HomeUncategorizedಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

- Advertisement -
- Advertisement -

ಹೊಸದಿಲ್ಲಿ: ಮುಂಬರುವ ನಗರಪಾಲಿಕೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ವಿಳಂಬ ಮಾಡುವಂತೆ ಭಾರತೀಯ ಜನತಾ ಪಾರ್ಟಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ಸೋಮವಾರ (ಮಾರ್ಚ್ 14) ಎಎಪಿ ನಾಯಕರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಘೇರಾವ್ ಹಾಕಿದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ)ಗಳಲ್ಲಿ  ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಸತತ ಚುನಾವಣೆಗಳಲ್ಲಿ ಜಯಗಳಿಸಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಗೆಲುವು ಸಾಧಿಸಿದ ಬಳಿಕ, ತನ್ನ ದಿಗ್ವಿಜಯ ಯಾತ್ರೆಯನ್ನು ದೆಹಲಿಗೆ ವಿಸ್ತರಿಸಲು ಬಯಸಿದೆ.

272 ಮುನ್ಸಿಪಲ್ ವಾರ್ಡ್‌ಗಳಲ್ಲಿ ದೆಹಲಿಯ ಜನಸಂಖ್ಯೆಯ 97% ರಷ್ಟು ಜನರಿಗೆ ಸೇವೆಯನ್ನು ಸಲ್ಲಿಸುತ್ತಿರುವ ದೆಹಲಿ ಮುನ್ಸಿಪಲ್‌ ವಿಶ್ವದ ಎರಡನೇ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯೋಗವು, “ಏಪ್ರಿಲ್ 2022ರಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿತು. ಆದರೆ ದಿನಾಂಕಗಳ ಘೋಷಣೆಯನ್ನು ಮುಂದೂಡಿತು.

ಇದನ್ನೂ ಓದಿರಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯಲ್ಲಿ, “ಚುನಾವಣೆಗಳು ವಿಳಂಬವಾಗಿಲ್ಲ. ಆದರೆ ಮೂರು ಮುನ್ಸಿಪಲ್‌ಗಳನ್ನು ಮರುಸೇರಿಸುವ ಕೇಂದ್ರ ಸರ್ಕಾರದ ಯೋಜನೆಯ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದೆ.

ಮೂರು ಮುನ್ಸಿಪಲ್‌ಗಳಿಗೆ ಸಂಬಂಧಿಸಿದಂತೆ (ದಕ್ಷಿಣ, ಉತ್ತರ ಮತ್ತು ಪೂರ್ವ) ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯ್ದೆಗೆ ತಿದ್ದುಪಡಿಯನ್ನು ತರಲಿಚ್ಛಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ತಿದ್ದುಪಡಿ ಮಂಡನೆಯಾಗುವ ಸಾಧ್ಯತೆ ಇದೆ.

ಮೂರು ಮುನ್ಸಿಪಾಲ್‌ಗಳೂ ಮೊದಲು ಒಬ್ಬ ಮೇಯರ್ ಅಡಿಯಲ್ಲಿ ಅಧಿಕಾರ ನಡೆಸುತ್ತಿದ್ದವು. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಕಾರಣ, ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನವರಿ 2012ರಲ್ಲಿ ಮೂರು ವಿಭಾಗಗಳಾಗಿ ವಿಭಜಿಸಲಾಯಿತು. ಉತ್ತಮ ಆಡಳಿತಕ್ಕಾಗಿ ಆಡಳಿತವನ್ನು ವಿಕೇಂದ್ರೀಕರಿಸುವ ದೃಷ್ಟಿಯಿಂದ ಈ ಕ್ರಮ ಜರುಗಿಸಲಾಗಿತ್ತು.

ಆದರೆ ಆದಾಯದ ಮೂಲಗಳ ಅಸಮ ವಿತರಣೆಯು ಉತ್ತರ ಮತ್ತು ಪೂರ್ವ ಮುನ್ಸಿಪಾಲ್‌ಗಳಲ್ಲಿ ಆರ್ಥಿಕ ಮುಗ್ಗಟ್ಟು ಉಂಟುಮಾಡಿತು. ತಮ್ಮ ಸಂಬಳವನ್ನು ಪಾವತಿಸಿದ ಕಾರಣ ಸ್ವಚ್ಛತಾ ಕಾರ್ಮಿಕರು, ಶಿಕ್ಷಕರು, ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ತಾರು ಮುಷ್ಕರಗಳನ್ನು ನಡೆಸಿದ್ದಾರೆ.

ಎಂಸಿಡಿಯನ್ನು ಏಕೀಕರಿಸುವ ನಿರ್ಧಾರ ಬೇಗ ಬರಬೇಕಿತ್ತು. ಈಗಾಗಲೇ ತುಂಬಾ ಹಾನಿಯಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೂರು ವಿಭಜನೆಯು ಆಡಳಿತವನ್ನು ಸುಧಾರಿಸಲಿಲ್ಲ. ವಾಸ್ತವವಾಗಿ ನಾಗರಿಕ ಸಂಸ್ಥೆಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಕೇಜ್ರಿವಾಲ್ ಸರ್ಕಾರವು ಪುರಸಭೆಯ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ದೆಹಲಿಯ ಎಎಪಿಯ ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್, “ಹಣಕಾಸು ಆಯೋಗವು ಯಾವಾಗ ಹಣವನ್ನು ಬಿಡುಗಡೆ ಮಾಡಬೇಕೆಂದು ನಮಗೆ ನಿರ್ದೇಶಿಸುತ್ತದೆ. ಅದರಂತೆ ನಾವು ನಡೆಯುತ್ತಿದ್ದೇವೆ” ಎಂದಿದ್ದಾರೆ.

