Homeಮುಖಪುಟಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

ಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

- Advertisement -
- Advertisement -

2024ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿಭಿನ್ನ ರೀತಿಯಲ್ಲಿ ಪ್ರಚಾರವನ್ನು ಮಾಡುತ್ತಿದ್ದು, ಇದೀಗ ಮೋದಿ ಬಗ್ಗೆ ಪ್ರಚಾರಕ್ಕೆ ಕೋಟ್ಯಾಂತರ ರೂ. ಸರಕಾರದ ಹಣ ದುರ್ಬಳಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ವಿತರಿಸಲಾಗುವ ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋವನ್ನು ಸ್ಪಷ್ಟವಾಗಿ ಪ್ರದರ್ಶಿಸಲು ಕೇಂದ್ರ ಸರ್ಕಾರವು ಮುಂದಾಗಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ, ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಕುಟುಂಬಗಳ (PHH) ಸುಮಾರು 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ. 2020-21 ಮತ್ತು 2021-22ರ ಹಣಕಾಸು ವರ್ಷಗಳಲ್ಲಿ PMGKAY ಅನುಷ್ಠಾನದ ಸಮಯದಲ್ಲಿ 75 ಕೋಟಿಗೂ ಹೆಚ್ಚು ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಜನವರಿ 12, 2024ರ ಸುತ್ತೋಲೆಯಲ್ಲಿ, ಭಾರತೀಯ ಆಹಾರ ನಿಗಮವು (ಎಫ್‌ಸಿಐ) ತನ್ನ ಎಲ್ಲಾ 26 ಪ್ರಾದೇಶಿಕ ಕಚೇರಿಗಳಿಗೆ ಪಿಎಂಜಿಕೆಎವೈ ಅಡಿಯಲ್ಲಿ ಆಹಾರ ಧಾನ್ಯಗಳನ್ನು ವಿತರಿಸುವಾಗ, ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋಗಳನ್ನು ಹಾಕುವಂತೆ ಸೂಚಿಸಲಾಗಿದೆ.

ಇದರಿಂದಾಗಿ ರಾಜಸ್ಥಾನ ಒಂದರಲ್ಲೇ ಮೋದಿಯ ಪೋಟೋ ಇರುವ ಬ್ಯಾಗ್‌ಗಳಿಗೆ 13.29 ಕೋಟಿ ಬೆಲೆ ರೂ.ವೆಚ್ಚ ಮಾಡಲಾಗಿದೆ. ಸಾಮಾಜಿ ಕಾರ್ಯಕರ್ತ ಅಜಯ್ ಬೋಸ್‌ ಅವರು ರಾಜಸ್ಥಾನದ ಜೈಪುರದ ಪ್ರಾದೇಶಿಕ ಕಚೇರಿಯಲ್ಲಿ ಎಫ್‌ಸಿಐನ ಶೇಖರಣಾ ವಿಭಾಗಕ್ಕೆ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಈ ಉತ್ತರವನ್ನು ನೀಡಲಾಗಿದೆ. ರಾಜಸ್ಥಾನವು ಪ್ರತಿ ಚೀಲಕ್ಕೆ 12.375 ದರದಲ್ಲಿ 1.07 ಕೋಟಿ ಸಿಂಥೆಟಿಕ್ ಬ್ಯಾಗ್‌ಗಳ ಪೂರೈಕೆ ಆದೇಶವನ್ನು ನೀಡಿದೆ.

ರಾಜಸ್ಥಾನದಲ್ಲಿ ಈ ಕುರಿತು ಟೆಂಡರ್‌ಗಳನ್ನು ಐದು ಕಂಪನಿಗಳಿಗೆ ನೀಡಲಾಗಿದೆ, ರಾಜಸ್ಥಾನ ಮೂಲದ ಸಲಾಸರ್ ಟೆಕ್ನೋಟೆಕ್ಸ್ ಪ್ರೈವೇಟ್ ಲಿಮಿಟೆಡ್, ರಾಜಸ್ಥಾನ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಲಿಮಿಟೆಡ್, ಅಲಯನ್ಸ್ ಪಾಲಿಸಾಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಮೂಲದ ಮೋರ್ ಟೆಕ್‌ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಬ್ಲಾಸ್ಟ್ ಇಂಡಸ್ಟ್ರೀಸ್‌ಗೆ ಟೆಂಡರ್‌ ನೀಡಲಾಗಿದೆ.

ರಾಜಸ್ಥಾನವು ಪ್ರತಿ ಚೀಲಕ್ಕೆ 12.375ರಂತೆ ಒಪ್ಪಂದವನ್ನು ನೀಡಿದರೆ, ನಾಗಾಲ್ಯಾಂಡ್ ಕೇವಲ ಒಂದು ಕಂಪನಿಗೆ ಇದರ ಗುತ್ತಿಗೆ ನೀಡಿದೆ. ರಾಜಸ್ಥಾನ್ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಪ್ರತಿ ಚೀಲಕ್ಕೆ 9.30ಕ್ಕೆ ನೀಡುವ ಬಗ್ಗೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ದಿಮಾಪುರ್‌ನಲ್ಲಿರುವ ಎಫ್‌ಸಿಐ ಪ್ರಾದೇಶಿಕ ಕಚೇರಿ ಆರ್‌ಟಿಐ ಉತ್ತರದಲ್ಲಿ ತಿಳಿಸಿದೆ. ತಮಿಳುನಾಡು 1.14 ಕೋಟಿ ಚೀಲಗಳ ಪೂರೈಕೆಗೆ ಟೆಂಡರ್ ಕರೆದಿದೆ. ತಮಿಳುನಾಡಿನ ಎಫ್‌ಸಿಐನ ಪ್ರಾದೇಶಿಕ ಕಚೇರಿಯು ನೀಡಿರುವ ಆರ್‌ಟಿಐ ಮಾಹಿತಿಯಲ್ಲಿ ಇದು ಬಯಲಾಗಿದೆ. ಮಹಾರಾಷ್ಟ್ರ ಇನ್ನೂ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ.

ಸಾಂಕ್ರಾಮಿಕ ರೋಗದ ವೇಳೆ 2020ರಲ್ಲಿ ಪ್ರಾರಂಭವಾದ PMGKAY ಯೋಜನೆಯಡಿಯಲ್ಲಿನ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಇತ್ತೀಚೆಗೆ ಮುಂದುವರಿಸಲಾಗಿತ್ತು. ಇದೀಗ ಈ ಯೋಜನೆಯ ಅಕ್ಕಿ ಚೀಲದಲ್ಲಿ ಮೋದಿ ಪೋಟೋವನ್ನು ಹಾಕುವಂತೆ ಸೂಚಿಸಲಾಗಿದೆ. ಇದು ಚುನಾವಣಾ ಪ್ರಚಾರದ ಭಾಗ ಎಂದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್‌ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ಕೇರಳ ಸರಕಾರ ತಿರಸ್ಕರಿಸಿತ್ತು. ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿದೆ. ಇದು ಸರಿಯಲ್ಲ ಮತ್ತು ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ ಎಂದು ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರಚಾರದ ಭಾಗದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ದೊಡ್ಡ ಭಾಗವಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ ಎನ್ನವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...