Homeಅಂಕಣಗಳುಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

ಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

- Advertisement -
- Advertisement -

ಜಗತ್ತಿನ ಅತಿ ಬಡರಾಷ್ಟ್ರಗಳಲ್ಲಿ ಸೋಮಾಲಿಯಾ ಒಂದು. ಆಫ್ರಿಕಾ ಖಂಡದ ಪೂರ್ವಭಾಗದಲ್ಲಿ ಸೌದಿ ಅರೇಬಿಯಾದಂತಹ ಶ್ರೀಮಂತ ರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಸೋಮಾಲಿಯಾ ಬಡತನ, ಅನಕ್ಷರತೆ, ಅಂತರ್ಯುದ್ಧ ಮತ್ತು ದಂಗೆಗಳಿಂದ ತತ್ತರಿಸಿರುವ ದೇಶ.

ಸೋಮಾಲಿಯಾ ಜನರನ್ನು ಒಗ್ಗೂಡಿಸುವುದು ಅವರ ಧರ್ಮ (ಇಸ್ಲಾಂ) ಮತ್ತು ಭಾಷೆ. ಆದರೆ ತಮ್ಮ ಸಾಂಸ್ಕೃತಿಕ ಒಗ್ಗಟ್ಟಿನ ಬಗ್ಗೆ ಹೆಮ್ಮೆ ಪಡುವ ಸೋಮಾಲಿಗಳು ಅವಕಾಶ ಸಿಕ್ಕಾಗಲೆಲ್ಲಾ ತಮ್ಮವರೇ ಆದ ನೆರೆಯ ಬುಡಕಟ್ಟಿನವರೊಂದಿಗೆ ಕಾಳಗಕ್ಕೆ ಇಳಿಯುವುದೇ ಒಂದು ವೈಚಿತ್ರ್ಯ.

ಶೇ.76ರಷ್ಟು ಸೋಮಾಲಿಗಳು ಇವತ್ತಿಗೂ ಅಲೆಮಾರಿ ಗೊಲ್ಲರು. ತಮ್ಮ ಕುರಿ, ಮೇಕೆ, ಒಂಟೆ ಮತ್ತು ಜಾನುವಾರುಗಳೊಂದಿಗೆ ಅಲೆಮಾರಿ ಜೀವನ ಸಾಗಿಸುವ ಸೋಮಾಲಿಗಳು ಇವತ್ತಿಗೂ ಅವಲಂಬಿಸಿರುವುದು ತಮ್ಮ ಸಾಕುಪ್ರಾಣಿಗಳನ್ನೇ. ಅಷ್ಟೇ ಏಕೆ, ಸೋಮಾಲಿಯಾ ದೇಶದ ಆರ್ಥಿಕತೆ ಕೂಡ ಅವಲಂಬಿತವಾಗಿರುವುದು ತನ್ನ ಅಲೆಮಾರಿ ಜನರ ಜೀವನಾಧಾರಗಳನ್ನೇ. ತನ್ನ ಗೊಲ್ಲರ ಸಾಕುಪ್ರಾಣಿಗಳ ಮಾಂಸ, ಚರ್ಮ ಇತ್ಯಾದಿಗಳನ್ನು ಬೇರೆ ದೇಶಗಳಿಗೆ ಮಾರಾಟ ಮಾಡುವುದರಲ್ಲಿಯೇ ಸೋಮಾಲಿಯಾ ದೇಶ ತನ್ನ ವಿದೇಶ ವಿನಿಮಯದ ಶೇ.90ರಷ್ಟನ್ನು ಗಳಿಸುತ್ತದೆ. ಸೋಮಾಲಿಯಾದ ಜೀವನೋತ್ಪನ್ನಗಳು ಹೆಚ್ಚಾಗಿ ರಫ್ತಾಗುತ್ತಿದ್ದದ್ದು ತನ್ನ ನೆರೆಯಲ್ಲಿರುವ ಸೌದಿ ಅರೇಬಿಯಾಕ್ಕೆ.

ಅಲೆಮಾರಿ ಗೊಲ್ಲರ ಸರಳ ಜೀವನ ಮತ್ತು ಅವರ ಉತ್ಪನ್ನವನ್ನೇ ನಂಬಿದ್ದ ಸೋಮಾಲಿಯಾ ದೇಶ ಸಂಕಷ್ಟದ ದಿನಗಳಿಗೆ ಸಿಲುಕಿದ್ದು 90ರ ದಶಕದಲ್ಲಿ ಅಂತರ್ಯುದ್ಧ ಶುರುವಾದಾಗ. ಆ ಯುದ್ಧದ ಪರಿಣಾಮವಾಗಿ ಮೂರು ಲಕ್ಷ ಜನ ಸಾವನ್ನಪ್ಪಿದರಲ್ಲದೆ, 45 ಲಕ್ಷ ಜನ ಕಾಯಿಲೆ ಹಾಗೂ ಉಪವಾಸದಿಂದ ನರಳಿದರು.

