Homeಮುಖಪುಟಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಕಾಂಗ್ರೆಸ್ ನ ಬಾಹ್ಯ ಬೆಂಬಲದ ನಿರೀಕ್ಷೆಯಲ್ಲಿ ಫೆಡೆರಲ್ ಫ್ರಂಟ್

ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಫೆಡೆರಲ್ ಫ್ರಂಟ್ ಸ್ಥಾಪಿಸಲು ಕಳೆದ ವರ್ಷದಿಂದ ಯತ್ನಿಸುತ್ತಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಈಗ ಮತ್ತೆ ಫೀಲ್ಡಿಗೆ ಇಳಿದಿದ್ದಾರೆ. ಕಾಂಗ್ರೆಸ್‍ನ ಬಾಹ್ಯ ಬೆಂಬಲದೊಂದಿಗೆ ಫೆಡೆರಲ್ ಫ್ರಂಟ್ ಸರ್ಕಾರ ಸ್ಥಾಪಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ.

ಅಬಿಲ್ ರಸೂಲ್ ಖಾನ್

ಲೋಕಸಭಾ ಚುನಾವಣಾ ಫಲಿತಾಂಶ ಹತ್ತಿರವಾಗುತ್ತಿದ್ದಂತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ತಂತ್ರ, ಮಾತುಕತೆಗಳು ತಣ್ಣಗೆ ಶುರುವಾಗಿವೆ. ಅದರಲ್ಲಿ ಈಗ ಚುರುಕಾಗಿರುವುದು ಉದ್ದೇಶಿತ ಫೆಡೆರಲ್ ಫ್ರಂಟ್. ಮಂಗಳವಾರವಷ್ಟೇ ಈ ಕುರಿತು ಮಾತಾಡಿರುವ ಟಿಆರ್‍ಎಸ್ ಪಕ್ಷದ ವಕ್ತಾರ ಅಬಿಲ್ ರಸೂಲ್ ಖಾನ್ ಐಎಎನ್‍ಎಸ್ ಸುದ್ದಿಸಂಸ್ಥೆಗೆ ಈ ವಿಷಯ ತಿಳಿಸಿದ್ದಾರೆ.

ಉದ್ದೇಶಿತ ಫೆಡೆರಲ್ ಫ್ರಂಟ್ ಖಚಿತವಾಗಿ ಅಧಿಕಾರಕ್ಕೆ ಬರಲಿದೆ ಎಂದಿರುವ ಅವರು, ಒಂದು ವೇಳೆ ಬಹುಮತಕ್ಕೆ ತೊಂದರೆ ಆದರೆ, ಕಾಂಗ್ರೆಸ್‍ನ ಬಾಹ್ಯ ಬೆಂಬಲ ಕೊಡಬಹುದು ಎಂದು ಹೇಳುವ ಮೂಲಕ ಟಿಆರ್‍ಎಸ್ ನಾಯಕ ಚಂದ್ರಶೇಖರ್‍ರಾವ್ ನಡೆಸುತ್ತಿರುವ ಮಾತುಕತೆಗಳ ಹಿಂದಿನ ಉದ್ದೇಶವನ್ನು ತೆರೆದಿಟ್ಟಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಚಂದ್ರಶೇಖರ್‍ರಾವ್ ಫೆಡೆರಲ್ ಕುರಿತಂತೆ ಡಿಎಂಕೆ ನಾಯಕ ಸ್ಟಾಲಿನ್ ಮತ್ತು ಕೇರಳದ ಕಮ್ಯುನಿಸ್ಟ್ ನಾಯಕ, ಮುಖ್ಯಮಂತ್ರಿ ಪಣರಾಯಿ ವಿಜಯನ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈಗವರು ಬಿಎಸ್‍ಪಿಯ ಮಾಯಾವತಿ, ಎಸ್‍ಪಿಯ ಅಖಿಲೇಶ್ ಸಿಂಗ್ ಯಾದವ್, ತೃಣಮೂಲ ಕಾಂಗ್ರೆಸ್‍ನ ಮಮತಾ ಬ್ಯಾನರ್ಜಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಆಂಧ್ರದ ವೈಎಸ್‍ಆರ್ ಕಾಂಗ್ರೆಸ್‍ನ ಜಗನ್‍ರೆಡ್ಡಿ ಈ ಹಿಂದೆಯೇ ಫೆಡೆರಲ್ ಫ್ರಂಟ್ ವಿಚಾರಕ್ಕೆ ಸಮ್ಮತಿ ನೀಡಿದ್ದರು.

ಈ ಎಲ್ಲ ಪಕ್ಷಗಳ ಜೊತೆಗೆ ಇನ್ನು ಹಲವಾರು ಸಣ್ಣಪುಟ್ಟ ಪಕ್ಷಗಳು ಸೇರಿದರೆ ಫೆಡೆರಲ್ ಫ್ರಂಟ್ ಒಂದು ಗಮನಾರ್ಹ ಮಟ್ಟವನ್ನು ತಲುಪಲಿದ್ದು, ಕಾಂಗ್ರೆಸ್ ಬೆಂಬಲ ಸಿಕ್ಕರೆ ಸರ್ಕಾರ ರಚಿಸುವ ವಿಶ್ವಾಸವನ್ನು ಫ್ರಂಟ್ ಹೊಂದಿದೆ ಎಂದು ಟಿಆರ್‍ಎಸ್ ವಕ್ತಾರ ರಸೂಲ್ ಖಾನ್ ತಿಳಿಸಿದ್ದಾರೆ.
ಯಾವ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಅಥವಾ ಬೆಂಬಲ ಪಡೆಯುವ ಪ್ರಮೇಯವೇ ಇಲ್ಲ ಎಂಬುದನ್ನೂ ಅವರು ಸ್ಪಷಟ್ಪಡಿಸಿದ್ದಾರೆ. ಎನ್‍ಡಿಎ ಮತ್ತು ಯುಪಿಎ ಎರಡಕ್ಕೂ ಬಹುಮತದ ಕೊರತೆಯಾದರೆ ಫೆಡೆರಲ್ ಫ್ರಂಟ್‍ಗೆ ಬಂಪರ್ ಹೊಡೆಯಲಿದೆ.

ಆದರೆ, ಮೇ 19ರ ಸಂಜೆ ಬರಲಿರುವ ಚುನಾವಣೋತ್ತರ ಸಮೀಕ್ಷೆಗಳ ಪ್ರಸಾರದಂತಹ ರಾಜಕೀಯ ಚಟುವಟಿಕೆ ಇನ್ನಷ್ಟು ಗರಿಗೆದರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...