Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...