ಈ ದುರಂತದಿಂದ ಸೋಮಾಲಿಯಾ ಚೇತರಿಸಿಕೊಳ್ಳುತ್ತಿರುವಾಗಲೇ, ಸೋಮಾಲಿಯಾದ ಗೊಲ್ಲರ ಉತ್ಪನ್ನಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿಸುತ್ತಿದ್ದ ಸೌದಿ ಅರೇಬಿಯಾ ಒಂದು ಶಾಕ್ ನೀಡಿತು. ಸೋಮಾಲಿಯಾದ ಪ್ರಾಣಿಗಳು ’ಕಣಿವೆ ಜ್ವರ’ದಿಂದ (Rift valley fever) ಬಳಲುತ್ತಿವೆಯೆಂದು ಅವುಗಳ ರಫ್ತನ್ನು ನಿಷೇಧಿಸಿತು. ಅಷ್ಟೇ ಅಲ್ಲದೆ, ಸೋಮಾಲಿಯಾದ ಪ್ರಾಣಿಗಳಿಗೆ ಬದಲಾಗಿ, ಅಲ್ಲಿನ ಮರಮಟ್ಟುಗಳತ್ತ ಸೌದಿ ಅರೇಬಿಯಾ ಕಣ್ಣುಗಳನ್ನಿಟ್ಟಿತು. ಇದ್ದಲಿನ (ಚಾರ್ಕೋಲ್) ಮುಖ್ಯ ಆಧಾರ ಈ ಮರಗಳು. ಅಷ್ಟು ಹೊತ್ತಿಗಾಗಲೇ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದ ಸೋಮಾಲಿಗಳು ಕಂಡಕಂಡಲ್ಲಿ ಮರಮಟ್ಟುಗಳನ್ನು ಕೆಡವಲಾರಂಭಿಸಿದ್ದರು. ನಿಧಾನವಾಗಿ ಸೋಮಾಲಿಯಾದ ಅರಣ್ಯಗಳು ನಾಶವಾಗಲಾರಂಭಿಸಿದವು.

ಆಗ, ತನ್ನ ದೇಶದ ಜನರಿಗೆ ಬುದ್ದಿ ಹೇಳಿದವಳು ಫಾತಿಮಾ ಜಿಬ್ರೆಲ್. ಈಕೆ ಸೋಮಾಲಿಯಾದ ಅಲೆಮಾರಿ ಗೊಲ್ಲರ ಕುಟುಂಬವೊಂದರಲ್ಲಿ ಜನಿಸಿದಾಕೆ. ಆದರೆ ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆದವಳು. ಸಹಸ್ರಾರು ವರ್ಷಗಳಿಂದ ಪರಿಸರವನ್ನೇ ನಂಬಿ ಬದುಕಿದ್ದ ತನ್ನ ಜನ ಹೀಗೆ ಪರಿಸರಕ್ಕೇ ಕೊಡಲಿ ಹಾಕಿದ್ದನ್ನು ಕಂಡ ಫಾತಿಮಾ ತಕ್ಷಣವೇ ಕ್ರಿಯಾಶೀಲವಾದಳು.

ಮರಗಳನ್ನು ಕೆಡವಿದರೆ, ಕಾಡುಗಳನ್ನು ನಾಶಮಾಡಿದರೆ, ಪರಿಸರಕ್ಕೆ ಧಕ್ಕೆ ತಂದರೆ, ಐತಿಹಾಸಿಕವಾಗಿ ಸೋಮಾಲಿಗಳು ನಂಬಿರುವ ಸಾಕುಪ್ರಾಣಿಗಳಿಗೂ ಮತ್ತು ತಮ್ಮ ಅಲೆಮಾರಿ ಜೀವನಶೈಲಿಗೂ ಹಾನಿ ತಂದುಕೊಂಡಂತೆ ಎಂದು ಭಾವಿಸಿದಳು ಫಾತಿಮಾ. “ನಾವು ಅವಲಂಬಿಸಿರುವ ಪರಿಸರವನ್ನು ಒಮ್ಮೆ ನಾಶ ಮಾಡಿದರೆ ಮತ್ತೆ ಲಕ್ಷಾಂತರ ವರ್ಷಗಳಾದರೂ ಅದನ್ನು ಸರಿಪಡಿಸಲಾರೆವು” ಎಂದ ಫಾತಿಮಾ, “ತನಗೆ ಬೇಕಾಗಿರುವ ಇದ್ದಲಿಗಾಗಿ ಸೌದಿ ಅರೇಬಿಯಾ ಸೋಮಾಲಿಯಾಕ್ಕೆ ಮಾಡುತ್ತಿರುವ ಹಾನಿಯನ್ನು ಅರ್ಥೈಸಿಕೊಂಡು ನಮ್ಮ ಬಡದೇಶಕ್ಕೆ ಮಾಡುತ್ತಿರುವ ಅನ್ಯಾಯವನ್ನು ನಿಲ್ಲಿಸಲಿ.” ಎಂದು ಘೋಷಿಸಿದಳು.

