Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...