೆಚ್ಚುವರಿ ಮಹಾನಿರ್ದೇಶಕರು (ಜೈಲು) ಆನಂದ್ ಕುಮಾರ್, ಜೈಲು ಅಧಿಕಾರಿ ಅಶೋಕ್ ಯಾದವ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದರು ಮತ್ತು ಅವರ ಮೇಲ್ವಿಚಾರಣಾ ಅಧಿಕಾರಿಯಿಂದ ಸ್ಪಷ್ಟನೆ ಕೋರಿದ್ದಾರೆ ಎಂದು ಎನ್‌ಡಿಟಿವಿ 2021 ರ ಮೇ 13 ರಂದು ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ 2021 ರ ಫೆಬ್ರವರಿ 6 ರಂದು ಇಟಾ ಜೈಲಿಗೆ ಹಾಕಲ್ಪಟ್ಟ ಬಾಬುರಾಮ್ ಸಿಂಗ್, ಇಟಾ ಜಿಲ್ಲೆಯ ಕುಲ್ಲಾ ಹಬೀಪುರ ಗ್ರಾಮದ ನಿವಾಸಿ ಎಂದು ಟೈಮ್ಸ್ ಆಫ್ ಇಂಡಿಯಾ 2021 ರ ಮೇ 14 ರಂದು ವರದಿ ಮಾಡಿದೆ.

ಈ ಫೋಟೋವನ್ನು ಹಂಚಿಕೊಂಡಿರುವ ಪೋಸ್ಟ್‌ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಫೇಸ್‌ಬುಕ್ ಈಗ ಅಂತಹ ಪೋಸ್ಟ್‌ಗಳನ್ನು ತಪ್ಪು ಮಾಹಿತಿ ಎಂದು ತೋರಿಸುತ್ತಿದೆ.

ಬದಲಿಗೆ ಈ ಕೆಳಗಿರಗಿರುವುದು ಸ್ಟಾನ್ ಸ್ವಾಮಿಯವರ ಚಿತ್ರವಾಗಿದೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...