ಅಂದಿನಿಂದ ಸೋಮಾಲಿಯಾದ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾಳೆ ಫಾತಿಮಾ. ಈಗ ಮುದುಕಿಯಾಗಿರುವ ಫಾತಿಮಾ ಚಿಕ್ಕಪುಟ್ಟ ಗ್ರಾಮಗಳಲ್ಲೂ ಪರಿಸರದ ರಕ್ಷಣೆಯ ಬಗ್ಗೆ ಜಾಗೃತಿ ನೀಡುತ್ತಿದ್ದಾಳೆ. ಇನ್ನು ಸೋಮಾಲಿಯಾದಲ್ಲಿ ಕಾಡುಗಳು ಸುರಕ್ಷಿತವಾಗಿದ್ದರೆ, ಹಳ್ಳಿಗಳಲ್ಲಿ ಸೌರಶಕ್ತಿ ಬಳಕೆ ಆಗುತ್ತಿದ್ದರೆ ಅದಕ್ಕೆ ಫಾತಿಮಾ ಕಾರಣ. ಆದರೆ ಇದು ಫಾತಿಮಾ ಸುಲಭವಾಗಿ ಗಳಿಸಿದ ಸಾಧನೆಯಲ್ಲ.

ಒಂದು ದಶಕದಿಂದ ಅಂತರ್ಯುದ್ಧವನ್ನು ಎದುರಿಸುತ್ತಿರುವ ಸೋಮಾಲಿಯಾ ಈಗ ಬರಗಾಲದಿಂದ ತತ್ತರಿಸುತ್ತಿದೆ. ಈಗ ಅದು ಅಂತರರಾಷ್ಟ್ರೀಯ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಕೂಡ ಆಗಿದೆ. ಈ ಎಲ್ಲದರ ಮಧ್ಯೆ ಫಾತಿಮಾ ಪರಿಸರವನ್ನು ರಕ್ಷಿಸುವುದಕ್ಕಾಗಿ, ಮಹಿಳೆಯರನ್ನು ಒಗ್ಗೂಡಿಸುತ್ತಿರುವುದಕ್ಕಾಗಿ ಹಲವಾರು ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದಾಳೆ. ಆದರೂ, ಈ ಎಲ್ಲಾ ತೊಂದರೆಗಳ ನಡುವೆಯೂ ಇತ್ತೀಚೆಗೆ ಸೋಮಾಲಿಯಾದ ಒಂದು ರಾಜ್ಯವಾದ ಪುಂಟ್‌ಲ್ಯಾಂಡ್‌ನಿಂದ ಇದ್ದಿಲು ರಫ್ತನ್ನು ನಿಷೇಧ ಮಾಡುವುದರಲ್ಲಿ ಯಶಸ್ವಿಯಾಗಿದ್ದಾಳೆ.

ತನ್ನ ಜನರ ಜೀವನಶೈಲಿಯನ್ನು ಮತ್ತು ಪರಿಸರವನ್ನು ಸಂರಕ್ಷಿಸುವುದರಲ್ಲಿ ಫಾತಿಮಾಳದ್ದು ಏಕಾಂಗಿ ಹೋರಾಟ. ಕಳೆದ ವಾರ ಈ ದಿಟ್ಟ ಮಹಿಳೆಯ ಕೊಡುಗೆಯನ್ನು ಪರಿಗಣಿಸಿ ಪರಿಸರ ಸಂರಕ್ಷಣೆಗಾಗಿ ’ಗೋಲ್ಡ್ ಮ್ಯಾನ್ ಎನ್‌ವೈರ್ನಮೆಂಟ್ ಪ್ರೈಜ’ನ್ನು ಈಕೆಗೆ ನೀಡಲಾಗಿದೆ. ಈ ಪ್ರಶಸ್ತಿ ಬರುವವರೆಗೂ ಫಾತಿಮಾ ಜಿಬ್ರೆಲ್ ಬಗ್ಗೆ ಸೋಮಾಲಿಯಾ ಹೊರತುಪಡಿಸಿ ಹೊರಜಗತ್ತಿಗೆ ಗೊತ್ತಿರಲಿಲ್ಲ. ಆದರೆ ಕಾಳಜಿ ಮತ್ತು ಅರ್ಪಣಾಭಾವ ಇದ್ದರೆ ಯಾರಾದರೂ ತಮ್ಮ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂಬುದಕ್ಕೆ ಫಾತಿಮಾ ಜಿಬ್ರೆಲ್ ಒಂದು ಉದಾಹರಣೆ.

(ಇದು ಗೌರಿಯವರ ಕಂಡಹಾಗೆ ಅಂಕಣ ಬರಹವೊಂದರ ಮರುಪ್ರಕಟಣೆ)


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀಗೆ ಉತ್ತಮ ಬರಹಗಳನ್ನು ಮರು ಪ್ರಕಟಣೆ ಮಾಡುತ್ತಿರಿ. ಧನ್ಯವಾದ. ‌

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...