HomeUncategorizedಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

- Advertisement -
- Advertisement -

ಹೊಸದಿಲ್ಲಿ: ಮುಂಬರುವ ನಗರಪಾಲಿಕೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ವಿಳಂಬ ಮಾಡುವಂತೆ ಭಾರತೀಯ ಜನತಾ ಪಾರ್ಟಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ಸೋಮವಾರ (ಮಾರ್ಚ್ 14) ಎಎಪಿ ನಾಯಕರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಘೇರಾವ್ ಹಾಕಿದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ)ಗಳಲ್ಲಿ  ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಸತತ ಚುನಾವಣೆಗಳಲ್ಲಿ ಜಯಗಳಿಸಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಗೆಲುವು ಸಾಧಿಸಿದ ಬಳಿಕ, ತನ್ನ ದಿಗ್ವಿಜಯ ಯಾತ್ರೆಯನ್ನು ದೆಹಲಿಗೆ ವಿಸ್ತರಿಸಲು ಬಯಸಿದೆ.

272 ಮುನ್ಸಿಪಲ್ ವಾರ್ಡ್‌ಗಳಲ್ಲಿ ದೆಹಲಿಯ ಜನಸಂಖ್ಯೆಯ 97% ರಷ್ಟು ಜನರಿಗೆ ಸೇವೆಯನ್ನು ಸಲ್ಲಿಸುತ್ತಿರುವ ದೆಹಲಿ ಮುನ್ಸಿಪಲ್‌ ವಿಶ್ವದ ಎರಡನೇ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯೋಗವು, “ಏಪ್ರಿಲ್ 2022ರಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿತು. ಆದರೆ ದಿನಾಂಕಗಳ ಘೋಷಣೆಯನ್ನು ಮುಂದೂಡಿತು.

ಇದನ್ನೂ ಓದಿರಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯಲ್ಲಿ, “ಚುನಾವಣೆಗಳು ವಿಳಂಬವಾಗಿಲ್ಲ. ಆದರೆ ಮೂರು ಮುನ್ಸಿಪಲ್‌ಗಳನ್ನು ಮರುಸೇರಿಸುವ ಕೇಂದ್ರ ಸರ್ಕಾರದ ಯೋಜನೆಯ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದೆ.

ಮೂರು ಮುನ್ಸಿಪಲ್‌ಗಳಿಗೆ ಸಂಬಂಧಿಸಿದಂತೆ (ದಕ್ಷಿಣ, ಉತ್ತರ ಮತ್ತು ಪೂರ್ವ) ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯ್ದೆಗೆ ತಿದ್ದುಪಡಿಯನ್ನು ತರಲಿಚ್ಛಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ತಿದ್ದುಪಡಿ ಮಂಡನೆಯಾಗುವ ಸಾಧ್ಯತೆ ಇದೆ.

ಮೂರು ಮುನ್ಸಿಪಾಲ್‌ಗಳೂ ಮೊದಲು ಒಬ್ಬ ಮೇಯರ್ ಅಡಿಯಲ್ಲಿ ಅಧಿಕಾರ ನಡೆಸುತ್ತಿದ್ದವು. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಕಾರಣ, ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನವರಿ 2012ರಲ್ಲಿ ಮೂರು ವಿಭಾಗಗಳಾಗಿ ವಿಭಜಿಸಲಾಯಿತು. ಉತ್ತಮ ಆಡಳಿತಕ್ಕಾಗಿ ಆಡಳಿತವನ್ನು ವಿಕೇಂದ್ರೀಕರಿಸುವ ದೃಷ್ಟಿಯಿಂದ ಈ ಕ್ರಮ ಜರುಗಿಸಲಾಗಿತ್ತು.

ಆದರೆ ಆದಾಯದ ಮೂಲಗಳ ಅಸಮ ವಿತರಣೆಯು ಉತ್ತರ ಮತ್ತು ಪೂರ್ವ ಮುನ್ಸಿಪಾಲ್‌ಗಳಲ್ಲಿ ಆರ್ಥಿಕ ಮುಗ್ಗಟ್ಟು ಉಂಟುಮಾಡಿತು. ತಮ್ಮ ಸಂಬಳವನ್ನು ಪಾವತಿಸಿದ ಕಾರಣ ಸ್ವಚ್ಛತಾ ಕಾರ್ಮಿಕರು, ಶಿಕ್ಷಕರು, ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ತಾರು ಮುಷ್ಕರಗಳನ್ನು ನಡೆಸಿದ್ದಾರೆ.

ಎಂಸಿಡಿಯನ್ನು ಏಕೀಕರಿಸುವ ನಿರ್ಧಾರ ಬೇಗ ಬರಬೇಕಿತ್ತು. ಈಗಾಗಲೇ ತುಂಬಾ ಹಾನಿಯಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೂರು ವಿಭಜನೆಯು ಆಡಳಿತವನ್ನು ಸುಧಾರಿಸಲಿಲ್ಲ. ವಾಸ್ತವವಾಗಿ ನಾಗರಿಕ ಸಂಸ್ಥೆಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಕೇಜ್ರಿವಾಲ್ ಸರ್ಕಾರವು ಪುರಸಭೆಯ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ದೆಹಲಿಯ ಎಎಪಿಯ ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್, “ಹಣಕಾಸು ಆಯೋಗವು ಯಾವಾಗ ಹಣವನ್ನು ಬಿಡುಗಡೆ ಮಾಡಬೇಕೆಂದು ನಮಗೆ ನಿರ್ದೇಶಿಸುತ್ತದೆ. ಅದರಂತೆ ನಾವು ನಡೆಯುತ್ತಿದ್ದೇವೆ” ಎಂದಿದ್ದಾರೆ.

