Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...