Homeಕರ್ನಾಟಕಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು

- Advertisement -
- Advertisement -

ಸುರತ್ಕಲ್‌ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಫೇಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಈ ಮೂವರನ್ನು A1, A2, ಮತ್ತು A3 ಆರೋಪಿಗಳೆಂದು ಹೆಸರಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದಲ್ಲಿ ಜಾಮಿನು ಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರು ಆರೋಪಿಗಳಿಗೆ ತಲಾ ಒಂದು ಲಕ್ಷ ರೂ. ಬಾಂಡ್ ಮೇಲೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು, ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು,  ಭವಿಷ್ಯದಲ್ಲಿ ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಬಾರದು, ಮೊಕದ್ದಮೆ ವಿಲೇವಾರಿಯಾಗದೆ ನ್ಯಾಯಾಲಯದ ಅನುಮತಿಯಿಲ್ಲದೆ ಊರು ಬಿಟ್ಟು ಹೋಗುವಂತಿಲ್ಲ,  ಮೂವರು ಕೂಡ ಪ್ರತಿ ರವಿವಾರ ಸುರತ್ಕಲ್ ಪೊಲೀಸ್ ಠಾಣೆಗೆ ಹಾಜರಾಗಿ ಹಾಜರಾತಿ ಸಲ್ಲಿಸಬೇಕು ಎಂದು ಕೋರ್ಟ್‌ಆರೋಪಿಗಳಿಗೆ ಷರತ್ತು ವಿಧಿಸಿದೆ.

2022ರ ಜುಲೈ 28ರಂದು ರಾತ್ರಿ 8 ಗಂಟೆಯ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ತನ್ನ ಸ್ನೇಹಿತನ ಅಂಗಡಿಗೆ ತೆರಳಿದ್ದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್‌ನನ್ನು  ದುಷ್ಕರ್ಮಿಗಳು ತಲವಾರುಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ನೆಟ್ಟಾರು ಪ್ರವೀಣ್‌ ಹತ್ಯೆ ಪ್ರಕರಣದ ಎರಡು ದಿನಗಳ ನಡೆದ ಈ ಕೊಲೆ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಕರಾವಳಿಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಸೇರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 5 ಮಂದಿ ಈಗಾಗಲೇ ಜಾಮೀನು ಪಡೆದುಕೊಂಡು ಹೊರಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ಳಾರೆ ಸಮೀಪದ ಮಸೂದ್‌ ಹಾಗೂ ನೆಟ್ಟಾರಿನ ಪ್ರವೀಣ್‌ ಕೊಲೆ ಬೆನ್ನಲ್ಲಿ ಪ್ರಕ್ಷುಬ್ಧವಾಗಿದ್ದ ಕರಾವಳಿಯಲ್ಲಿ ಫಾಝಿಲ್‌ ಕೊಲೆ ನಡೆದಿತ್ತು. ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ ಎಂದು ಬಜರಂಗದಳ ನಾಯಕ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದ, ಈ ಕುರಿತ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.

ಪ್ರವೀಣ್‌ ನೆಟ್ಟಾರು ಪ್ರಕರಣವನ್ನು NIA ತನಿಖೆಗೆ ವಹಿಸಿದ್ದ ಅಂದಿನ ಬಿಜೆಪಿ ಸರಕಾರ ಫಾಝಿಲ್ ಕೊಲೆಯನ್ನು NIAಗೆ ವಹಿಸಿಲ್ಲ ಮತ್ತು ಫಾಝಿಲ್ ಕೊಲೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಕೊಲೆಗೆ ಷಡ್ಯಂತ್ರ ರೂಪಿಸಿದ ಸೂತ್ರದಾರಿಗಳನ್ನು ಬಂಧಿಸಿಲ್ಲ ಎಂದು ಫಾಝಿಲ್‌ನ ತಂದೆ ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದರು.

 

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಶೋಮಾ ಸೇನ್ ಇನ್ಮುಂದೆ ಕಸ್ಟಡಿಯಲ್ಲಿ ಇರಬೇಕಿಲ್ಲ ಎಂದ ಎನ್‌ಐಎ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...