Homeಮುಖಪುಟಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಎಲ್ಲ ಆದೇಶಗಳು ವೈರಸ್‌ ವಿರುದ್ಧ ಹೋರಾಡುತ್ತಿವೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಗಿಂತ ಆರೋಗ್ಯ ವ್ಯವಸ್ಥೆ ಸರಿಯಿಲ್ಲದೇ ಸಾವನ್ನಪ್ಪುವವರ ಸಂಖ್ಯೆ ದೊಡ್ಡದಿದೆ. ಆಕ್ಸಿಜನ್, ಬೆಡ್ ಕೊರತೆಯಿಂದ ಸಾವನ್ನಪ್ಪಿದವರೇ ಹೆಚ್ಚು. ಇದರ ನಡುವೆಯೇ ಕೊರೊನಾಗೆ ಹೆದರಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಕೊರೊನಾ ಸೋಂಕಿಗೆ ಒಳಗಾಗಬಹುದೆಂಬ ಭಯದಿಂದ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವಡ್ಡೇಗೇರಿ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಪ್ರತಾಪ್ (42), ಅವರ ಪತ್ನಿ ಹೇಮಲತಾ (36), ಮಗ ಜಯಂತ್ (17) ಮತ್ತು ಮಗಳು ರಿಶಿತಾ (14) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ಪ್ರತಾಪ್ ಟಿವಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಮಗ ಜಯಂತ್ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಗಳು ರಿಶಿತಾ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಬುಧವಾರ (ಜೂನ್ 23) ಬೆಳಿಗ್ಗೆಯಿಂದಲೇ ಮನೆಯಿಂದ ಯಾರೂ ಹೊರಬರದಿದ್ದಾಗ, ಅಕ್ಕ-ಪಕ್ಕದವರು ಮನೆಯ ಬಳಿ ಹೋಗಿ ಬಾಗಿಲು ತಟ್ಟಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಾಗಿಲು ಮುರಿದು ಮನೆಯೊಳಗೆ ಬಂದಾಗ, ಈ ನಾಲ್ವರೂ ನೆಲದ ಮೇಲೆ ನಿರ್ಜೀವವಾಗಿ ಮಲಗಿರುವುದನ್ನು ನೋಡಿದ್ದಾರೆ. ಜೊತೆಗೆ ಮನೆಯಲ್ಲಿ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಕೊರೊನಾ ಕಾರಣದಿಂದಾಗಿ ತಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಸಾವುಗಳ ಬಗ್ಗೆ ಕೇಳಿ ಕೇಳಿ ಒತ್ತಡಕ್ಕೆ ಒಳಗಾಗಿದ್ದೇವೆ. ನಮಗೂ ಕೊರೊನಾ ಸೋಂಕು ಬರಬಹುದು ಎಂಬ ಭಯವಾಗುತ್ತಿದ್ದೆ ಎಂಬ ಅತಂಕವಿದೆ ಎಂದು ಬರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...