HomeUncategorizedಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

- Advertisement -
- Advertisement -

ಹೊಸದಿಲ್ಲಿ: ಮುಂಬರುವ ನಗರಪಾಲಿಕೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ವಿಳಂಬ ಮಾಡುವಂತೆ ಭಾರತೀಯ ಜನತಾ ಪಾರ್ಟಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ಸೋಮವಾರ (ಮಾರ್ಚ್ 14) ಎಎಪಿ ನಾಯಕರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಘೇರಾವ್ ಹಾಕಿದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ)ಗಳಲ್ಲಿ  ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಸತತ ಚುನಾವಣೆಗಳಲ್ಲಿ ಜಯಗಳಿಸಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಗೆಲುವು ಸಾಧಿಸಿದ ಬಳಿಕ, ತನ್ನ ದಿಗ್ವಿಜಯ ಯಾತ್ರೆಯನ್ನು ದೆಹಲಿಗೆ ವಿಸ್ತರಿಸಲು ಬಯಸಿದೆ.

272 ಮುನ್ಸಿಪಲ್ ವಾರ್ಡ್‌ಗಳಲ್ಲಿ ದೆಹಲಿಯ ಜನಸಂಖ್ಯೆಯ 97% ರಷ್ಟು ಜನರಿಗೆ ಸೇವೆಯನ್ನು ಸಲ್ಲಿಸುತ್ತಿರುವ ದೆಹಲಿ ಮುನ್ಸಿಪಲ್‌ ವಿಶ್ವದ ಎರಡನೇ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯೋಗವು, “ಏಪ್ರಿಲ್ 2022ರಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿತು. ಆದರೆ ದಿನಾಂಕಗಳ ಘೋಷಣೆಯನ್ನು ಮುಂದೂಡಿತು.

ಇದನ್ನೂ ಓದಿರಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯಲ್ಲಿ, “ಚುನಾವಣೆಗಳು ವಿಳಂಬವಾಗಿಲ್ಲ. ಆದರೆ ಮೂರು ಮುನ್ಸಿಪಲ್‌ಗಳನ್ನು ಮರುಸೇರಿಸುವ ಕೇಂದ್ರ ಸರ್ಕಾರದ ಯೋಜನೆಯ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದೆ.

ಮೂರು ಮುನ್ಸಿಪಲ್‌ಗಳಿಗೆ ಸಂಬಂಧಿಸಿದಂತೆ (ದಕ್ಷಿಣ, ಉತ್ತರ ಮತ್ತು ಪೂರ್ವ) ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯ್ದೆಗೆ ತಿದ್ದುಪಡಿಯನ್ನು ತರಲಿಚ್ಛಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ತಿದ್ದುಪಡಿ ಮಂಡನೆಯಾಗುವ ಸಾಧ್ಯತೆ ಇದೆ.

ಮೂರು ಮುನ್ಸಿಪಾಲ್‌ಗಳೂ ಮೊದಲು ಒಬ್ಬ ಮೇಯರ್ ಅಡಿಯಲ್ಲಿ ಅಧಿಕಾರ ನಡೆಸುತ್ತಿದ್ದವು. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಕಾರಣ, ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನವರಿ 2012ರಲ್ಲಿ ಮೂರು ವಿಭಾಗಗಳಾಗಿ ವಿಭಜಿಸಲಾಯಿತು. ಉತ್ತಮ ಆಡಳಿತಕ್ಕಾಗಿ ಆಡಳಿತವನ್ನು ವಿಕೇಂದ್ರೀಕರಿಸುವ ದೃಷ್ಟಿಯಿಂದ ಈ ಕ್ರಮ ಜರುಗಿಸಲಾಗಿತ್ತು.

ಆದರೆ ಆದಾಯದ ಮೂಲಗಳ ಅಸಮ ವಿತರಣೆಯು ಉತ್ತರ ಮತ್ತು ಪೂರ್ವ ಮುನ್ಸಿಪಾಲ್‌ಗಳಲ್ಲಿ ಆರ್ಥಿಕ ಮುಗ್ಗಟ್ಟು ಉಂಟುಮಾಡಿತು. ತಮ್ಮ ಸಂಬಳವನ್ನು ಪಾವತಿಸಿದ ಕಾರಣ ಸ್ವಚ್ಛತಾ ಕಾರ್ಮಿಕರು, ಶಿಕ್ಷಕರು, ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ತಾರು ಮುಷ್ಕರಗಳನ್ನು ನಡೆಸಿದ್ದಾರೆ.

ಎಂಸಿಡಿಯನ್ನು ಏಕೀಕರಿಸುವ ನಿರ್ಧಾರ ಬೇಗ ಬರಬೇಕಿತ್ತು. ಈಗಾಗಲೇ ತುಂಬಾ ಹಾನಿಯಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೂರು ವಿಭಜನೆಯು ಆಡಳಿತವನ್ನು ಸುಧಾರಿಸಲಿಲ್ಲ. ವಾಸ್ತವವಾಗಿ ನಾಗರಿಕ ಸಂಸ್ಥೆಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಕೇಜ್ರಿವಾಲ್ ಸರ್ಕಾರವು ಪುರಸಭೆಯ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ದೆಹಲಿಯ ಎಎಪಿಯ ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್, “ಹಣಕಾಸು ಆಯೋಗವು ಯಾವಾಗ ಹಣವನ್ನು ಬಿಡುಗಡೆ ಮಾಡಬೇಕೆಂದು ನಮಗೆ ನಿರ್ದೇಶಿಸುತ್ತದೆ. ಅದರಂತೆ ನಾವು ನಡೆಯುತ್ತಿದ್ದೇವೆ” ಎಂದಿದ್ದಾರೆ.

