Homeಅಂಕಣಗಳುಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

ಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

- Advertisement -
- Advertisement -

ಜಗತ್ತಿನ ಅತಿ ಬಡರಾಷ್ಟ್ರಗಳಲ್ಲಿ ಸೋಮಾಲಿಯಾ ಒಂದು. ಆಫ್ರಿಕಾ ಖಂಡದ ಪೂರ್ವಭಾಗದಲ್ಲಿ ಸೌದಿ ಅರೇಬಿಯಾದಂತಹ ಶ್ರೀಮಂತ ರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಸೋಮಾಲಿಯಾ ಬಡತನ, ಅನಕ್ಷರತೆ, ಅಂತರ್ಯುದ್ಧ ಮತ್ತು ದಂಗೆಗಳಿಂದ ತತ್ತರಿಸಿರುವ ದೇಶ.

ಸೋಮಾಲಿಯಾ ಜನರನ್ನು ಒಗ್ಗೂಡಿಸುವುದು ಅವರ ಧರ್ಮ (ಇಸ್ಲಾಂ) ಮತ್ತು ಭಾಷೆ. ಆದರೆ ತಮ್ಮ ಸಾಂಸ್ಕೃತಿಕ ಒಗ್ಗಟ್ಟಿನ ಬಗ್ಗೆ ಹೆಮ್ಮೆ ಪಡುವ ಸೋಮಾಲಿಗಳು ಅವಕಾಶ ಸಿಕ್ಕಾಗಲೆಲ್ಲಾ ತಮ್ಮವರೇ ಆದ ನೆರೆಯ ಬುಡಕಟ್ಟಿನವರೊಂದಿಗೆ ಕಾಳಗಕ್ಕೆ ಇಳಿಯುವುದೇ ಒಂದು ವೈಚಿತ್ರ್ಯ.

ಶೇ.76ರಷ್ಟು ಸೋಮಾಲಿಗಳು ಇವತ್ತಿಗೂ ಅಲೆಮಾರಿ ಗೊಲ್ಲರು. ತಮ್ಮ ಕುರಿ, ಮೇಕೆ, ಒಂಟೆ ಮತ್ತು ಜಾನುವಾರುಗಳೊಂದಿಗೆ ಅಲೆಮಾರಿ ಜೀವನ ಸಾಗಿಸುವ ಸೋಮಾಲಿಗಳು ಇವತ್ತಿಗೂ ಅವಲಂಬಿಸಿರುವುದು ತಮ್ಮ ಸಾಕುಪ್ರಾಣಿಗಳನ್ನೇ. ಅಷ್ಟೇ ಏಕೆ, ಸೋಮಾಲಿಯಾ ದೇಶದ ಆರ್ಥಿಕತೆ ಕೂಡ ಅವಲಂಬಿತವಾಗಿರುವುದು ತನ್ನ ಅಲೆಮಾರಿ ಜನರ ಜೀವನಾಧಾರಗಳನ್ನೇ. ತನ್ನ ಗೊಲ್ಲರ ಸಾಕುಪ್ರಾಣಿಗಳ ಮಾಂಸ, ಚರ್ಮ ಇತ್ಯಾದಿಗಳನ್ನು ಬೇರೆ ದೇಶಗಳಿಗೆ ಮಾರಾಟ ಮಾಡುವುದರಲ್ಲಿಯೇ ಸೋಮಾಲಿಯಾ ದೇಶ ತನ್ನ ವಿದೇಶ ವಿನಿಮಯದ ಶೇ.90ರಷ್ಟನ್ನು ಗಳಿಸುತ್ತದೆ. ಸೋಮಾಲಿಯಾದ ಜೀವನೋತ್ಪನ್ನಗಳು ಹೆಚ್ಚಾಗಿ ರಫ್ತಾಗುತ್ತಿದ್ದದ್ದು ತನ್ನ ನೆರೆಯಲ್ಲಿರುವ ಸೌದಿ ಅರೇಬಿಯಾಕ್ಕೆ.

ಅಲೆಮಾರಿ ಗೊಲ್ಲರ ಸರಳ ಜೀವನ ಮತ್ತು ಅವರ ಉತ್ಪನ್ನವನ್ನೇ ನಂಬಿದ್ದ ಸೋಮಾಲಿಯಾ ದೇಶ ಸಂಕಷ್ಟದ ದಿನಗಳಿಗೆ ಸಿಲುಕಿದ್ದು 90ರ ದಶಕದಲ್ಲಿ ಅಂತರ್ಯುದ್ಧ ಶುರುವಾದಾಗ. ಆ ಯುದ್ಧದ ಪರಿಣಾಮವಾಗಿ ಮೂರು ಲಕ್ಷ ಜನ ಸಾವನ್ನಪ್ಪಿದರಲ್ಲದೆ, 45 ಲಕ್ಷ ಜನ ಕಾಯಿಲೆ ಹಾಗೂ ಉಪವಾಸದಿಂದ ನರಳಿದರು.

