Homeಮುಖಪುಟಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಫೆಡೆರಲ್ ಫ್ರಂಟ್ ಸ್ಥಾಪಿಸಲು ಕಳೆದ ವರ್ಷದಿಂದ ಯತ್ನಿಸುತ್ತಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಈಗ ಮತ್ತೆ ಫೀಲ್ಡಿಗೆ ಇಳಿದಿದ್ದಾರೆ. ಕಾಂಗ್ರೆಸ್‍ನ ಬಾಹ್ಯ ಬೆಂಬಲದೊಂದಿಗೆ ಫೆಡೆರಲ್ ಫ್ರಂಟ್ ಸರ್ಕಾರ ಸ್ಥಾಪಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ.

ಅಬಿಲ್ ರಸೂಲ್ ಖಾನ್

ಲೋಕಸಭಾ ಚುನಾವಣಾ ಫಲಿತಾಂಶ ಹತ್ತಿರವಾಗುತ್ತಿದ್ದಂತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ತಂತ್ರ, ಮಾತುಕತೆಗಳು ತಣ್ಣಗೆ ಶುರುವಾಗಿವೆ. ಅದರಲ್ಲಿ ಈಗ ಚುರುಕಾಗಿರುವುದು ಉದ್ದೇಶಿತ ಫೆಡೆರಲ್ ಫ್ರಂಟ್. ಮಂಗಳವಾರವಷ್ಟೇ ಈ ಕುರಿತು ಮಾತಾಡಿರುವ ಟಿಆರ್‍ಎಸ್ ಪಕ್ಷದ ವಕ್ತಾರ ಅಬಿಲ್ ರಸೂಲ್ ಖಾನ್ ಐಎಎನ್‍ಎಸ್ ಸುದ್ದಿಸಂಸ್ಥೆಗೆ ಈ ವಿಷಯ ತಿಳಿಸಿದ್ದಾರೆ.

ಉದ್ದೇಶಿತ ಫೆಡೆರಲ್ ಫ್ರಂಟ್ ಖಚಿತವಾಗಿ ಅಧಿಕಾರಕ್ಕೆ ಬರಲಿದೆ ಎಂದಿರುವ ಅವರು, ಒಂದು ವೇಳೆ ಬಹುಮತಕ್ಕೆ ತೊಂದರೆ ಆದರೆ, ಕಾಂಗ್ರೆಸ್‍ನ ಬಾಹ್ಯ ಬೆಂಬಲ ಕೊಡಬಹುದು ಎಂದು ಹೇಳುವ ಮೂಲಕ ಟಿಆರ್‍ಎಸ್ ನಾಯಕ ಚಂದ್ರಶೇಖರ್‍ರಾವ್ ನಡೆಸುತ್ತಿರುವ ಮಾತುಕತೆಗಳ ಹಿಂದಿನ ಉದ್ದೇಶವನ್ನು ತೆರೆದಿಟ್ಟಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಚಂದ್ರಶೇಖರ್‍ರಾವ್ ಫೆಡೆರಲ್ ಕುರಿತಂತೆ ಡಿಎಂಕೆ ನಾಯಕ ಸ್ಟಾಲಿನ್ ಮತ್ತು ಕೇರಳದ ಕಮ್ಯುನಿಸ್ಟ್ ನಾಯಕ, ಮುಖ್ಯಮಂತ್ರಿ ಪಣರಾಯಿ ವಿಜಯನ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈಗವರು ಬಿಎಸ್‍ಪಿಯ ಮಾಯಾವತಿ, ಎಸ್‍ಪಿಯ ಅಖಿಲೇಶ್ ಸಿಂಗ್ ಯಾದವ್, ತೃಣಮೂಲ ಕಾಂಗ್ರೆಸ್‍ನ ಮಮತಾ ಬ್ಯಾನರ್ಜಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಆಂಧ್ರದ ವೈಎಸ್‍ಆರ್ ಕಾಂಗ್ರೆಸ್‍ನ ಜಗನ್‍ರೆಡ್ಡಿ ಈ ಹಿಂದೆಯೇ ಫೆಡೆರಲ್ ಫ್ರಂಟ್ ವಿಚಾರಕ್ಕೆ ಸಮ್ಮತಿ ನೀಡಿದ್ದರು.

ಈ ಎಲ್ಲ ಪಕ್ಷಗಳ ಜೊತೆಗೆ ಇನ್ನು ಹಲವಾರು ಸಣ್ಣಪುಟ್ಟ ಪಕ್ಷಗಳು ಸೇರಿದರೆ ಫೆಡೆರಲ್ ಫ್ರಂಟ್ ಒಂದು ಗಮನಾರ್ಹ ಮಟ್ಟವನ್ನು ತಲುಪಲಿದ್ದು, ಕಾಂಗ್ರೆಸ್ ಬೆಂಬಲ ಸಿಕ್ಕರೆ ಸರ್ಕಾರ ರಚಿಸುವ ವಿಶ್ವಾಸವನ್ನು ಫ್ರಂಟ್ ಹೊಂದಿದೆ ಎಂದು ಟಿಆರ್‍ಎಸ್ ವಕ್ತಾರ ರಸೂಲ್ ಖಾನ್ ತಿಳಿಸಿದ್ದಾರೆ.
ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ. ಎನ್‍ಡಿಎ ಮತ್ತು ಯುಪಿಎ ಎರಡಕ್ಕೂ ಬಹುಮತದ ಕೊರತೆಯಾದರೆ ಫೆಡೆರಲ್ ಫ್ರಂಟ್‍ಗೆ ಬಂಪರ್ ಹೊಡೆಯಲಿದೆ.

ಆದರೆ, ಮೇ 19ರ ಸಂಜೆ ಬರಲಿರುವ ಚುನಾವಣೋತ್ತರ ಸಮೀಕ್ಷೆಗಳ ಪ್ರಸಾರದಂತಹ ರಾಜಕೀಯ ಚಟುವಟಿಕೆ ಇನ್ನಷ್ಟು ಗರಿಗೆದರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...