Homeಅಂಕಣಗಳುಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

ಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

- Advertisement -
- Advertisement -

ಜಗತ್ತಿನ ಅತಿ ಬಡರಾಷ್ಟ್ರಗಳಲ್ಲಿ ಸೋಮಾಲಿಯಾ ಒಂದು. ಆಫ್ರಿಕಾ ಖಂಡದ ಪೂರ್ವಭಾಗದಲ್ಲಿ ಸೌದಿ ಅರೇಬಿಯಾದಂತಹ ಶ್ರೀಮಂತ ರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಸೋಮಾಲಿಯಾ ಬಡತನ, ಅನಕ್ಷರತೆ, ಅಂತರ್ಯುದ್ಧ ಮತ್ತು ದಂಗೆಗಳಿಂದ ತತ್ತರಿಸಿರುವ ದೇಶ.

ಸೋಮಾಲಿಯಾ ಜನರನ್ನು ಒಗ್ಗೂಡಿಸುವುದು ಅವರ ಧರ್ಮ (ಇಸ್ಲಾಂ) ಮತ್ತು ಭಾಷೆ. ಆದರೆ ತಮ್ಮ ಸಾಂಸ್ಕೃತಿಕ ಒಗ್ಗಟ್ಟಿನ ಬಗ್ಗೆ ಹೆಮ್ಮೆ ಪಡುವ ಸೋಮಾಲಿಗಳು ಅವಕಾಶ ಸಿಕ್ಕಾಗಲೆಲ್ಲಾ ತಮ್ಮವರೇ ಆದ ನೆರೆಯ ಬುಡಕಟ್ಟಿನವರೊಂದಿಗೆ ಕಾಳಗಕ್ಕೆ ಇಳಿಯುವುದೇ ಒಂದು ವೈಚಿತ್ರ್ಯ.

ಶೇ.76ರಷ್ಟು ಸೋಮಾಲಿಗಳು ಇವತ್ತಿಗೂ ಅಲೆಮಾರಿ ಗೊಲ್ಲರು. ತಮ್ಮ ಕುರಿ, ಮೇಕೆ, ಒಂಟೆ ಮತ್ತು ಜಾನುವಾರುಗಳೊಂದಿಗೆ ಅಲೆಮಾರಿ ಜೀವನ ಸಾಗಿಸುವ ಸೋಮಾಲಿಗಳು ಇವತ್ತಿಗೂ ಅವಲಂಬಿಸಿರುವುದು ತಮ್ಮ ಸಾಕುಪ್ರಾಣಿಗಳನ್ನೇ. ಅಷ್ಟೇ ಏಕೆ, ಸೋಮಾಲಿಯಾ ದೇಶದ ಆರ್ಥಿಕತೆ ಕೂಡ ಅವಲಂಬಿತವಾಗಿರುವುದು ತನ್ನ ಅಲೆಮಾರಿ ಜನರ ಜೀವನಾಧಾರಗಳನ್ನೇ. ತನ್ನ ಗೊಲ್ಲರ ಸಾಕುಪ್ರಾಣಿಗಳ ಮಾಂಸ, ಚರ್ಮ ಇತ್ಯಾದಿಗಳನ್ನು ಬೇರೆ ದೇಶಗಳಿಗೆ ಮಾರಾಟ ಮಾಡುವುದರಲ್ಲಿಯೇ ಸೋಮಾಲಿಯಾ ದೇಶ ತನ್ನ ವಿದೇಶ ವಿನಿಮಯದ ಶೇ.90ರಷ್ಟನ್ನು ಗಳಿಸುತ್ತದೆ. ಸೋಮಾಲಿಯಾದ ಜೀವನೋತ್ಪನ್ನಗಳು ಹೆಚ್ಚಾಗಿ ರಫ್ತಾಗುತ್ತಿದ್ದದ್ದು ತನ್ನ ನೆರೆಯಲ್ಲಿರುವ ಸೌದಿ ಅರೇಬಿಯಾಕ್ಕೆ.

ಅಲೆಮಾರಿ ಗೊಲ್ಲರ ಸರಳ ಜೀವನ ಮತ್ತು ಅವರ ಉತ್ಪನ್ನವನ್ನೇ ನಂಬಿದ್ದ ಸೋಮಾಲಿಯಾ ದೇಶ ಸಂಕಷ್ಟದ ದಿನಗಳಿಗೆ ಸಿಲುಕಿದ್ದು 90ರ ದಶಕದಲ್ಲಿ ಅಂತರ್ಯುದ್ಧ ಶುರುವಾದಾಗ. ಆ ಯುದ್ಧದ ಪರಿಣಾಮವಾಗಿ ಮೂರು ಲಕ್ಷ ಜನ ಸಾವನ್ನಪ್ಪಿದರಲ್ಲದೆ, 45 ಲಕ್ಷ ಜನ ಕಾಯಿಲೆ ಹಾಗೂ ಉಪವಾಸದಿಂದ ನರಳಿದರು.