ಈ ದುರಂತದಿಂದ ಸೋಮಾಲಿಯಾ ಚೇತರಿಸಿಕೊಳ್ಳುತ್ತಿರುವಾಗಲೇ, ಸೋಮಾಲಿಯಾದ ಗೊಲ್ಲರ ಉತ್ಪನ್ನಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿಸುತ್ತಿದ್ದ ಸೌದಿ ಅರೇಬಿಯಾ ಒಂದು ಶಾಕ್ ನೀಡಿತು. ಸೋಮಾಲಿಯಾದ ಪ್ರಾಣಿಗಳು ’ಕಣಿವೆ ಜ್ವರ’ದಿಂದ (Rift valley fever) ಬಳಲುತ್ತಿವೆಯೆಂದು ಅವುಗಳ ರಫ್ತನ್ನು ನಿಷೇಧಿಸಿತು. ಅಷ್ಟೇ ಅಲ್ಲದೆ, ಸೋಮಾಲಿಯಾದ ಪ್ರಾಣಿಗಳಿಗೆ ಬದಲಾಗಿ, ಅಲ್ಲಿನ ಮರಮಟ್ಟುಗಳತ್ತ ಸೌದಿ ಅರೇಬಿಯಾ ಕಣ್ಣುಗಳನ್ನಿಟ್ಟಿತು. ಇದ್ದಲಿನ (ಚಾರ್ಕೋಲ್) ಮುಖ್ಯ ಆಧಾರ ಈ ಮರಗಳು. ಅಷ್ಟು ಹೊತ್ತಿಗಾಗಲೇ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದ ಸೋಮಾಲಿಗಳು ಕಂಡಕಂಡಲ್ಲಿ ಮರಮಟ್ಟುಗಳನ್ನು ಕೆಡವಲಾರಂಭಿಸಿದ್ದರು. ನಿಧಾನವಾಗಿ ಸೋಮಾಲಿಯಾದ ಅರಣ್ಯಗಳು ನಾಶವಾಗಲಾರಂಭಿಸಿದವು.

ಆಗ, ತನ್ನ ದೇಶದ ಜನರಿಗೆ ಬುದ್ದಿ ಹೇಳಿದವಳು ಫಾತಿಮಾ ಜಿಬ್ರೆಲ್. ಈಕೆ ಸೋಮಾಲಿಯಾದ ಅಲೆಮಾರಿ ಗೊಲ್ಲರ ಕುಟುಂಬವೊಂದರಲ್ಲಿ ಜನಿಸಿದಾಕೆ. ಆದರೆ ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆದವಳು. ಸಹಸ್ರಾರು ವರ್ಷಗಳಿಂದ ಪರಿಸರವನ್ನೇ ನಂಬಿ ಬದುಕಿದ್ದ ತನ್ನ ಜನ ಹೀಗೆ ಪರಿಸರಕ್ಕೇ ಕೊಡಲಿ ಹಾಕಿದ್ದನ್ನು ಕಂಡ ಫಾತಿಮಾ ತಕ್ಷಣವೇ ಕ್ರಿಯಾಶೀಲವಾದಳು.

ಮರಗಳನ್ನು ಕೆಡವಿದರೆ, ಕಾಡುಗಳನ್ನು ನಾಶಮಾಡಿದರೆ, ಪರಿಸರಕ್ಕೆ ಧಕ್ಕೆ ತಂದರೆ, ಐತಿಹಾಸಿಕವಾಗಿ ಸೋಮಾಲಿಗಳು ನಂಬಿರುವ ಸಾಕುಪ್ರಾಣಿಗಳಿಗೂ ಮತ್ತು ತಮ್ಮ ಅಲೆಮಾರಿ ಜೀವನಶೈಲಿಗೂ ಹಾನಿ ತಂದುಕೊಂಡಂತೆ ಎಂದು ಭಾವಿಸಿದಳು ಫಾತಿಮಾ. “ನಾವು ಅವಲಂಬಿಸಿರುವ ಪರಿಸರವನ್ನು ಒಮ್ಮೆ ನಾಶ ಮಾಡಿದರೆ ಮತ್ತೆ ಲಕ್ಷಾಂತರ ವರ್ಷಗಳಾದರೂ ಅದನ್ನು ಸರಿಪಡಿಸಲಾರೆವು” ಎಂದ ಫಾತಿಮಾ, “ತನಗೆ ಬೇಕಾಗಿರುವ ಇದ್ದಲಿಗಾಗಿ ಸೌದಿ ಅರೇಬಿಯಾ ಸೋಮಾಲಿಯಾಕ್ಕೆ ಮಾಡುತ್ತಿರುವ ಹಾನಿಯನ್ನು ಅರ್ಥೈಸಿಕೊಂಡು ನಮ್ಮ ಬಡದೇಶಕ್ಕೆ ಮಾಡುತ್ತಿರುವ ಅನ್ಯಾಯವನ್ನು ನಿಲ್ಲಿಸಲಿ.” ಎಂದು ಘೋಷಿಸಿದಳು.

