Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...