ಈ ದುರಂತದಿಂದ ಸೋಮಾಲಿಯಾ ಚೇತರಿಸಿಕೊಳ್ಳುತ್ತಿರುವಾಗಲೇ, ಸೋಮಾಲಿಯಾದ ಗೊಲ್ಲರ ಉತ್ಪನ್ನಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿಸುತ್ತಿದ್ದ ಸೌದಿ ಅರೇಬಿಯಾ ಒಂದು ಶಾಕ್ ನೀಡಿತು. ಸೋಮಾಲಿಯಾದ ಪ್ರಾಣಿಗಳು ’ಕಣಿವೆ ಜ್ವರ’ದಿಂದ (Rift valley fever) ಬಳಲುತ್ತಿವೆಯೆಂದು ಅವುಗಳ ರಫ್ತನ್ನು ನಿಷೇಧಿಸಿತು. ಅಷ್ಟೇ ಅಲ್ಲದೆ, ಸೋಮಾಲಿಯಾದ ಪ್ರಾಣಿಗಳಿಗೆ ಬದಲಾಗಿ, ಅಲ್ಲಿನ ಮರಮಟ್ಟುಗಳತ್ತ ಸೌದಿ ಅರೇಬಿಯಾ ಕಣ್ಣುಗಳನ್ನಿಟ್ಟಿತು. ಇದ್ದಲಿನ (ಚಾರ್ಕೋಲ್) ಮುಖ್ಯ ಆಧಾರ ಈ ಮರಗಳು. ಅಷ್ಟು ಹೊತ್ತಿಗಾಗಲೇ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದ ಸೋಮಾಲಿಗಳು ಕಂಡಕಂಡಲ್ಲಿ ಮರಮಟ್ಟುಗಳನ್ನು ಕೆಡವಲಾರಂಭಿಸಿದ್ದರು. ನಿಧಾನವಾಗಿ ಸೋಮಾಲಿಯಾದ ಅರಣ್ಯಗಳು ನಾಶವಾಗಲಾರಂಭಿಸಿದವು.

ಆಗ, ತನ್ನ ದೇಶದ ಜನರಿಗೆ ಬುದ್ದಿ ಹೇಳಿದವಳು ಫಾತಿಮಾ ಜಿಬ್ರೆಲ್. ಈಕೆ ಸೋಮಾಲಿಯಾದ ಅಲೆಮಾರಿ ಗೊಲ್ಲರ ಕುಟುಂಬವೊಂದರಲ್ಲಿ ಜನಿಸಿದಾಕೆ. ಆದರೆ ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆದವಳು. ಸಹಸ್ರಾರು ವರ್ಷಗಳಿಂದ ಪರಿಸರವನ್ನೇ ನಂಬಿ ಬದುಕಿದ್ದ ತನ್ನ ಜನ ಹೀಗೆ ಪರಿಸರಕ್ಕೇ ಕೊಡಲಿ ಹಾಕಿದ್ದನ್ನು ಕಂಡ ಫಾತಿಮಾ ತಕ್ಷಣವೇ ಕ್ರಿಯಾಶೀಲವಾದಳು.

ಮರಗಳನ್ನು ಕೆಡವಿದರೆ, ಕಾಡುಗಳನ್ನು ನಾಶಮಾಡಿದರೆ, ಪರಿಸರಕ್ಕೆ ಧಕ್ಕೆ ತಂದರೆ, ಐತಿಹಾಸಿಕವಾಗಿ ಸೋಮಾಲಿಗಳು ನಂಬಿರುವ ಸಾಕುಪ್ರಾಣಿಗಳಿಗೂ ಮತ್ತು ತಮ್ಮ ಅಲೆಮಾರಿ ಜೀವನಶೈಲಿಗೂ ಹಾನಿ ತಂದುಕೊಂಡಂತೆ ಎಂದು ಭಾವಿಸಿದಳು ಫಾತಿಮಾ. “ನಾವು ಅವಲಂಬಿಸಿರುವ ಪರಿಸರವನ್ನು ಒಮ್ಮೆ ನಾಶ ಮಾಡಿದರೆ ಮತ್ತೆ ಲಕ್ಷಾಂತರ ವರ್ಷಗಳಾದರೂ ಅದನ್ನು ಸರಿಪಡಿಸಲಾರೆವು” ಎಂದ ಫಾತಿಮಾ, “ತನಗೆ ಬೇಕಾಗಿರುವ ಇದ್ದಲಿಗಾಗಿ ಸೌದಿ ಅರೇಬಿಯಾ ಸೋಮಾಲಿಯಾಕ್ಕೆ ಮಾಡುತ್ತಿರುವ ಹಾನಿಯನ್ನು ಅರ್ಥೈಸಿಕೊಂಡು ನಮ್ಮ ಬಡದೇಶಕ್ಕೆ ಮಾಡುತ್ತಿರುವ ಅನ್ಯಾಯವನ್ನು ನಿಲ್ಲಿಸಲಿ.” ಎಂದು ಘೋಷಿಸಿದಳು.