“ನಾವು ಹಣವನ್ನು ತಡೆಹಿಡಿದಿದ್ದೇವೆ ಎಂಬುದನ್ನು ಸಾಬೀತುಪಡಿಸಲು ಬಿಜೆಪಿ ಬಳಿ ಯಾವುದೇ ದಾಖಲೆಗಳಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಮೂರು ಮುನ್ಸಿಪಲ್‌ಗಳನ್ನು ಒಂದುಗೂಡಿಸುವ ಯೋಜನೆ ಮತ್ತು ಎಂಸಿಡಿ ಚುನಾವಣೆಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪಾಠಕ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ದೆಹಲಿ ಅಷ್ಟು ದೊಡ್ಡ ರಾಜ್ಯವಲ್ಲ. ಇದು ಸಾಕಷ್ಟು ಚಿಕ್ಕದಾಗಿದ್ದು, 272 ವಾರ್ಡ್‌ಗಳಲ್ಲಿ ಆಡಳಿತ ನಡೆಸುವುದು ಅಷ್ಟು ಕಷ್ಟವಲ್ಲ. ಬಿಜೆಪಿಯು ಚುನಾವಣೆಯಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ, ಮುನ್ಸಿಪಲ್‌ಗಳನ್ನು ಒಗ್ಗೂಡಿಸುವ ನೆಪವನ್ನು ಮುಂದೊಡ್ಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಅವರು, “ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಮೂರು ಪಟ್ಟು ಹೆಚ್ಚಿಸಬಹುದಾದರೆ, ಎಂಸಿಡಿ ಬಜೆಟ್ ಏಕೆ ಹೆಚ್ಚಾಗುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕಸ ವಿಲೇವಾರಿ, ಬಿಡಾಡಿ ಜಾನುವಾರುಗಳು, ದುರ್ವಾಸನೆ ಮತ್ತು ಚರಂಡಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಾಗರಿಕರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಪಾಠಕ್ ಎಚ್ಚರಿಸಿದ್ದಾರೆ.

“ಸುತ್ತಲೂ ಕಸದ ಬೆಟ್ಟಗಳು, ತುಂಬಿ ಹರಿಯುವ ಚರಂಡಿಗಳು… ಇದು ದೆಹಲಿಯ ಜನರಿಗೆ ಮಾಡುತ್ತಿರುವ ಅವಮಾನ. ಒಬ್ಬರ ಮನೆ ಒಳಗೆ ಎಷ್ಟೇ ಸುಂದರವಾಗಿದ್ದರೂ, ಹೊರಗೆ ಒಂದು ಹೆಜ್ಜೆ ಇರಿಸಿದಾಗ ಮನಸ್ಥಿತಿ ಹಾಳಾಗುತ್ತಿದೆ” ಎಂದಿದ್ದಾರೆ.

ಭ್ರಷ್ಟ ಎಂಸಿಡಿಯಿಂದಾಗಿ ದೆಹಲಿಯಲ್ಲಿ ಭೂ ಮಾಫಿಯಾ ಇದೆ. ದೆಹಲಿಯ 80% ರಷ್ಟು ಅನಧಿಕೃತ ಕಾಲೋನಿಗಳಲ್ಲಿ ಜನರು ವಾಸುತ್ತಿದ್ದಾರೆ. ನೈರ್ಮಲ್ಯ ಕಾಪಾಡುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಿದೆ.

ಬಿಜೆಪಿಯನ್ನು ಮುನ್ಸಿಪಾಲ್‌ ಚುನಾವಣೆಯಲ್ಲಿ ಎಎಪಿ ಬಗ್ಗುಬಡಿಯಲಿದೆ ಎಂದು ಪಾಠಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಚುನಾವಣೆ ಏಕೆ ವಿಳಂಬವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಏಕೀಕರಣ ಯೋಜನೆಯು ಎಲ್ಲಿಂದ ಹುಟ್ಟಿಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಅಭೂತಪೂರ್ವ ಗೆಲುವು ಪಡೆದಿದ್ದು, ಹೀಗಾಗಿ ಚುನಾವಣೆಯನ್ನು ವಿಳಂಬ ಮಾಡುವಂತೆ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಎಎಪಿ ಮೂಲಗಳು ಆರೋಪಿಸಿವೆ.

ಹಿರಿಯ ಎಎಪಿ ನಾಯಕ ಗೋಪಾಲ್ ರೈ, “ಪಂಜಾಬ್‌ನಲ್ಲಿ ನಮ್ಮ ಪ್ರಚಂಡ ವಿಜಯದ ನಂತರ ದೆಹಲಿ ಮುನ್ಸಿಪಲ್‌ಗಳ ಚುನಾವಣೆಗಳನ್ನು ನಡೆಸುವುದಕ್ಕಾಗಿ ನಾವು ಹೋರಾಟ ನಡೆಸುವ ಅಗತ್ಯವಿದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಕುಟುಕಿದ್ದಾರೆ.

ಆದರೆ ಬಿಜೆಪಿಗೆ ಚುನಾವಣೆಯ ಭಯವಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ಮದ್ಯ ನೀತಿಯಿಂದಾಗಿ ಜನರಲ್ಲಿ ವ್ಯಾಪಕ ಅಸಮಾಧಾನ ಇರುವುದರಿಂದ ಚುನಾವಣೆಯ ಭಯವಿದೆ” ಎಂದು ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಕೇಜ್ರಿವಾಲ್ ಅವರ ಅರಾಜಕವಾದಿ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವರದಿ: ದಿ ವೈರ್‌


ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...