Homeಮುಖಪುಟಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಫೆಡೆರಲ್ ಫ್ರಂಟ್ ಸ್ಥಾಪಿಸಲು ಕಳೆದ ವರ್ಷದಿಂದ ಯತ್ನಿಸುತ್ತಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಈಗ ಮತ್ತೆ ಫೀಲ್ಡಿಗೆ ಇಳಿದಿದ್ದಾರೆ. ಕಾಂಗ್ರೆಸ್‍ನ ಬಾಹ್ಯ ಬೆಂಬಲದೊಂದಿಗೆ ಫೆಡೆರಲ್ ಫ್ರಂಟ್ ಸರ್ಕಾರ ಸ್ಥಾಪಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ.

ಅಬಿಲ್ ರಸೂಲ್ ಖಾನ್

ಲೋಕಸಭಾ ಚುನಾವಣಾ ಫಲಿತಾಂಶ ಹತ್ತಿರವಾಗುತ್ತಿದ್ದಂತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ತಂತ್ರ, ಮಾತುಕತೆಗಳು ತಣ್ಣಗೆ ಶುರುವಾಗಿವೆ. ಅದರಲ್ಲಿ ಈಗ ಚುರುಕಾಗಿರುವುದು ಉದ್ದೇಶಿತ ಫೆಡೆರಲ್ ಫ್ರಂಟ್. ಮಂಗಳವಾರವಷ್ಟೇ ಈ ಕುರಿತು ಮಾತಾಡಿರುವ ಟಿಆರ್‍ಎಸ್ ಪಕ್ಷದ ವಕ್ತಾರ ಅಬಿಲ್ ರಸೂಲ್ ಖಾನ್ ಐಎಎನ್‍ಎಸ್ ಸುದ್ದಿಸಂಸ್ಥೆಗೆ ಈ ವಿಷಯ ತಿಳಿಸಿದ್ದಾರೆ.

ಉದ್ದೇಶಿತ ಫೆಡೆರಲ್ ಫ್ರಂಟ್ ಖಚಿತವಾಗಿ ಅಧಿಕಾರಕ್ಕೆ ಬರಲಿದೆ ಎಂದಿರುವ ಅವರು, ಒಂದು ವೇಳೆ ಬಹುಮತಕ್ಕೆ ತೊಂದರೆ ಆದರೆ, ಕಾಂಗ್ರೆಸ್‍ನ ಬಾಹ್ಯ ಬೆಂಬಲ ಕೊಡಬಹುದು ಎಂದು ಹೇಳುವ ಮೂಲಕ ಟಿಆರ್‍ಎಸ್ ನಾಯಕ ಚಂದ್ರಶೇಖರ್‍ರಾವ್ ನಡೆಸುತ್ತಿರುವ ಮಾತುಕತೆಗಳ ಹಿಂದಿನ ಉದ್ದೇಶವನ್ನು ತೆರೆದಿಟ್ಟಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಚಂದ್ರಶೇಖರ್‍ರಾವ್ ಫೆಡೆರಲ್ ಕುರಿತಂತೆ ಡಿಎಂಕೆ ನಾಯಕ ಸ್ಟಾಲಿನ್ ಮತ್ತು ಕೇರಳದ ಕಮ್ಯುನಿಸ್ಟ್ ನಾಯಕ, ಮುಖ್ಯಮಂತ್ರಿ ಪಣರಾಯಿ ವಿಜಯನ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈಗವರು ಬಿಎಸ್‍ಪಿಯ ಮಾಯಾವತಿ, ಎಸ್‍ಪಿಯ ಅಖಿಲೇಶ್ ಸಿಂಗ್ ಯಾದವ್, ತೃಣಮೂಲ ಕಾಂಗ್ರೆಸ್‍ನ ಮಮತಾ ಬ್ಯಾನರ್ಜಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಆಂಧ್ರದ ವೈಎಸ್‍ಆರ್ ಕಾಂಗ್ರೆಸ್‍ನ ಜಗನ್‍ರೆಡ್ಡಿ ಈ ಹಿಂದೆಯೇ ಫೆಡೆರಲ್ ಫ್ರಂಟ್ ವಿಚಾರಕ್ಕೆ ಸಮ್ಮತಿ ನೀಡಿದ್ದರು.

ಈ ಎಲ್ಲ ಪಕ್ಷಗಳ ಜೊತೆಗೆ ಇನ್ನು ಹಲವಾರು ಸಣ್ಣಪುಟ್ಟ ಪಕ್ಷಗಳು ಸೇರಿದರೆ ಫೆಡೆರಲ್ ಫ್ರಂಟ್ ಒಂದು ಗಮನಾರ್ಹ ಮಟ್ಟವನ್ನು ತಲುಪಲಿದ್ದು, ಕಾಂಗ್ರೆಸ್ ಬೆಂಬಲ ಸಿಕ್ಕರೆ ಸರ್ಕಾರ ರಚಿಸುವ ವಿಶ್ವಾಸವನ್ನು ಫ್ರಂಟ್ ಹೊಂದಿದೆ ಎಂದು ಟಿಆರ್‍ಎಸ್ ವಕ್ತಾರ ರಸೂಲ್ ಖಾನ್ ತಿಳಿಸಿದ್ದಾರೆ.
ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ. ಎನ್‍ಡಿಎ ಮತ್ತು ಯುಪಿಎ ಎರಡಕ್ಕೂ ಬಹುಮತದ ಕೊರತೆಯಾದರೆ ಫೆಡೆರಲ್ ಫ್ರಂಟ್‍ಗೆ ಬಂಪರ್ ಹೊಡೆಯಲಿದೆ.

ಆದರೆ, ಮೇ 19ರ ಸಂಜೆ ಬರಲಿರುವ ಚುನಾವಣೋತ್ತರ ಸಮೀಕ್ಷೆಗಳ ಪ್ರಸಾರದಂತಹ ರಾಜಕೀಯ ಚಟುವಟಿಕೆ ಇನ್ನಷ್ಟು ಗರಿಗೆದರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...