“ನಾವು ಹಣವನ್ನು ತಡೆಹಿಡಿದಿದ್ದೇವೆ ಎಂಬುದನ್ನು ಸಾಬೀತುಪಡಿಸಲು ಬಿಜೆಪಿ ಬಳಿ ಯಾವುದೇ ದಾಖಲೆಗಳಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಮೂರು ಮುನ್ಸಿಪಲ್‌ಗಳನ್ನು ಒಂದುಗೂಡಿಸುವ ಯೋಜನೆ ಮತ್ತು ಎಂಸಿಡಿ ಚುನಾವಣೆಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪಾಠಕ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ದೆಹಲಿ ಅಷ್ಟು ದೊಡ್ಡ ರಾಜ್ಯವಲ್ಲ. ಇದು ಸಾಕಷ್ಟು ಚಿಕ್ಕದಾಗಿದ್ದು, 272 ವಾರ್ಡ್‌ಗಳಲ್ಲಿ ಆಡಳಿತ ನಡೆಸುವುದು ಅಷ್ಟು ಕಷ್ಟವಲ್ಲ. ಬಿಜೆಪಿಯು ಚುನಾವಣೆಯಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ, ಮುನ್ಸಿಪಲ್‌ಗಳನ್ನು ಒಗ್ಗೂಡಿಸುವ ನೆಪವನ್ನು ಮುಂದೊಡ್ಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಅವರು, “ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಮೂರು ಪಟ್ಟು ಹೆಚ್ಚಿಸಬಹುದಾದರೆ, ಎಂಸಿಡಿ ಬಜೆಟ್ ಏಕೆ ಹೆಚ್ಚಾಗುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕಸ ವಿಲೇವಾರಿ, ಬಿಡಾಡಿ ಜಾನುವಾರುಗಳು, ದುರ್ವಾಸನೆ ಮತ್ತು ಚರಂಡಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಾಗರಿಕರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಪಾಠಕ್ ಎಚ್ಚರಿಸಿದ್ದಾರೆ.

“ಸುತ್ತಲೂ ಕಸದ ಬೆಟ್ಟಗಳು, ತುಂಬಿ ಹರಿಯುವ ಚರಂಡಿಗಳು… ಇದು ದೆಹಲಿಯ ಜನರಿಗೆ ಮಾಡುತ್ತಿರುವ ಅವಮಾನ. ಒಬ್ಬರ ಮನೆ ಒಳಗೆ ಎಷ್ಟೇ ಸುಂದರವಾಗಿದ್ದರೂ, ಹೊರಗೆ ಒಂದು ಹೆಜ್ಜೆ ಇರಿಸಿದಾಗ ಮನಸ್ಥಿತಿ ಹಾಳಾಗುತ್ತಿದೆ” ಎಂದಿದ್ದಾರೆ.

ಭ್ರಷ್ಟ ಎಂಸಿಡಿಯಿಂದಾಗಿ ದೆಹಲಿಯಲ್ಲಿ ಭೂ ಮಾಫಿಯಾ ಇದೆ. ದೆಹಲಿಯ 80% ರಷ್ಟು ಅನಧಿಕೃತ ಕಾಲೋನಿಗಳಲ್ಲಿ ಜನರು ವಾಸುತ್ತಿದ್ದಾರೆ. ನೈರ್ಮಲ್ಯ ಕಾಪಾಡುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಿದೆ.

ಬಿಜೆಪಿಯನ್ನು ಮುನ್ಸಿಪಾಲ್‌ ಚುನಾವಣೆಯಲ್ಲಿ ಎಎಪಿ ಬಗ್ಗುಬಡಿಯಲಿದೆ ಎಂದು ಪಾಠಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಚುನಾವಣೆ ಏಕೆ ವಿಳಂಬವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಏಕೀಕರಣ ಯೋಜನೆಯು ಎಲ್ಲಿಂದ ಹುಟ್ಟಿಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಅಭೂತಪೂರ್ವ ಗೆಲುವು ಪಡೆದಿದ್ದು, ಹೀಗಾಗಿ ಚುನಾವಣೆಯನ್ನು ವಿಳಂಬ ಮಾಡುವಂತೆ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಎಎಪಿ ಮೂಲಗಳು ಆರೋಪಿಸಿವೆ.

ಹಿರಿಯ ಎಎಪಿ ನಾಯಕ ಗೋಪಾಲ್ ರೈ, “ಪಂಜಾಬ್‌ನಲ್ಲಿ ನಮ್ಮ ಪ್ರಚಂಡ ವಿಜಯದ ನಂತರ ದೆಹಲಿ ಮುನ್ಸಿಪಲ್‌ಗಳ ಚುನಾವಣೆಗಳನ್ನು ನಡೆಸುವುದಕ್ಕಾಗಿ ನಾವು ಹೋರಾಟ ನಡೆಸುವ ಅಗತ್ಯವಿದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಕುಟುಕಿದ್ದಾರೆ.

ಆದರೆ ಬಿಜೆಪಿಗೆ ಚುನಾವಣೆಯ ಭಯವಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ಮದ್ಯ ನೀತಿಯಿಂದಾಗಿ ಜನರಲ್ಲಿ ವ್ಯಾಪಕ ಅಸಮಾಧಾನ ಇರುವುದರಿಂದ ಚುನಾವಣೆಯ ಭಯವಿದೆ” ಎಂದು ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಕೇಜ್ರಿವಾಲ್ ಅವರ ಅರಾಜಕವಾದಿ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವರದಿ: ದಿ ವೈರ್‌


ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...