HomeUncategorizedವಿದ್ಯಾರ್ಥಿನಿ ಫಾತಿಮಾ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹಕ್ಕೆ ಮಣಿದ ಆಡಳಿತ ಮಂಡಳಿ

ವಿದ್ಯಾರ್ಥಿನಿ ಫಾತಿಮಾ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹಕ್ಕೆ ಮಣಿದ ಆಡಳಿತ ಮಂಡಳಿ

- Advertisement -
- Advertisement -

ಐಐಟಿ ಮದ್ರಾಸ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಲತೀಫ್ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಇಬ್ಬರು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಕಾಲೇಜು ಮಂಡಳಿ ಎದುರು ಮೂರು ಬೇಡಿಕೆಗಳನ್ನು ಮುಂದಿರಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಕಾಲೇಜು ಆಡಳಿತ ಮಂಡಳಿ ಈಡೇರಿಸುವ ಭರವಸೆ ನೀಡಿದ್ದು, ಇನ್ನೊಂದು ಬೇಡಿಕೆಯನ್ನು ಈಡೇರಿಸುವುದಾಗಿ ಹೇಳಿದೆ.

ಸೋಮವಾರ ಬೆಳಗ್ಗೆ 10 ಗಂಟೆಯಿಂದ ಅಜರ್ ಮೊಯ್ದೀನ್ ಮತ್ತು ಜಸ್ಟಿನ್ ಜೋಸೆಫ್ ಎಂಬ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನ ಮುಖ್ಯ ದ್ವಾರದ ಬಳಿ ಭಿತ್ತಿಪತ್ರ ಹಿಡಿದು, ಪ್ರತಿಭಟನೆಗೆ ಕುಳಿತಿದ್ದಾರೆ. ಪ್ರಮುಖ ಕಾಲೇಜುಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ಸಾವಿನ ಪ್ರಕರಣಗಳನ್ನು ಕೊನೆಗೊಳಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯನ್ನು ಉಳಿದ ವಿದ್ಯಾರ್ಥಿಗಳು ಬೆಂಬಲಿಸಿದರು.

ನವೆಂಬರ್ 9 ರಂದು ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಫಾತಿಮಾ ಲತೀಫ್ ಆತ್ಮಹತ್ಯೆಗೆ ಶರಣಾಗಿದ್ದಳು. ಫಾತಿಮಾ ಸಾವಿನ ತನಿಖೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಮಾನಸಿಕ ಯೋಗಕ್ಷೇಮ ವಿಚಾರಿಸಲು ಬಾಹ್ಯ ತಜ್ಞರ ಸಮಿತಿ ರಚಿಸುವುದು, ಕಾಲೇಜುಗಳ ಪ್ರತಿ ಇಲಾಖೆ ಕುಂದುಕೊರತೆ ನಿವಾರಿಸಲು ಘಟಕಗಳನ್ನು ಸ್ಥಾಪಿಸುವುದು, ಫಾತಿಮಾ ಕುಟುಂಬಸ್ಥರು ಮಾಡಿದ ಆರೋಪಗಳ ಬಗ್ಗೆ ಆಂತರಿಕ ತನಿಖೆ ನಡೆಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೇಡಿಕೆಯಾಗಿದೆ. ಪ್ರಾಧ್ಯಾಪಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಆಂತರಿಕ ಬೇಡಿಕೆ ಈಡೇರಿಸು ಬಗ್ಗೆ ಆಲೋಚಿಸುವುದಾಗಿ ಮಂಡಳಿ ಹೇಳಿದೆ.

ನಮ್ಮ ಎರಡು ಬೇಡಿಕೆಗಳನ್ನು ಶೀಘ್ರವಾಗಿ ಸ್ವೀಕರಿಸಲಾಗುವುದು ಎಂದು ಡೀನ್, ವಿದ್ಯಾರ್ಥಿ ಸಂಘಕ್ಕೆ ಭರವಸೆ ನೀಡಿದ್ದಾರೆ. ಹೀಗಾಗಿ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ. ಐಐಟಿ ಮದ್ರಾಸ್‌ನಿಂದ ಗುರುತಿಸಲ್ಪಟ್ಟ ಸ್ವತಂತ್ರ ವಿದ್ಯಾರ್ಥಿ ಸಂಘವಾದ ಚಿಂತಾ ಬಾರ್, ಡೀನ್ ಶಿವಕುಮಾರ್.ಎಂ .ಶ್ರೀನಿವಾಸನ್ ಅವರಿಂದ ಸ್ವೀಕರಿಸಿರುವ ಇಮೇಲ್ ಸ್ಕ್ರೀನ್ ಶಾರ್ಟ್ ಗಳನ್ನು ಪೋಸ್ಟ್ ಮಾಡಿದೆ. ಕಿರುಕುಳ, ತಾರತಮ್ಯ ಇತ್ಯಾದಿಗಳ ವಿರುದ್ಧದ ಕುಂದುಕೊರತೆ ನಿವಾರಣಾ ಕಾರ್ಯವಿಧಾನವು ಇಲಾಖೆಗಳಲ್ಲಿ ಲಭ್ಯವಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ನಿರ್ದೇಶಕರೊಂದಿಗೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ” ಎಂದು ಇಮೇಲ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...