Homeಕರ್ನಾಟಕಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

- Advertisement -
- Advertisement -

ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಕಂದಾಯ ಸಚಿವಾಯಲ ಗುರುವಾರ ಹೇಳಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಫೆಬ್ರವರಿಯಲ್ಲಿ

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ. ಫೆಬ್ರವರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಜಲಾಶಯಗಳಲ್ಲಿನ ನೀರಿನ ಮಟ್ಟ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಉಪ ಸಮಿತಿಯಲ್ಲಿ ಕೂಲಂಕುಶವಾಗಿ ಪರಿಶೀಲಿಸಲಾಯಿತು. ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದ್ದಾರೆ. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅಗತ್ಯವಿರುವ ಜಿಲ್ಲೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವರ ಸಂಪುಟ ಉಪಸಮಿತಿ ಸಭೆಯನ್ನು ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು ರೂ.488.30 ಕೋಟಿಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದಿದ್ದಾರೆ.

ಇದನ್ನೂಓದಿ:  ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...