HomeUncategorizedಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

- Advertisement -
- Advertisement -

ಹೊಸದಿಲ್ಲಿ: ಮುಂಬರುವ ನಗರಪಾಲಿಕೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ವಿಳಂಬ ಮಾಡುವಂತೆ ಭಾರತೀಯ ಜನತಾ ಪಾರ್ಟಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ಸೋಮವಾರ (ಮಾರ್ಚ್ 14) ಎಎಪಿ ನಾಯಕರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಘೇರಾವ್ ಹಾಕಿದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ)ಗಳಲ್ಲಿ  ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಸತತ ಚುನಾವಣೆಗಳಲ್ಲಿ ಜಯಗಳಿಸಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಗೆಲುವು ಸಾಧಿಸಿದ ಬಳಿಕ, ತನ್ನ ದಿಗ್ವಿಜಯ ಯಾತ್ರೆಯನ್ನು ದೆಹಲಿಗೆ ವಿಸ್ತರಿಸಲು ಬಯಸಿದೆ.

272 ಮುನ್ಸಿಪಲ್ ವಾರ್ಡ್‌ಗಳಲ್ಲಿ ದೆಹಲಿಯ ಜನಸಂಖ್ಯೆಯ 97% ರಷ್ಟು ಜನರಿಗೆ ಸೇವೆಯನ್ನು ಸಲ್ಲಿಸುತ್ತಿರುವ ದೆಹಲಿ ಮುನ್ಸಿಪಲ್‌ ವಿಶ್ವದ ಎರಡನೇ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯೋಗವು, “ಏಪ್ರಿಲ್ 2022ರಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿತು. ಆದರೆ ದಿನಾಂಕಗಳ ಘೋಷಣೆಯನ್ನು ಮುಂದೂಡಿತು.

ಇದನ್ನೂ ಓದಿರಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯಲ್ಲಿ, “ಚುನಾವಣೆಗಳು ವಿಳಂಬವಾಗಿಲ್ಲ. ಆದರೆ ಮೂರು ಮುನ್ಸಿಪಲ್‌ಗಳನ್ನು ಮರುಸೇರಿಸುವ ಕೇಂದ್ರ ಸರ್ಕಾರದ ಯೋಜನೆಯ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದೆ.

ಮೂರು ಮುನ್ಸಿಪಲ್‌ಗಳಿಗೆ ಸಂಬಂಧಿಸಿದಂತೆ (ದಕ್ಷಿಣ, ಉತ್ತರ ಮತ್ತು ಪೂರ್ವ) ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯ್ದೆಗೆ ತಿದ್ದುಪಡಿಯನ್ನು ತರಲಿಚ್ಛಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ತಿದ್ದುಪಡಿ ಮಂಡನೆಯಾಗುವ ಸಾಧ್ಯತೆ ಇದೆ.

ಮೂರು ಮುನ್ಸಿಪಾಲ್‌ಗಳೂ ಮೊದಲು ಒಬ್ಬ ಮೇಯರ್ ಅಡಿಯಲ್ಲಿ ಅಧಿಕಾರ ನಡೆಸುತ್ತಿದ್ದವು. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಕಾರಣ, ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನವರಿ 2012ರಲ್ಲಿ ಮೂರು ವಿಭಾಗಗಳಾಗಿ ವಿಭಜಿಸಲಾಯಿತು. ಉತ್ತಮ ಆಡಳಿತಕ್ಕಾಗಿ ಆಡಳಿತವನ್ನು ವಿಕೇಂದ್ರೀಕರಿಸುವ ದೃಷ್ಟಿಯಿಂದ ಈ ಕ್ರಮ ಜರುಗಿಸಲಾಗಿತ್ತು.

ಆದರೆ ಆದಾಯದ ಮೂಲಗಳ ಅಸಮ ವಿತರಣೆಯು ಉತ್ತರ ಮತ್ತು ಪೂರ್ವ ಮುನ್ಸಿಪಾಲ್‌ಗಳಲ್ಲಿ ಆರ್ಥಿಕ ಮುಗ್ಗಟ್ಟು ಉಂಟುಮಾಡಿತು. ತಮ್ಮ ಸಂಬಳವನ್ನು ಪಾವತಿಸಿದ ಕಾರಣ ಸ್ವಚ್ಛತಾ ಕಾರ್ಮಿಕರು, ಶಿಕ್ಷಕರು, ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ತಾರು ಮುಷ್ಕರಗಳನ್ನು ನಡೆಸಿದ್ದಾರೆ.

ಎಂಸಿಡಿಯನ್ನು ಏಕೀಕರಿಸುವ ನಿರ್ಧಾರ ಬೇಗ ಬರಬೇಕಿತ್ತು. ಈಗಾಗಲೇ ತುಂಬಾ ಹಾನಿಯಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೂರು ವಿಭಜನೆಯು ಆಡಳಿತವನ್ನು ಸುಧಾರಿಸಲಿಲ್ಲ. ವಾಸ್ತವವಾಗಿ ನಾಗರಿಕ ಸಂಸ್ಥೆಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಕೇಜ್ರಿವಾಲ್ ಸರ್ಕಾರವು ಪುರಸಭೆಯ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ದೆಹಲಿಯ ಎಎಪಿಯ ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್, “ಹಣಕಾಸು ಆಯೋಗವು ಯಾವಾಗ ಹಣವನ್ನು ಬಿಡುಗಡೆ ಮಾಡಬೇಕೆಂದು ನಮಗೆ ನಿರ್ದೇಶಿಸುತ್ತದೆ. ಅದರಂತೆ ನಾವು ನಡೆಯುತ್ತಿದ್ದೇವೆ” ಎಂದಿದ್ದಾರೆ.