ಅಂದಿನಿಂದ ಸೋಮಾಲಿಯಾದ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾಳೆ ಫಾತಿಮಾ. ಈಗ ಮುದುಕಿಯಾಗಿರುವ ಫಾತಿಮಾ ಚಿಕ್ಕಪುಟ್ಟ ಗ್ರಾಮಗಳಲ್ಲೂ ಪರಿಸರದ ರಕ್ಷಣೆಯ ಬಗ್ಗೆ ಜಾಗೃತಿ ನೀಡುತ್ತಿದ್ದಾಳೆ. ಇನ್ನು ಸೋಮಾಲಿಯಾದಲ್ಲಿ ಕಾಡುಗಳು ಸುರಕ್ಷಿತವಾಗಿದ್ದರೆ, ಹಳ್ಳಿಗಳಲ್ಲಿ ಸೌರಶಕ್ತಿ ಬಳಕೆ ಆಗುತ್ತಿದ್ದರೆ ಅದಕ್ಕೆ ಫಾತಿಮಾ ಕಾರಣ. ಆದರೆ ಇದು ಫಾತಿಮಾ ಸುಲಭವಾಗಿ ಗಳಿಸಿದ ಸಾಧನೆಯಲ್ಲ.

ಒಂದು ದಶಕದಿಂದ ಅಂತರ್ಯುದ್ಧವನ್ನು ಎದುರಿಸುತ್ತಿರುವ ಸೋಮಾಲಿಯಾ ಈಗ ಬರಗಾಲದಿಂದ ತತ್ತರಿಸುತ್ತಿದೆ. ಈಗ ಅದು ಅಂತರರಾಷ್ಟ್ರೀಯ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಕೂಡ ಆಗಿದೆ. ಈ ಎಲ್ಲದರ ಮಧ್ಯೆ ಫಾತಿಮಾ ಪರಿಸರವನ್ನು ರಕ್ಷಿಸುವುದಕ್ಕಾಗಿ, ಮಹಿಳೆಯರನ್ನು ಒಗ್ಗೂಡಿಸುತ್ತಿರುವುದಕ್ಕಾಗಿ ಹಲವಾರು ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದಾಳೆ. ಆದರೂ, ಈ ಎಲ್ಲಾ ತೊಂದರೆಗಳ ನಡುವೆಯೂ ಇತ್ತೀಚೆಗೆ ಸೋಮಾಲಿಯಾದ ಒಂದು ರಾಜ್ಯವಾದ ಪುಂಟ್‌ಲ್ಯಾಂಡ್‌ನಿಂದ ಇದ್ದಿಲು ರಫ್ತನ್ನು ನಿಷೇಧ ಮಾಡುವುದರಲ್ಲಿ ಯಶಸ್ವಿಯಾಗಿದ್ದಾಳೆ.

ತನ್ನ ಜನರ ಜೀವನಶೈಲಿಯನ್ನು ಮತ್ತು ಪರಿಸರವನ್ನು ಸಂರಕ್ಷಿಸುವುದರಲ್ಲಿ ಫಾತಿಮಾಳದ್ದು ಏಕಾಂಗಿ ಹೋರಾಟ. ಕಳೆದ ವಾರ ಈ ದಿಟ್ಟ ಮಹಿಳೆಯ ಕೊಡುಗೆಯನ್ನು ಪರಿಗಣಿಸಿ ಪರಿಸರ ಸಂರಕ್ಷಣೆಗಾಗಿ ’ಗೋಲ್ಡ್ ಮ್ಯಾನ್ ಎನ್‌ವೈರ್ನಮೆಂಟ್ ಪ್ರೈಜ’ನ್ನು ಈಕೆಗೆ ನೀಡಲಾಗಿದೆ. ಈ ಪ್ರಶಸ್ತಿ ಬರುವವರೆಗೂ ಫಾತಿಮಾ ಜಿಬ್ರೆಲ್ ಬಗ್ಗೆ ಸೋಮಾಲಿಯಾ ಹೊರತುಪಡಿಸಿ ಹೊರಜಗತ್ತಿಗೆ ಗೊತ್ತಿರಲಿಲ್ಲ. ಆದರೆ ಕಾಳಜಿ ಮತ್ತು ಅರ್ಪಣಾಭಾವ ಇದ್ದರೆ ಯಾರಾದರೂ ತಮ್ಮ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂಬುದಕ್ಕೆ ಫಾತಿಮಾ ಜಿಬ್ರೆಲ್ ಒಂದು ಉದಾಹರಣೆ.

(ಇದು ಗೌರಿಯವರ ಕಂಡಹಾಗೆ ಅಂಕಣ ಬರಹವೊಂದರ ಮರುಪ್ರಕಟಣೆ)


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀಗೆ ಉತ್ತಮ ಬರಹಗಳನ್ನು ಮರು ಪ್ರಕಟಣೆ ಮಾಡುತ್ತಿರಿ. ಧನ್ಯವಾದ. ‌

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...