Homeಮುಖಪುಟಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

ಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

- Advertisement -
- Advertisement -

ಪ್ರತಿ ವರ್ಷ ಜನವರಿ 3 ರಂದು ನಾವು ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಮತ್ತು ಹೆಣ್ಣು ಮಕ್ಕಳಿಗಾಗಿ ಶಾಲೆಯನ್ನು ಪ್ರಾರಂಭಿಸಿದ ಮೊದಲ ಭಾರತೀಯ ಮಹಿಳೆ. ಹೆಣ್ಣು ಮಕ್ಕಳಿಗಾಗಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರಿಗೆ ಹೆಗಲಾಗಿದ್ದ ಮತ್ತೊಬ್ಬ ಧೀಮಂತ ಮಹಿಳೆ ಫಾತಿಮಾ ಶೇಖ್.

ಅವರು ಫುಲೆಯವರ ಭಿಡೆವಾಡ ಶಾಲೆಯಲ್ಲಿ ಹುಡುಗಿಯರಿಗೆ ಅಕ್ಷರ ಕಲಿಸುವ ಕೆಲಸ ಮಾಡಿದರು. ಮನೆಮನೆಗೆ ತೆರಳಿ ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರನ್ನು ಪ್ರೋತ್ಸಾಹಿಸುತ್ತಿದ್ದರು. ಜೊತೆಗೆ ಫುಲೆ ಅವರ ಶಾಲೆಗಳ ವ್ಯವಹಾರಗಳನ್ನೂ ನಿರ್ವಹಿಸುತ್ತಿದ್ದರು. ಆಕೆಯ ಕೊಡುಗೆ ಇಲ್ಲದಿದ್ದರೆ ಇಡೀ ಬಾಲಕಿಯರ ಶಿಕ್ಷಣ ಯೋಚನೆ ಸಾಕಾರಗೊಳ್ಳುತ್ತಿರಲಿಲ್ಲ. ಆದ್ದರಿಂದ ಇತಿಹಾಸ ತಜ್ಞರು ಅವರನ್ನು 19ನೇ ಶತಮಾನದ ಶಿಕ್ಷಣತಜ್ಞೆ ಎಂದು ಕರೆಯುತ್ತಾರೆ.

1831ರ ಜನವರಿ 9ರಂದು ಜನಿಸಿದ ಫಾತಿಮಾ ಶೇಖ್, 1900 ಅಕ್ಟೋಬರ್ 9ರಂದು ನಿಧನರಾದರು. ಫಾತಿಮಾ ಶೇಖ್ ಭಾರತದ ಮೊಟ್ಟ ಮೊದಲ ಮುಸ್ಲಿಂ ಮಹಿಳಾ ಶಿಕ್ಷಣತಜ್ಞೆ. ಸಾವಿತ್ರಿಬಾಯಿ ಫುಲೆ ಅವರೊಂದಿಗೆ ಅವರು ಪುಣೆಯಲ್ಲಿ ತುಳಿತಕ್ಕೊಳಗಾದ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಅಕ್ಷರ ಕಲಿಸಿದರು.

ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಶಿಕ್ಷಣದ ಪ್ರವರ್ತಕರಾಗಿದ್ದ ಫಾತಿಮಾ, ದಲಿತ, ಆದಿವಾಸಿ, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಅವರು ದೃಢವಾಗಿ ನಿಂತಿದ್ದರು. ಏಕೆಂದರೆ, ಈ ವರ್ಗಗಳು ಹಿಂದೂ ಧರ್ಮ ಮತ್ತು ಸಂಪ್ರದಾಯದ ಹೆಸರಿನಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದರು. ಅವರು ಅಸ್ಪೃಶ್ಯರು, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳಿಗೆ ಶಿಕ್ಷಣ ನೀಡಲು ಫುಲೆ ದಂಪತಿಗಳೊಂದಿಗೆ ಕೆಲಸ ಮಾಡಿದರು. ಇದು ಜ್ಯೋತಿಬಾ ಫುಲೆ ನೇತೃತ್ವದ ಸತ್ಯಶೋಧಕ್ (‘ಸತ್ಯದ ಹುಡುಕಾಟ’) ಚಳುವಳಿಯ ಒಂದು ಭಾಗವಾಗಿತ್ತು.

