Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...