Homeಮುಖಪುಟಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ.

- Advertisement -
- Advertisement -

ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಚೀನಾವನ್ನು ಹೆಸರಿಸದ ಟೀಕಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಜನರಿಗೆ ತಿಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಸರ್ಕಾರದ ‘ಆತ್ಮನಿರ್ಭರ್ (ಸ್ವಾವಲಂಬಿ)’ ಘೋಷಣೆಯನ್ನು ಟೀಕಿಸುತ್ತಾ, 32 ಸಾರ್ವಜನಿಕ ವಲಯದ ಉದ್ಯಮಗಳನ್ನು ಮಾರಾಟ ಮಾಡಿ, ರೈಲ್ವೆ ಮತ್ತು ವಿಮಾನ ನಿಲ್ದಾಣಗಳನ್ನು ಖಾಸಗಿ ಕೈಗಳಿಗೆ ಹಸ್ತಾಂತರಿಸಿ, ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾ (ಎಫ್‌ಸಿಐ), ಜೀವ ವಿಮಾ ನಿಗಮದ (ಎಲ್‌ಐಸಿ) ಮೇಲೆ ದಾಳಿ ಮಾಡಿದಾಗ ದೇಶದ ಸ್ವಾತಂತ್ರ್ಯವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 130 ಕೋಟಿ ಭಾರತೀಯರು ನಮ್ಮ ಸಶಸ್ತ್ರ, ಅರೆಸೈನಿಕ ಮತ್ತು ಪೊಲೀಸ್ ಪಡೆಗಳ ಬಗ್ಗೆ  ಹೆಮ್ಮೆಪಡುತ್ತೇವೆ. ನಮ್ಮ ಮೇಲೆ ದಾಳಿ ನಡೆದಾಗಲೆಲ್ಲಾ ದಾಳಿಕೋರರನ್ನು ಅವರ ಹೆಸರಿಡಿದು ತೀವ್ರವಾಗಿ ಟೀಕಿಸಿದ್ದೇವೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

“ಆದರೆ ನಮ್ಮ ಆಡಳಿತಗಾರರು ಚೀನಾದ ಹೆಸರನ್ನು ಉಚ್ಚರಿಸಲು ಏಕೆ ಹೆದರುತ್ತಾರೆ ಎಂಬುದರ ಬಗ್ಗೆಯೂ ನಾವು ಯೋಚಿಸಬೇಕು. ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಾಗ, ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಮತ್ತು ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಹೇಗೆ ಕ್ರಮವಹಿಸುತ್ತದೆ ಎಂದು ನಾವು ಸರ್ಕಾರವನ್ನು ಕೇಳಬೇಕು” ಎಂದು ಅವರು ಹೇಳಿದರು.

ಕೆಂಪು ಕೋಟೆಯ ವೇದಿಕೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಚೀನಾ ಮತ್ತು ಪಾಕಿಸ್ತಾನಕ್ಕೆ ತೀಕ್ಷ್ಣವಾದ ಸಂದೇಶವನ್ನು ನೀಡಿದರು. ಉಭಯ ದೇಶಗಳ ಗಡಿಯುದ್ದಕ್ಕೂ ನಿಯೋಜಿಸಲಾಗಿರುವ ಸಶಸ್ತ್ರ ಪಡೆಗಳು ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಯತ್ನಿಸಿದವರಿಗೆ ಸೂಕ್ತವಾದ ಉತ್ತರವನ್ನು ನೀಡಿವೆ ಎಂದು ಘೋಷಿಸಿದರು. ಆದರೆ, ಅವರು ಉಭಯ ದೇಶಗಳ ಹೆಸರನ್ನು ಸೂಚಿಸಲಿಲ್ಲ.

ತಮ್ಮ 90 ನಿಮಿಷಗಳ ಭಾಷಣದಲ್ಲಿ ಪ್ರಧಾನಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಅಭಿಯಾನದ ಬಗ್ಗೆ ವ್ಯಾಪಕವಾಗಿ ಮಾತನಾಡಿದರು. “ಆತ್ಮನಿರ್ಭರ್” ಬಗ್ಗೆ ಮಾತನಾಡುವವರು, ಅದರ ಅಡಿಪಾಯವನ್ನು ಪಂಡಿತ್ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಹಾಕಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ.

“ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...