ಹೆಣ್ಣು ಮಕ್ಕಳಿಗೆ ಹಾಗೂ ದಲಿತರಿಗೆ ಶಿಕ್ಷಣ ನೀಡಿದ್ದಕ್ಕಾಗಿ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರನ್ನು ಕುಟುಂಬ ಮತ್ತು ಗ್ರಾಮದ ಸದಸ್ಯರು ಗ್ರಾಮದಿಂದ ಹೊರಹಾಕಿದ್ದರು. 1848 ರಲ್ಲಿ ದಲಿತ ಮಕ್ಕಳು ಮತ್ತು ಮಹಿಳೆಯರಿಗಾಗಿ ಮೊದಲ ಶಾಲೆಯನ್ನು ಪ್ರಾರಂಭಿಸುವ ಅವರ ಪ್ರಯತ್ನವನ್ನು ‘ಧರ್ಮ ವಿರೋಧಿ ಕೃತ್ಯ’ ಎಂದು ಹೆಸರಿಸಿದಾಗ, ಫಾತಿಮಾ ಶೇಖ್ ಮತ್ತು ಅವರ ಸಹೋದರ ಉಸ್ಮಾನ್ ಅವರಿಗೆ ಸಹಾಯ ಮಾಡಿದರು. ಫುಲೆಯವರ ವಿಚಾರಗಳಿಂದ ಪ್ರೇರಿತರಾದ ಉಸ್ಮಾನ್ ತಮ್ಮ ಸಹೋದರಿಯನ್ನು ವಿದ್ಯಾಭ್ಯಾಸ ಮಾಡಲು ಪ್ರೇರೇಪಿಸಿದರು. ಸಾವಿತ್ರಿಬಾಯಿಯವರೊಂದಿಗೆ ಶೇಖ್ ಶಿಕ್ಷಕರಾಗಿ ತರಬೇತಿ ಪಡೆಯಲು ಶ್ರಮಿಸಿದರು.

ಫುಲೆ ದಂಪತಿಗಳ ಜೊತೆಗೆ ಶೇಖ್ ಕೂಡ ಸಾಮಾಜಿಕ ಅವಮಾನದ ಕಷ್ಟಗಳನ್ನು ಎದುರಿಸಿದರು. ಏಕೆಂದರೆ, ಅವರು ಬ್ರಾಹ್ಮಣ ಜಾತಿಯ ಕಟ್ಟುನಿಟ್ಟಿನ ರಚನೆಗಳ ವಿರುದ್ಧ ಹೋರಾಡಿದರು. ಅವರು ಪ್ರಬಲ ಜಾತಿಗಳ ಜನರು ಮತ್ತು ತಮ್ಮದೇ ಸಮುದಾಯದ ವ್ಯಕ್ತಿಗಳಿಂದ ಕಲ್ಲು ಮತ್ತು ಹಸುವಿನ ಸಗಣಿಯಿಂದ ದಾಳಿಯನ್ನೂ ಎದುರಿಸಿದರು. ಶೇಖ್ ಅವರನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳು ‘ಅಧರ್ಮಿ’ ಎಂದು ಪರಿಗಣಿಸಿದ್ದರು.

ಯಾವುದಕ್ಕೂ ಜಗ್ಗದ ಶೇಖ್.. ತಾವು ಕಲಿತು, ಹೆಣ್ಣು ಮಕ್ಕಳಿಗೂ ಕಲಿಸಿದರು. ಕುಟುಂಬಗಳು ತಮ್ಮ ಹುಡುಗಿಯರನ್ನು ಶಾಲೆಗೆ ಕಳುಹಿಸಲು ಪ್ರೋತ್ಸಾಹಿಸುವ ಸಲುವಾಗಿ ಮನೆಮನೆಗೆ ಭೇಟಿ ನೀಡಿದರು.

ಜೊತೆಜೊತೆಗೆ ಶಾಲಾ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು. ಶೇಖ್ ಅವರ ಕೊಡುಗೆಗಳಿಲ್ಲದಿದ್ದರೆ, ಫುಲೆಯವರ ಶೀಕ್ಷಣ ಕ್ರಾಂತಿಯ ಗುರಿ ಅಪೂರ್ಣವಾಗುತ್ತಿತ್ತು. ಶೇಖ್ ಅವರು ಶಿಕ್ಷಣದ ಧ್ಯೇಯವನ್ನು ಜೀವಂತವಾಗಿಡಲು ಶ್ರಮಿಸಿದ್ದಲ್ಲದೆ, ಸಾವಿತ್ರಿಬಾಯಿಯವರಿಗೆ ಮತ್ತು ಸತ್ಯಶೋಧಕ ಚಳುವಳಿಗೆ ಬೆಂಬಲವಾಗಿ ನಿಂತಿದ್ದರು. ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿರಾವ್ ಫುಲೆ ಅವರಿಗೆ ಬರೆದ ಪತ್ರಗಳಲ್ಲಿ ಇದನ್ನು ಕಾಣಬಹುದು. ಅದರಲ್ಲಿ ಅವರು ಫಾತಿಮಾ ಶೇಖ್ ಬಗ್ಗೆ ಮೆಚ್ಚುಗೆ ಮತ್ತು ಪ್ರೀತಿಯಿಂದ ಮಾತನಾಡುತ್ತಾರೆ. ಶೇಖ್ ಆಕೆಯ ಜೀವನ ಅಥವಾ ಕೆಲಸದ ಬಗ್ಗೆ ಯಾವುದೇ ವಿಷಯವನ್ನು ದಾಖಲಿಸಿಲ್ಲ; ಇತರರು ಕೂಡಾ ಬರೆದಿಲ್ಲ. ಆದರೆ, ಸಾವಿತ್ರಿಬಾಯಿಯವರ ಪತ್ರಗಳು ಫಾತಿಮಾ ಶೇಖ್ ಅವರು ನೀಡಿದ ಕೊಡುಗೆಗಳ ಮಾಹಿತಿಯ ಪ್ರಮುಖ ಮೂಲವಾಗಿದೆ.

