Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...