Homeಕರ್ನಾಟಕಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

- Advertisement -
- Advertisement -

ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಕಂದಾಯ ಸಚಿವಾಯಲ ಗುರುವಾರ ಹೇಳಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಫೆಬ್ರವರಿಯಲ್ಲಿ

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ. ಫೆಬ್ರವರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಜಲಾಶಯಗಳಲ್ಲಿನ ನೀರಿನ ಮಟ್ಟ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಉಪ ಸಮಿತಿಯಲ್ಲಿ ಕೂಲಂಕುಶವಾಗಿ ಪರಿಶೀಲಿಸಲಾಯಿತು. ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದ್ದಾರೆ. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅಗತ್ಯವಿರುವ ಜಿಲ್ಲೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವರ ಸಂಪುಟ ಉಪಸಮಿತಿ ಸಭೆಯನ್ನು ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು ರೂ.488.30 ಕೋಟಿಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದಿದ್ದಾರೆ.

ಇದನ್ನೂಓದಿ:  ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...