Homeಫ್ಯಾಕ್ಟ್‌ಚೆಕ್ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

- Advertisement -
- Advertisement -

ಭೀಮಾ ಕೊರೇಂಗಾವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧನದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೆ ಅವರಿಗೆ ಜಾಮೀನು ನೀಡಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಜಾಮೀನು ನೀಡದ ನ್ಯಾಯಾಂಗ ವ್ಯವಸ್ಥೆ ಮತ್ತು ಅವರ ಮೇಲೆ ಪ್ರಕರಣದ ದಾಖಲಿಸಿದ ಪ್ರಭುತ್ವದ ವಿರುದ್ದ ಆಕ್ರೋಶ ಭುಗಿಲೆದ್ದಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ಹಾಸಿಗೆಯಲ್ಲಿ ಸರಪಳಿಗಳಿಂದ ಬಂಧಿಸಲ್ಪಟ್ಟ ಹಿರಿಯ ವ್ಯಕ್ತಿಯೊಬ್ಬರ ಫೋಟೋ ಒಂದನ್ನು ಫಾದರ್ ಸ್ಟಾನ್ ಸ್ವಾಮಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ವಾಸ್ತವದಲ್ಲಿ ಅದು ಅವರ ಫೋಟೊವಲ್ಲ.

ಈ ಫೋಟೋದಲ್ಲಿರುವ ವ್ಯಕ್ತಿ 92 ವರ್ಷದ ಬಾಬುರಾಮ್ ಸಿಂಗ್ ಎಂಬುವವರದ್ದು. ಅವರು ಕೊಲೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದು, 2021 ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದ ಎತಾಹ್ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ತೆಗೆದ ಫೋಟೊ ಅದಾಗಿದೆ.

ಉತ್ತರ ಪ್ರದೇಶದ 92 ವರ್ಷದ ಕೊಲೆ ಅಪರಾಧಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲ, ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ದಿವಂಗತ ಸ್ಟಾನ್ ಸ್ವಾಮಿ ಅವರದ್ದು ಎಂದು ವೈರಲ್  ಆಗಿದೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಜುಲೈ 3, 2021 ರಂದು ಮುಂಜಾನೆ ಸ್ಟಾನ್ ಸ್ವಾಮಿ ಅವರು ಹೃದಯ ಸ್ತಂಭನದಿಂದ ಬಳಲುತ್ತಿದ್ದಾರೆ ಎಂದು ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಇಯಾನ್ ಡಿಸೋಜಾ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ 1:24 ಕ್ಕೆ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ.

 

ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕುರಿತು ವಕೀಲರು ತುರ್ತು ಮನವಿಯನ್ನು ಸಲ್ಲಿಸಿದ ನಂತರ ಹೈಕೋರ್ಟ್ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು. ಆದರೆ, ವಿಚಾರಣೆ ಪ್ರಾರಂಭಿಸುವ ಒಂದು ಗಂಟೆ ಮೊದಲೇ ಹೋರಾಟಗಾರ ಸ್ಟಾನ್ ಸ್ವಾಮಿ ನಿಧನರಾದರು.

ಅದಾದ ಬಳಿಕ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾನ್ ಸ್ವಾಮಿ ಅವರ ಫೋಟೋ ಎಂದು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಆಗಿರುವ ಫೋಟೋದಲ್ಲಿ, ವೃದ್ಧ ವ್ಯಕ್ತಿಯೊಬ್ಬರು ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತಿದ್ದಾರೆ, ಆಕ್ಸಿಜನ್ ಮಾಸ್ಕ್‌ ಧರಿಸಿದ್ದಾರೆ. ಒಂದು ಕಾಲಿಗೆ ಕೊಳ ಹಾಕಿರುವ ಸರಪಳಿಯನ್ನು ಹಾಕಿದ್ದು, ಹಾಸಿಗೆಗೆ ಬಂಧಿಸಿದ್ದಾರೆ. ಈ ಫೋಟೋ ಹಂಚಿಕೊಂಡು ಅವರು ಸ್ಟಾನ್ ಸ್ವಾಮಿ ಎಂದು ಹೇಳಿಕೊಳ್ಳಲಾಗುತ್ತಿದೆ.

ಈ ಚಿತ್ರವನ್ನು ಗೂಗಲ್ ಇಮೇಜ್ ಹುಡುಕಾಟ ನಡೆಸಿದಾಗ, ಮೇ 2021 ರಲ್ಲಿ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ತೆಗೆದಿರುವ ಚಿತ್ರ ಎಂದು ತೋರಿಸಿದೆ. ಈ ಬಗ್ಗೆ ವರದಿಗಳು, ಸುದ್ದಿಗಳನ್ನು ಗೂಗಲ್ ತೋರಿಸಿದೆ.

ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಉತ್ತರಪ್ರದೇಶದ ಹೆಚ್ಚುವರಿ ಮಹಾನಿರ್ದೇಶಕರು (ಜೈಲು) ಆನಂದ್ ಕುಮಾರ್, ಜೈಲು ಅಧಿಕಾರಿ ಅಶೋಕ್ ಯಾದವ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದರು ಮತ್ತು ಅವರ ಮೇಲ್ವಿಚಾರಣಾ ಅಧಿಕಾರಿಯಿಂದ ಸ್ಪಷ್ಟನೆ ಕೋರಿದ್ದಾರೆ ಎಂದು ಎನ್‌ಡಿಟಿವಿ 2021 ರ ಮೇ 13 ರಂದು ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ 2021 ರ ಫೆಬ್ರವರಿ 6 ರಂದು ಇಟಾ ಜೈಲಿಗೆ ಹಾಕಲ್ಪಟ್ಟ ಬಾಬುರಾಮ್ ಸಿಂಗ್, ಇಟಾ ಜಿಲ್ಲೆಯ ಕುಲ್ಲಾ ಹಬೀಪುರ ಗ್ರಾಮದ ನಿವಾಸಿ ಎಂದು ಟೈಮ್ಸ್ ಆಫ್ ಇಂಡಿಯಾ 2021 ರ ಮೇ 14 ರಂದು ವರದಿ ಮಾಡಿದೆ.

ಈ ಫೋಟೋವನ್ನು ಹಂಚಿಕೊಂಡಿರುವ ಪೋಸ್ಟ್‌ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಫೇಸ್‌ಬುಕ್ ಈಗ ಅಂತಹ ಪೋಸ್ಟ್‌ಗಳನ್ನು ತಪ್ಪು ಮಾಹಿತಿ ಎಂದು ತೋರಿಸುತ್ತಿದೆ.

ಬದಲಿಗೆ ಈ ಕೆಳಗಿರಗಿರುವುದು ಸ್ಟಾನ್ ಸ್ವಾಮಿಯವರ ಚಿತ್ರವಾಗಿದೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...