Homeಮುಖಪುಟಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

ಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

- Advertisement -
- Advertisement -

2024ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿಭಿನ್ನ ರೀತಿಯಲ್ಲಿ ಪ್ರಚಾರವನ್ನು ಮಾಡುತ್ತಿದ್ದು, ಇದೀಗ ಮೋದಿ ಬಗ್ಗೆ ಪ್ರಚಾರಕ್ಕೆ ಕೋಟ್ಯಾಂತರ ರೂ. ಸರಕಾರದ ಹಣ ದುರ್ಬಳಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ವಿತರಿಸಲಾಗುವ ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋವನ್ನು ಸ್ಪಷ್ಟವಾಗಿ ಪ್ರದರ್ಶಿಸಲು ಕೇಂದ್ರ ಸರ್ಕಾರವು ಮುಂದಾಗಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ, ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಕುಟುಂಬಗಳ (PHH) ಸುಮಾರು 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ. 2020-21 ಮತ್ತು 2021-22ರ ಹಣಕಾಸು ವರ್ಷಗಳಲ್ಲಿ PMGKAY ಅನುಷ್ಠಾನದ ಸಮಯದಲ್ಲಿ 75 ಕೋಟಿಗೂ ಹೆಚ್ಚು ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಜನವರಿ 12, 2024ರ ಸುತ್ತೋಲೆಯಲ್ಲಿ, ಭಾರತೀಯ ಆಹಾರ ನಿಗಮವು (ಎಫ್‌ಸಿಐ) ತನ್ನ ಎಲ್ಲಾ 26 ಪ್ರಾದೇಶಿಕ ಕಚೇರಿಗಳಿಗೆ ಪಿಎಂಜಿಕೆಎವೈ ಅಡಿಯಲ್ಲಿ ಆಹಾರ ಧಾನ್ಯಗಳನ್ನು ವಿತರಿಸುವಾಗ, ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋಗಳನ್ನು ಹಾಕುವಂತೆ ಸೂಚಿಸಲಾಗಿದೆ.

ಇದರಿಂದಾಗಿ ರಾಜಸ್ಥಾನ ಒಂದರಲ್ಲೇ ಮೋದಿಯ ಪೋಟೋ ಇರುವ ಬ್ಯಾಗ್‌ಗಳಿಗೆ 13.29 ಕೋಟಿ ಬೆಲೆ ರೂ.ವೆಚ್ಚ ಮಾಡಲಾಗಿದೆ. ಸಾಮಾಜಿ ಕಾರ್ಯಕರ್ತ ಅಜಯ್ ಬೋಸ್‌ ಅವರು ರಾಜಸ್ಥಾನದ ಜೈಪುರದ ಪ್ರಾದೇಶಿಕ ಕಚೇರಿಯಲ್ಲಿ ಎಫ್‌ಸಿಐನ ಶೇಖರಣಾ ವಿಭಾಗಕ್ಕೆ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಈ ಉತ್ತರವನ್ನು ನೀಡಲಾಗಿದೆ. ರಾಜಸ್ಥಾನವು ಪ್ರತಿ ಚೀಲಕ್ಕೆ 12.375 ದರದಲ್ಲಿ 1.07 ಕೋಟಿ ಸಿಂಥೆಟಿಕ್ ಬ್ಯಾಗ್‌ಗಳ ಪೂರೈಕೆ ಆದೇಶವನ್ನು ನೀಡಿದೆ.

ರಾಜಸ್ಥಾನದಲ್ಲಿ ಈ ಕುರಿತು ಟೆಂಡರ್‌ಗಳನ್ನು ಐದು ಕಂಪನಿಗಳಿಗೆ ನೀಡಲಾಗಿದೆ, ರಾಜಸ್ಥಾನ ಮೂಲದ ಸಲಾಸರ್ ಟೆಕ್ನೋಟೆಕ್ಸ್ ಪ್ರೈವೇಟ್ ಲಿಮಿಟೆಡ್, ರಾಜಸ್ಥಾನ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಲಿಮಿಟೆಡ್, ಅಲಯನ್ಸ್ ಪಾಲಿಸಾಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಮೂಲದ ಮೋರ್ ಟೆಕ್‌ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಬ್ಲಾಸ್ಟ್ ಇಂಡಸ್ಟ್ರೀಸ್‌ಗೆ ಟೆಂಡರ್‌ ನೀಡಲಾಗಿದೆ.

ರಾಜಸ್ಥಾನವು ಪ್ರತಿ ಚೀಲಕ್ಕೆ 12.375ರಂತೆ ಒಪ್ಪಂದವನ್ನು ನೀಡಿದರೆ, ನಾಗಾಲ್ಯಾಂಡ್ ಕೇವಲ ಒಂದು ಕಂಪನಿಗೆ ಇದರ ಗುತ್ತಿಗೆ ನೀಡಿದೆ. ರಾಜಸ್ಥಾನ್ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಪ್ರತಿ ಚೀಲಕ್ಕೆ 9.30ಕ್ಕೆ ನೀಡುವ ಬಗ್ಗೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ದಿಮಾಪುರ್‌ನಲ್ಲಿರುವ ಎಫ್‌ಸಿಐ ಪ್ರಾದೇಶಿಕ ಕಚೇರಿ ಆರ್‌ಟಿಐ ಉತ್ತರದಲ್ಲಿ ತಿಳಿಸಿದೆ. ತಮಿಳುನಾಡು 1.14 ಕೋಟಿ ಚೀಲಗಳ ಪೂರೈಕೆಗೆ ಟೆಂಡರ್ ಕರೆದಿದೆ. ತಮಿಳುನಾಡಿನ ಎಫ್‌ಸಿಐನ ಪ್ರಾದೇಶಿಕ ಕಚೇರಿಯು ನೀಡಿರುವ ಆರ್‌ಟಿಐ ಮಾಹಿತಿಯಲ್ಲಿ ಇದು ಬಯಲಾಗಿದೆ. ಮಹಾರಾಷ್ಟ್ರ ಇನ್ನೂ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ.

ಸಾಂಕ್ರಾಮಿಕ ರೋಗದ ವೇಳೆ 2020ರಲ್ಲಿ ಪ್ರಾರಂಭವಾದ PMGKAY ಯೋಜನೆಯಡಿಯಲ್ಲಿನ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಇತ್ತೀಚೆಗೆ ಮುಂದುವರಿಸಲಾಗಿತ್ತು. ಇದೀಗ ಈ ಯೋಜನೆಯ ಅಕ್ಕಿ ಚೀಲದಲ್ಲಿ ಮೋದಿ ಪೋಟೋವನ್ನು ಹಾಕುವಂತೆ ಸೂಚಿಸಲಾಗಿದೆ. ಇದು ಚುನಾವಣಾ ಪ್ರಚಾರದ ಭಾಗ ಎಂದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್‌ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ಕೇರಳ ಸರಕಾರ ತಿರಸ್ಕರಿಸಿತ್ತು. ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿದೆ. ಇದು ಸರಿಯಲ್ಲ ಮತ್ತು ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ ಎಂದು ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರಚಾರದ ಭಾಗದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ದೊಡ್ಡ ಭಾಗವಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ ಎನ್ನವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...