“ನಾವು ಹಣವನ್ನು ತಡೆಹಿಡಿದಿದ್ದೇವೆ ಎಂಬುದನ್ನು ಸಾಬೀತುಪಡಿಸಲು ಬಿಜೆಪಿ ಬಳಿ ಯಾವುದೇ ದಾಖಲೆಗಳಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಮೂರು ಮುನ್ಸಿಪಲ್‌ಗಳನ್ನು ಒಂದುಗೂಡಿಸುವ ಯೋಜನೆ ಮತ್ತು ಎಂಸಿಡಿ ಚುನಾವಣೆಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪಾಠಕ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ದೆಹಲಿ ಅಷ್ಟು ದೊಡ್ಡ ರಾಜ್ಯವಲ್ಲ. ಇದು ಸಾಕಷ್ಟು ಚಿಕ್ಕದಾಗಿದ್ದು, 272 ವಾರ್ಡ್‌ಗಳಲ್ಲಿ ಆಡಳಿತ ನಡೆಸುವುದು ಅಷ್ಟು ಕಷ್ಟವಲ್ಲ. ಬಿಜೆಪಿಯು ಚುನಾವಣೆಯಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ, ಮುನ್ಸಿಪಲ್‌ಗಳನ್ನು ಒಗ್ಗೂಡಿಸುವ ನೆಪವನ್ನು ಮುಂದೊಡ್ಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಅವರು, “ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಮೂರು ಪಟ್ಟು ಹೆಚ್ಚಿಸಬಹುದಾದರೆ, ಎಂಸಿಡಿ ಬಜೆಟ್ ಏಕೆ ಹೆಚ್ಚಾಗುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕಸ ವಿಲೇವಾರಿ, ಬಿಡಾಡಿ ಜಾನುವಾರುಗಳು, ದುರ್ವಾಸನೆ ಮತ್ತು ಚರಂಡಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಾಗರಿಕರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಪಾಠಕ್ ಎಚ್ಚರಿಸಿದ್ದಾರೆ.

“ಸುತ್ತಲೂ ಕಸದ ಬೆಟ್ಟಗಳು, ತುಂಬಿ ಹರಿಯುವ ಚರಂಡಿಗಳು… ಇದು ದೆಹಲಿಯ ಜನರಿಗೆ ಮಾಡುತ್ತಿರುವ ಅವಮಾನ. ಒಬ್ಬರ ಮನೆ ಒಳಗೆ ಎಷ್ಟೇ ಸುಂದರವಾಗಿದ್ದರೂ, ಹೊರಗೆ ಒಂದು ಹೆಜ್ಜೆ ಇರಿಸಿದಾಗ ಮನಸ್ಥಿತಿ ಹಾಳಾಗುತ್ತಿದೆ” ಎಂದಿದ್ದಾರೆ.

ಭ್ರಷ್ಟ ಎಂಸಿಡಿಯಿಂದಾಗಿ ದೆಹಲಿಯಲ್ಲಿ ಭೂ ಮಾಫಿಯಾ ಇದೆ. ದೆಹಲಿಯ 80% ರಷ್ಟು ಅನಧಿಕೃತ ಕಾಲೋನಿಗಳಲ್ಲಿ ಜನರು ವಾಸುತ್ತಿದ್ದಾರೆ. ನೈರ್ಮಲ್ಯ ಕಾಪಾಡುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಿದೆ.

ಬಿಜೆಪಿಯನ್ನು ಮುನ್ಸಿಪಾಲ್‌ ಚುನಾವಣೆಯಲ್ಲಿ ಎಎಪಿ ಬಗ್ಗುಬಡಿಯಲಿದೆ ಎಂದು ಪಾಠಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಚುನಾವಣೆ ಏಕೆ ವಿಳಂಬವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಏಕೀಕರಣ ಯೋಜನೆಯು ಎಲ್ಲಿಂದ ಹುಟ್ಟಿಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಅಭೂತಪೂರ್ವ ಗೆಲುವು ಪಡೆದಿದ್ದು, ಹೀಗಾಗಿ ಚುನಾವಣೆಯನ್ನು ವಿಳಂಬ ಮಾಡುವಂತೆ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಎಎಪಿ ಮೂಲಗಳು ಆರೋಪಿಸಿವೆ.

ಹಿರಿಯ ಎಎಪಿ ನಾಯಕ ಗೋಪಾಲ್ ರೈ, “ಪಂಜಾಬ್‌ನಲ್ಲಿ ನಮ್ಮ ಪ್ರಚಂಡ ವಿಜಯದ ನಂತರ ದೆಹಲಿ ಮುನ್ಸಿಪಲ್‌ಗಳ ಚುನಾವಣೆಗಳನ್ನು ನಡೆಸುವುದಕ್ಕಾಗಿ ನಾವು ಹೋರಾಟ ನಡೆಸುವ ಅಗತ್ಯವಿದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಕುಟುಕಿದ್ದಾರೆ.

ಆದರೆ ಬಿಜೆಪಿಗೆ ಚುನಾವಣೆಯ ಭಯವಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ಮದ್ಯ ನೀತಿಯಿಂದಾಗಿ ಜನರಲ್ಲಿ ವ್ಯಾಪಕ ಅಸಮಾಧಾನ ಇರುವುದರಿಂದ ಚುನಾವಣೆಯ ಭಯವಿದೆ” ಎಂದು ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಕೇಜ್ರಿವಾಲ್ ಅವರ ಅರಾಜಕವಾದಿ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವರದಿ: ದಿ ವೈರ್‌


ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...