“ನಾವು ಹಣವನ್ನು ತಡೆಹಿಡಿದಿದ್ದೇವೆ ಎಂಬುದನ್ನು ಸಾಬೀತುಪಡಿಸಲು ಬಿಜೆಪಿ ಬಳಿ ಯಾವುದೇ ದಾಖಲೆಗಳಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಮೂರು ಮುನ್ಸಿಪಲ್‌ಗಳನ್ನು ಒಂದುಗೂಡಿಸುವ ಯೋಜನೆ ಮತ್ತು ಎಂಸಿಡಿ ಚುನಾವಣೆಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪಾಠಕ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ದೆಹಲಿ ಅಷ್ಟು ದೊಡ್ಡ ರಾಜ್ಯವಲ್ಲ. ಇದು ಸಾಕಷ್ಟು ಚಿಕ್ಕದಾಗಿದ್ದು, 272 ವಾರ್ಡ್‌ಗಳಲ್ಲಿ ಆಡಳಿತ ನಡೆಸುವುದು ಅಷ್ಟು ಕಷ್ಟವಲ್ಲ. ಬಿಜೆಪಿಯು ಚುನಾವಣೆಯಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ, ಮುನ್ಸಿಪಲ್‌ಗಳನ್ನು ಒಗ್ಗೂಡಿಸುವ ನೆಪವನ್ನು ಮುಂದೊಡ್ಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಅವರು, “ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಮೂರು ಪಟ್ಟು ಹೆಚ್ಚಿಸಬಹುದಾದರೆ, ಎಂಸಿಡಿ ಬಜೆಟ್ ಏಕೆ ಹೆಚ್ಚಾಗುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕಸ ವಿಲೇವಾರಿ, ಬಿಡಾಡಿ ಜಾನುವಾರುಗಳು, ದುರ್ವಾಸನೆ ಮತ್ತು ಚರಂಡಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಾಗರಿಕರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಪಾಠಕ್ ಎಚ್ಚರಿಸಿದ್ದಾರೆ.

“ಸುತ್ತಲೂ ಕಸದ ಬೆಟ್ಟಗಳು, ತುಂಬಿ ಹರಿಯುವ ಚರಂಡಿಗಳು… ಇದು ದೆಹಲಿಯ ಜನರಿಗೆ ಮಾಡುತ್ತಿರುವ ಅವಮಾನ. ಒಬ್ಬರ ಮನೆ ಒಳಗೆ ಎಷ್ಟೇ ಸುಂದರವಾಗಿದ್ದರೂ, ಹೊರಗೆ ಒಂದು ಹೆಜ್ಜೆ ಇರಿಸಿದಾಗ ಮನಸ್ಥಿತಿ ಹಾಳಾಗುತ್ತಿದೆ” ಎಂದಿದ್ದಾರೆ.

ಭ್ರಷ್ಟ ಎಂಸಿಡಿಯಿಂದಾಗಿ ದೆಹಲಿಯಲ್ಲಿ ಭೂ ಮಾಫಿಯಾ ಇದೆ. ದೆಹಲಿಯ 80% ರಷ್ಟು ಅನಧಿಕೃತ ಕಾಲೋನಿಗಳಲ್ಲಿ ಜನರು ವಾಸುತ್ತಿದ್ದಾರೆ. ನೈರ್ಮಲ್ಯ ಕಾಪಾಡುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಿದೆ.

ಬಿಜೆಪಿಯನ್ನು ಮುನ್ಸಿಪಾಲ್‌ ಚುನಾವಣೆಯಲ್ಲಿ ಎಎಪಿ ಬಗ್ಗುಬಡಿಯಲಿದೆ ಎಂದು ಪಾಠಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಚುನಾವಣೆ ಏಕೆ ವಿಳಂಬವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಏಕೀಕರಣ ಯೋಜನೆಯು ಎಲ್ಲಿಂದ ಹುಟ್ಟಿಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಅಭೂತಪೂರ್ವ ಗೆಲುವು ಪಡೆದಿದ್ದು, ಹೀಗಾಗಿ ಚುನಾವಣೆಯನ್ನು ವಿಳಂಬ ಮಾಡುವಂತೆ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಎಎಪಿ ಮೂಲಗಳು ಆರೋಪಿಸಿವೆ.

ಹಿರಿಯ ಎಎಪಿ ನಾಯಕ ಗೋಪಾಲ್ ರೈ, “ಪಂಜಾಬ್‌ನಲ್ಲಿ ನಮ್ಮ ಪ್ರಚಂಡ ವಿಜಯದ ನಂತರ ದೆಹಲಿ ಮುನ್ಸಿಪಲ್‌ಗಳ ಚುನಾವಣೆಗಳನ್ನು ನಡೆಸುವುದಕ್ಕಾಗಿ ನಾವು ಹೋರಾಟ ನಡೆಸುವ ಅಗತ್ಯವಿದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಕುಟುಕಿದ್ದಾರೆ.

ಆದರೆ ಬಿಜೆಪಿಗೆ ಚುನಾವಣೆಯ ಭಯವಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ಮದ್ಯ ನೀತಿಯಿಂದಾಗಿ ಜನರಲ್ಲಿ ವ್ಯಾಪಕ ಅಸಮಾಧಾನ ಇರುವುದರಿಂದ ಚುನಾವಣೆಯ ಭಯವಿದೆ” ಎಂದು ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಕೇಜ್ರಿವಾಲ್ ಅವರ ಅರಾಜಕವಾದಿ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವರದಿ: ದಿ ವೈರ್‌


ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...