Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....