ಸುದೀರ್ಘ ಹೋರಾಟ ಹಾಗೂ ಬರಹಗಾರರ ಪ್ರಚಾರದಿಂದ ಸಾವಿತ್ರಿಬಾಯಿ ಇಂದು ಸೂಕ್ತ ಮನ್ನಣೆಯನ್ನು ಪಡೆದಿದ್ದಾರೆ. ಆದರೆ, ಶೇಖ್ ಅವರು ಭಾರತೀಯ ಇತಿಹಾಸದಲ್ಲಿ ಹೆಚ್ಚಾಗಿ ಗುರುತಿಸಲ್ಪಟ್ಟಿಲ್ಲ. ಅವರ ಕೊಡುಗೆಗಳನ್ನು ಬೇಕಂತಲೇ ನಿರ್ಲಕ್ಷಿಸಲಾಗಿದೆ. ಆಕೆ, ಧಾರ್ಮಿಕ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪರವಾಗಿ ಹೋರಾಡಿದವರಲ್ಲಿ ಒಬ್ಬರಾಗಿದ್ದಾರೆ. ದಲಿತ -ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಶಿಕ್ಷಣ ಕಲಿಸುವ ಕೆಲಸದಲ್ಲಿದ್ದ ಅವರು, ಹಿಂದೂಗಳಿಂದ ಮಾತ್ರವಲ್ಲದೆ ಸಾಂಪ್ರದಾಯಿಕ ಮುಸ್ಲಿಮರಿಂದಲೂ ವಿರೋಧವನ್ನು ಎದುರಿಸಿದರು.

19ನೇ ಶತಮಾನದಲ್ಲಿ ಹಿಂದೂ ಮಹಿಳೆಯರಂತೆ ಮುಸ್ಲಿಮ್ ಮಹಿಳೆಯರಿಗೂ ಶಿಕ್ಷಣ ಪಡೆಯಲು ಅವಕಾಶ ಇರಲಿಲ್ಲ. ಸಾಮಾಜಿಕ ಕಟ್ಟುಪಾಡುಗಳು ಉತ್ತುಂಗದಲ್ಲಿದ್ದ ಕಾಲಘಟ್ಟದಲ್ಲಿ ಅವರು ಬ್ರಾಹ್ಮಣ್ಯದ ಪ್ರಾಬಲ್ಯವನ್ನು ಮತ್ತು ಇಸ್ಲಾಂ ಮೂಲಭೂತವಾದವನ್ನು, ಮುಸ್ಲಿಂ ಮಹಿಳೆಯಾಗಿ ಎದುರು ಹಾಕಿಕೊಳ್ಳಬೇಕಾಗಿರಲಿಲ್ಲ. ಫುಲೆ ದಂಪತಿಗಳಿಂದ ಪ್ರಭಾವಿತರಾಗಿದ್ದ ಅವರು, ದಲಿತರು, ಆದಿವಾಸಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸಿದರು.

ಮಹಾರಾಷ್ಟ್ರ ಸರ್ಕಾರವು 2014 ರಲ್ಲಿ ಶೇಖ್ ಅವರ ಕೊಡುಗೆಗಳನ್ನು ಗುರುತಿಸಲು ಮತ್ತು ಮೌಲ್ಯೀಕರಿಸಲು ಪ್ರಯತ್ನಗಳನ್ನು ಮಾಡಿತು. ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸರ್ ಸೈಯದ್ ಅಹ್ಮದ್ ಖಾನ್ ಮತ್ತು ಜಾಕಿರ್ ಹುಸೇನ್ ಅವರ ಜತೆಗೆ ಉರ್ದು ಶಾಲಾ ಪಠ್ಯಪುಸ್ತಕಗಳಲ್ಲಿ ಸಂಕ್ಷಿಪ್ತ ವಿವರವನ್ನು ಪ್ರಕಟಿಸಿತು.

ಇದನ್ನೂ ಓದಿ; ಸಾವಿತ್ರಿಬಾಯಿ ಫುಲೆ ಬ್ಯಾನರ್ ಹರಿದ ಕಿಡಿಗೇಡಿಗಳು; ಐವರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...