ಅಂದಿನಿಂದ ಸೋಮಾಲಿಯಾದ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾಳೆ ಫಾತಿಮಾ. ಈಗ ಮುದುಕಿಯಾಗಿರುವ ಫಾತಿಮಾ ಚಿಕ್ಕಪುಟ್ಟ ಗ್ರಾಮಗಳಲ್ಲೂ ಪರಿಸರದ ರಕ್ಷಣೆಯ ಬಗ್ಗೆ ಜಾಗೃತಿ ನೀಡುತ್ತಿದ್ದಾಳೆ. ಇನ್ನು ಸೋಮಾಲಿಯಾದಲ್ಲಿ ಕಾಡುಗಳು ಸುರಕ್ಷಿತವಾಗಿದ್ದರೆ, ಹಳ್ಳಿಗಳಲ್ಲಿ ಸೌರಶಕ್ತಿ ಬಳಕೆ ಆಗುತ್ತಿದ್ದರೆ ಅದಕ್ಕೆ ಫಾತಿಮಾ ಕಾರಣ. ಆದರೆ ಇದು ಫಾತಿಮಾ ಸುಲಭವಾಗಿ ಗಳಿಸಿದ ಸಾಧನೆಯಲ್ಲ.

ಒಂದು ದಶಕದಿಂದ ಅಂತರ್ಯುದ್ಧವನ್ನು ಎದುರಿಸುತ್ತಿರುವ ಸೋಮಾಲಿಯಾ ಈಗ ಬರಗಾಲದಿಂದ ತತ್ತರಿಸುತ್ತಿದೆ. ಈಗ ಅದು ಅಂತರರಾಷ್ಟ್ರೀಯ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಕೂಡ ಆಗಿದೆ. ಈ ಎಲ್ಲದರ ಮಧ್ಯೆ ಫಾತಿಮಾ ಪರಿಸರವನ್ನು ರಕ್ಷಿಸುವುದಕ್ಕಾಗಿ, ಮಹಿಳೆಯರನ್ನು ಒಗ್ಗೂಡಿಸುತ್ತಿರುವುದಕ್ಕಾಗಿ ಹಲವಾರು ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದಾಳೆ. ಆದರೂ, ಈ ಎಲ್ಲಾ ತೊಂದರೆಗಳ ನಡುವೆಯೂ ಇತ್ತೀಚೆಗೆ ಸೋಮಾಲಿಯಾದ ಒಂದು ರಾಜ್ಯವಾದ ಪುಂಟ್‌ಲ್ಯಾಂಡ್‌ನಿಂದ ಇದ್ದಿಲು ರಫ್ತನ್ನು ನಿಷೇಧ ಮಾಡುವುದರಲ್ಲಿ ಯಶಸ್ವಿಯಾಗಿದ್ದಾಳೆ.

ತನ್ನ ಜನರ ಜೀವನಶೈಲಿಯನ್ನು ಮತ್ತು ಪರಿಸರವನ್ನು ಸಂರಕ್ಷಿಸುವುದರಲ್ಲಿ ಫಾತಿಮಾಳದ್ದು ಏಕಾಂಗಿ ಹೋರಾಟ. ಕಳೆದ ವಾರ ಈ ದಿಟ್ಟ ಮಹಿಳೆಯ ಕೊಡುಗೆಯನ್ನು ಪರಿಗಣಿಸಿ ಪರಿಸರ ಸಂರಕ್ಷಣೆಗಾಗಿ ’ಗೋಲ್ಡ್ ಮ್ಯಾನ್ ಎನ್‌ವೈರ್ನಮೆಂಟ್ ಪ್ರೈಜ’ನ್ನು ಈಕೆಗೆ ನೀಡಲಾಗಿದೆ. ಈ ಪ್ರಶಸ್ತಿ ಬರುವವರೆಗೂ ಫಾತಿಮಾ ಜಿಬ್ರೆಲ್ ಬಗ್ಗೆ ಸೋಮಾಲಿಯಾ ಹೊರತುಪಡಿಸಿ ಹೊರಜಗತ್ತಿಗೆ ಗೊತ್ತಿರಲಿಲ್ಲ. ಆದರೆ ಕಾಳಜಿ ಮತ್ತು ಅರ್ಪಣಾಭಾವ ಇದ್ದರೆ ಯಾರಾದರೂ ತಮ್ಮ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂಬುದಕ್ಕೆ ಫಾತಿಮಾ ಜಿಬ್ರೆಲ್ ಒಂದು ಉದಾಹರಣೆ.

(ಇದು ಗೌರಿಯವರ ಕಂಡಹಾಗೆ ಅಂಕಣ ಬರಹವೊಂದರ ಮರುಪ್ರಕಟಣೆ)


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀಗೆ ಉತ್ತಮ ಬರಹಗಳನ್ನು ಮರು ಪ್ರಕಟಣೆ ಮಾಡುತ್ತಿರಿ. ಧನ್ಯವಾದ. ‌

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...